Viral Video: ನಿರೂಪಕಿ ಕತ್ತಿಗೆ ಬಲವಂತವಾಗಿ ಹಾರ ಹಾಕಿದ ನಟ; ಕಿರುಕುಳ ಎಂದ ನೆಟ್ಟಿಗರು


Team Udayavani, Sep 20, 2023, 1:19 PM IST

Viral Video: ನಿರೂಪಕಿ ಕತ್ತಿಗೆ ಬಲವಂತವಾಗಿ ಹಾರ ಹಾಕಿದ ನಟ; ಕಿರುಕುಳ ಎಂದ ನೆಟ್ಟಿಗರು

ಚೆನ್ನೈ: ಕಾರ್ಯಕ್ರಮ ನಡೆಸಿಕೊಡುತ್ತಿದ್ದ ನಿರೂಪಕಿ ಜೊತೆ ವೇದಿಕೆಯಲ್ಲಿ ಅನುಚಿತವಾಗಿ ವರ್ತಿಸಿದ ನಟನ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ. ಕಾಲಿವುಡ್‌ ಸಿನಿಮಾರಂಗದ ಬಹುತೇಕ ಪ್ರೇಕ್ಷಕರಿಗೆ ಹಾಗೂ ಕಲಾವಿದರಿಗೆ ಕೂಲ್‌ ಸುರೇಶ್‌ ಅವರ ಗುರುತು ಪರಿಚಯವಿದೆ. ಯೂಟ್ಯೂಬ್ ನಲ್ಲಿ ಸಂಚಲನ ಸೃಷ್ಟಿಸಿರುವ ಸುರೇಶ್‌ ಮತ್ತೆ ಸುದ್ದಿಯಾಗಿದ್ದಾರೆ.

ಯಾರು ಈ ಕೂಲ್‌ ಸುರೇಶ್? ಕೆಲವರು ಥಿಯೇಟರ್‌ ನಲ್ಲಿ ಸಿನಿಮಾ ವೀಕ್ಷಿಸಿದ ಬಳಿಕ ಹೊರಗೆ ಬಂದು ನಾಲ್ಕೈದು ಡೈಲಾಗ್ಸ್‌ ಗಳನ್ನು ಹೊಡೆದು ಫೇಮಸ್‌ ಆಗುತ್ತಾರೆ. ಜನರ ಗಮನ ಸೆಳೆದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಾರೆ. ಅಂಥವರಲ್ಲಿ ಒಬ್ಬರು ಈ ಕೂಲ್‌ ಸುರೇಶ್.‌ ಸಿನಿಮಾವನ್ನು ನೋಡಿದ ಬಳಿಕ ಅದರ ಪಾಸಿಟಿವ್‌ – ನೆಗೆಟಿವ್‌ ಗಳನ್ನು ಒಂದು ಬಗೆಯಲ್ಲಿ ವ್ಯಂಗ್ಯವಾಗಿ ಹೇಳುವ ಸುರೇಶ್‌ ನಟ ಸಿಂಬು ಅವರ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ.

ಥಿಯೇಟರ್‌ ಮುಂದೆ ಸಿನಿಮಾಗಳ ಮಾತನಾಡಿಕೊಂಡೇ ಫೇಮಸ್‌ ಆದ ಸುರೇಶ್ ಇತ್ತೀಚೆಗಷ್ಟೇ ಸಿಂಬು ಅಭಿನಯದ ‘ಬಂದು ತಾನಿಂದು ಕಾದು’ ಚಿತ್ರಕ್ಕೆ ಮಾಡಿದ್ದ ಪ್ರಚಾರ ಮಾಡಿದ್ದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: Shivamogga: ಕಾಂಗ್ರೆಸ್ ನ ಗುಂಪುಗಾರಿಕೆಯೇ ಅವರ 100 ದಿನದ ಸಾಧನೆ : ಈಶ್ವರಪ್ಪ ಕಿಡಿ

ಅವರ ಖ್ಯಾತಿಯಿಂದಲೇ ಕಾಲಿವುಡ್‌ ಸಿನಿಮಾಗಳಾದ ‘ಕಾಖ ಕಾಖಾ’, ‘ಮಾಚಿ’ ಮತ್ತು ‘ಕಾದಲ್ ಅಜಿವತಿಲ್ಲೈ’ ಸಿನಿಮಾಗಳಲ್ಲಿ  ಕೂಲ್ ಸುರೇಶ್ ತಮಿಳು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಸಿಕೊಂಡಿದ್ದಾರೆ.

ಕೂಲ್‌ ಸುರೇಶ್‌ ಅವರನ್ನು ಅನೇಕ ಸಿನಿಮಾ ತಂಡದವರು ಪ್ರಚಾರ ಮಾಡಲು ಆಹ್ವಾನಿಸುತ್ತಾರೆ. ಬುಧವಾರ (ಸೆ.20 ರಂದು) ‘ಸರಕ್ಕುʼ ಎನ್ನುವ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ ವೇಳೆ ಅವರು ನಿರೂಪಕಿಯೊಂದಿಗೆ ವರ್ತಿಸಿದ ರೀತಿಗೆ ನೆಟ್ಟಿಗರು ಗರಂ ಆಗಿದ್ದಾರೆ.

ಈ ಕಾರ್ಯಕ್ರಮದಲ್ಲಿ ನಿರೂಪಕಿ ವೇದಿಕೆಗೆ ಕೂಲ್‌ ಸುರೇಶ್‌ ಅವರನ್ನು ಆಹ್ವಾನಿಸಿದ್ದಾರೆ. ಈ ವೇಳೆ ಸುರೇಶ್‌ ತಮ್ಮ ಕೈಯಲ್ಲಿದ್ದ ಹಾರವನ್ನು ಏಕಾಏಕಿ ಬಲವಂತವಾಗಿ ನಿರೂಪಕಿಯ ಕತ್ತಿಗೆ ಹಾಕಿದ್ದಾರೆ. ಇದರಿಂದ ನಿರೂಪಕಿ ಎಲ್ಲರ ಎದುರು ಮುಜುಗರಕ್ಕೆ ಒಳಗಾಗಿದ್ದು,ಸಿಟ್ಟಾಗಿದ್ದಾರೆ. ಹಾರವನ್ನು ತೆಗೆದು ನಿರೂಪಕಿ ಬಿಸಾಕಿದ್ದಾರೆ.

ಆ ಬಳಿಕ ಈ ಸಮಾರಂಭದಲ್ಲಿ ನಿರೂಪಕಿಯ ಕೆಲಸವನ್ನು ಪ್ರಶಂಸಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಮಜುಗರದ ಸನ್ನಿವೇಶವನ್ನು ಅರಿತುಕೊಂಡ ನಟ ಮನ್ಸೂರ್ ಅಲಿಖಾನ್ ವೇದಿಕೆಗೆ ಬಂದು ಸುರೇಶ್ ಅವರ ಪರವಾಗಿ ನಿರೂಪಕಿ ಬಳಿ ಕ್ಷಮೆಯಾಚಿಸಿದ್ದಾರೆ. ಸುರೇಶ್‌ ಅವರ ಬಳಿ ಕ್ಷಮೆ ಕೇಳುವಂತೆ ಕೇಳಿದ್ದಾರೆ. ಆದರೆ ಸುರೇಶ್‌ ಕ್ಷಮೆ ಕೇಳುವ ಬದಲು ನಾನು ಇದನ್ನು  ‘ಕಂಟೆಂಟ್’ಗಾಗಿ ಮಾಡಿದ್ದೇನೆ ಎಂದಿದ್ದಾರೆ.

ಕೂಲ್ ಸುರೇಶ್ ಅವರ ಈ ವರ್ತನೆಗೆ ನೆಟ್ಟಿಗರು ಗರಂ ಆಗಿದ್ದು, ಇದು ನಿಂದನೆ ಮತ್ತು ಕಿರುಕುಳ ಎಂದು ನಟನ ವರ್ತನೆಯನ್ನು ಖಂಡಿಸಿದ್ದಾರೆ.

ಇನ್ನು ಮುಂದೆ ಇಂತಹ ಕಾರ್ಯಕ್ರಮಗಳಿಗೆ ಅವರನ್ನು ಆಹ್ವಾನಿಸಬೇಡಿ ಎಂದು ಹಲವು ಬಳಕೆದಾರರು ಮತ್ತು ಪತ್ರಕರ್ತರು ಸಿನಿಮಾ ನಿರ್ಮಾಪಕರಿಗೆ ಮನವಿ ಮಾಡಿದ್ದಾರೆ.

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.