ಜನ ಅರಿತರೆ ಮಾತ್ರ ಪ್ಲಾಸ್ಟಿಕ್ ಸಂಹಾರ
Team Udayavani, Jun 5, 2019, 12:07 PM IST
“ಪ್ಲಾಸ್ಟಿಕ್ ಮುಕ್ತ ಪರಿಸರದತ್ತ’ ಸರಣಿಯ ಭಾಗವಾಗಿ “ಉದಯವಾಣಿ’ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಟಿ.ವಿ.ರಾಮಚಂದ್ರ ಹಾಗೂ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಅವರು ಪಾಲ್ಗೊಂಡಿದ್ದರು. ಪ್ಲಾಸ್ಟಿಕ್ ಸಮಸ್ಯೆ ಪರಿಹಾರ ಜನಜಾಗೃತಿಯಿಂದ ಮಾತ್ರ ಸಾಧ್ಯ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ, ಆಡಳಿತ ಯಂತ್ರದ ಕ್ರಮಗಳು, ತ್ಯಾಜ್ಯ ವಿಲೇವಾರಿಗೆ ಸಾರ್ವಜನಿಕರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸದಿರುವ ವಿಷಯಗಳ ಮೇಲೆ ಸಂವಾದದಲ್ಲಿ ಅತಿಥಿಗಳು ಬೆಳಕು ಚೆಲ್ಲಿದರು.