Viral Video: ನಿರೂಪಕಿ ಕತ್ತಿಗೆ ಬಲವಂತವಾಗಿ ಹಾರ ಹಾಕಿದ ನಟ; ಕಿರುಕುಳ ಎಂದ ನೆಟ್ಟಿಗರು


Team Udayavani, Sep 20, 2023, 1:19 PM IST

Viral Video: ನಿರೂಪಕಿ ಕತ್ತಿಗೆ ಬಲವಂತವಾಗಿ ಹಾರ ಹಾಕಿದ ನಟ; ಕಿರುಕುಳ ಎಂದ ನೆಟ್ಟಿಗರು

ಚೆನ್ನೈ: ಕಾರ್ಯಕ್ರಮ ನಡೆಸಿಕೊಡುತ್ತಿದ್ದ ನಿರೂಪಕಿ ಜೊತೆ ವೇದಿಕೆಯಲ್ಲಿ ಅನುಚಿತವಾಗಿ ವರ್ತಿಸಿದ ನಟನ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ. ಕಾಲಿವುಡ್‌ ಸಿನಿಮಾರಂಗದ ಬಹುತೇಕ ಪ್ರೇಕ್ಷಕರಿಗೆ ಹಾಗೂ ಕಲಾವಿದರಿಗೆ ಕೂಲ್‌ ಸುರೇಶ್‌ ಅವರ ಗುರುತು ಪರಿಚಯವಿದೆ. ಯೂಟ್ಯೂಬ್ ನಲ್ಲಿ ಸಂಚಲನ ಸೃಷ್ಟಿಸಿರುವ ಸುರೇಶ್‌ ಮತ್ತೆ ಸುದ್ದಿಯಾಗಿದ್ದಾರೆ.

ಯಾರು ಈ ಕೂಲ್‌ ಸುರೇಶ್? ಕೆಲವರು ಥಿಯೇಟರ್‌ ನಲ್ಲಿ ಸಿನಿಮಾ ವೀಕ್ಷಿಸಿದ ಬಳಿಕ ಹೊರಗೆ ಬಂದು ನಾಲ್ಕೈದು ಡೈಲಾಗ್ಸ್‌ ಗಳನ್ನು ಹೊಡೆದು ಫೇಮಸ್‌ ಆಗುತ್ತಾರೆ. ಜನರ ಗಮನ ಸೆಳೆದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಾರೆ. ಅಂಥವರಲ್ಲಿ ಒಬ್ಬರು ಈ ಕೂಲ್‌ ಸುರೇಶ್.‌ ಸಿನಿಮಾವನ್ನು ನೋಡಿದ ಬಳಿಕ ಅದರ ಪಾಸಿಟಿವ್‌ – ನೆಗೆಟಿವ್‌ ಗಳನ್ನು ಒಂದು ಬಗೆಯಲ್ಲಿ ವ್ಯಂಗ್ಯವಾಗಿ ಹೇಳುವ ಸುರೇಶ್‌ ನಟ ಸಿಂಬು ಅವರ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ.

ಥಿಯೇಟರ್‌ ಮುಂದೆ ಸಿನಿಮಾಗಳ ಮಾತನಾಡಿಕೊಂಡೇ ಫೇಮಸ್‌ ಆದ ಸುರೇಶ್ ಇತ್ತೀಚೆಗಷ್ಟೇ ಸಿಂಬು ಅಭಿನಯದ ‘ಬಂದು ತಾನಿಂದು ಕಾದು’ ಚಿತ್ರಕ್ಕೆ ಮಾಡಿದ್ದ ಪ್ರಚಾರ ಮಾಡಿದ್ದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: Shivamogga: ಕಾಂಗ್ರೆಸ್ ನ ಗುಂಪುಗಾರಿಕೆಯೇ ಅವರ 100 ದಿನದ ಸಾಧನೆ : ಈಶ್ವರಪ್ಪ ಕಿಡಿ

ಅವರ ಖ್ಯಾತಿಯಿಂದಲೇ ಕಾಲಿವುಡ್‌ ಸಿನಿಮಾಗಳಾದ ‘ಕಾಖ ಕಾಖಾ’, ‘ಮಾಚಿ’ ಮತ್ತು ‘ಕಾದಲ್ ಅಜಿವತಿಲ್ಲೈ’ ಸಿನಿಮಾಗಳಲ್ಲಿ  ಕೂಲ್ ಸುರೇಶ್ ತಮಿಳು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಸಿಕೊಂಡಿದ್ದಾರೆ.

ಕೂಲ್‌ ಸುರೇಶ್‌ ಅವರನ್ನು ಅನೇಕ ಸಿನಿಮಾ ತಂಡದವರು ಪ್ರಚಾರ ಮಾಡಲು ಆಹ್ವಾನಿಸುತ್ತಾರೆ. ಬುಧವಾರ (ಸೆ.20 ರಂದು) ‘ಸರಕ್ಕುʼ ಎನ್ನುವ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ ವೇಳೆ ಅವರು ನಿರೂಪಕಿಯೊಂದಿಗೆ ವರ್ತಿಸಿದ ರೀತಿಗೆ ನೆಟ್ಟಿಗರು ಗರಂ ಆಗಿದ್ದಾರೆ.

ಈ ಕಾರ್ಯಕ್ರಮದಲ್ಲಿ ನಿರೂಪಕಿ ವೇದಿಕೆಗೆ ಕೂಲ್‌ ಸುರೇಶ್‌ ಅವರನ್ನು ಆಹ್ವಾನಿಸಿದ್ದಾರೆ. ಈ ವೇಳೆ ಸುರೇಶ್‌ ತಮ್ಮ ಕೈಯಲ್ಲಿದ್ದ ಹಾರವನ್ನು ಏಕಾಏಕಿ ಬಲವಂತವಾಗಿ ನಿರೂಪಕಿಯ ಕತ್ತಿಗೆ ಹಾಕಿದ್ದಾರೆ. ಇದರಿಂದ ನಿರೂಪಕಿ ಎಲ್ಲರ ಎದುರು ಮುಜುಗರಕ್ಕೆ ಒಳಗಾಗಿದ್ದು,ಸಿಟ್ಟಾಗಿದ್ದಾರೆ. ಹಾರವನ್ನು ತೆಗೆದು ನಿರೂಪಕಿ ಬಿಸಾಕಿದ್ದಾರೆ.

ಆ ಬಳಿಕ ಈ ಸಮಾರಂಭದಲ್ಲಿ ನಿರೂಪಕಿಯ ಕೆಲಸವನ್ನು ಪ್ರಶಂಸಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಮಜುಗರದ ಸನ್ನಿವೇಶವನ್ನು ಅರಿತುಕೊಂಡ ನಟ ಮನ್ಸೂರ್ ಅಲಿಖಾನ್ ವೇದಿಕೆಗೆ ಬಂದು ಸುರೇಶ್ ಅವರ ಪರವಾಗಿ ನಿರೂಪಕಿ ಬಳಿ ಕ್ಷಮೆಯಾಚಿಸಿದ್ದಾರೆ. ಸುರೇಶ್‌ ಅವರ ಬಳಿ ಕ್ಷಮೆ ಕೇಳುವಂತೆ ಕೇಳಿದ್ದಾರೆ. ಆದರೆ ಸುರೇಶ್‌ ಕ್ಷಮೆ ಕೇಳುವ ಬದಲು ನಾನು ಇದನ್ನು  ‘ಕಂಟೆಂಟ್’ಗಾಗಿ ಮಾಡಿದ್ದೇನೆ ಎಂದಿದ್ದಾರೆ.

ಕೂಲ್ ಸುರೇಶ್ ಅವರ ಈ ವರ್ತನೆಗೆ ನೆಟ್ಟಿಗರು ಗರಂ ಆಗಿದ್ದು, ಇದು ನಿಂದನೆ ಮತ್ತು ಕಿರುಕುಳ ಎಂದು ನಟನ ವರ್ತನೆಯನ್ನು ಖಂಡಿಸಿದ್ದಾರೆ.

ಇನ್ನು ಮುಂದೆ ಇಂತಹ ಕಾರ್ಯಕ್ರಮಗಳಿಗೆ ಅವರನ್ನು ಆಹ್ವಾನಿಸಬೇಡಿ ಎಂದು ಹಲವು ಬಳಕೆದಾರರು ಮತ್ತು ಪತ್ರಕರ್ತರು ಸಿನಿಮಾ ನಿರ್ಮಾಪಕರಿಗೆ ಮನವಿ ಮಾಡಿದ್ದಾರೆ.

 

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.