111 ಅಡಿ ಎತ್ತರದ ಶಿವಲಿಂಗ; “ಏಶ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌’ನಲ್ಲಿ ದಾಖಲೆ


Team Udayavani, Nov 12, 2019, 5:28 AM IST

11KSDE8A

ಕಾಸರಗೋಡು: ಕೇರಳದ ರಾಜಧಾನಿ ತಿರುವನಂತಪುರ ದನೆಯ್ಯ ಟಿಂಗರ ಚೆಂಗಲ್‌ ಮಹೇಶ್ವರ ಶಿವಪಾರ್ವತಿ ದೇವಸ್ಥಾನದಲ್ಲಿ ನಿರ್ಮಾಣವಾದ 111.2 ಅಡಿ ಎತ್ತರದ ಶಿವಲಿಂಗ ರವಿವಾರ ಲೋಕಾರ್ಪಣೆ ಗೊಂಡಿತು.

ದೇವಸ್ಥಾನದ ಮಠಾಧಿಪತಿ ಸ್ವಾಮಿ ಮಹೇಶ್ವರಾನಂದ ಸರಸ್ವತಿ ಅವರು ಬೃಹತ್‌ ಶಿವಲಿಂಗವನ್ನು ಲೋಕಾರ್ಪಣೆಗೈದರು. ಎತ್ತರ ಹಾಗೂ ವಿಸ್ತಾರದಲ್ಲಿ ಏಶ್ಯಾದಲ್ಲೇ ಅತ್ಯಂತ ಎತ್ತರದ “ಶಿವಲಿಂಗ” ಪ್ರತಿಷ್ಠೆ ಯಾಗಿದೆ ಎಂದು ಏಶ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ. ಗಿನ್ನೆಸ್‌ ಬುಕ್‌ನಲ್ಲೂ ಈ ಶಿವಲಿಂಗ ಸ್ಥಾನ ಪಡೆದು ಕೊಳ್ಳಲಿದೆ. ಕರ್ನಾಟಕದ ಕೋಲಾರ ಕೋಟಿ ಲಿಂಗ ದೇವಸ್ಥಾನದಲ್ಲಿರುವ 108 ಅಡಿ ಎತ್ತರದ ಕೋಟಿ ಲಿಂಗ ಈ ವರೆಗೆ ಅತ್ಯಂತ ಎತ್ತರದ ಶಿವಲಿಂಗ ಎಂದು ಹೆಸರು ಪಡೆದಿತ್ತು. ಇದನ್ನು ಮೀರಿ 111.2 ಅಡಿ ಎತ್ತರದ ಈ ಶಿವಲಿಂಗವನ್ನು ನಿರ್ಮಿಸಲಾಗಿದೆ. ಆ ದಾಖಲೆಯನ್ನು ನೆಯ್ಯಟಿಂಗರ ಶಿವಲಿಂಗ ಅಳಿಸಿ ಹಾಕಿದೆ. ಶಿವಲಿಂಗದೊಳಗೆ ರಚನೆಗೊಂಡ ಶಿಲ್ಪಗಳು ಭಕ್ತರನ್ನು ಆಕರ್ಷಿಸುತ್ತಿವೆ.

ಈ ಕ್ಷೇತ್ರದ ನವಗ್ರಹ ಮಂಟಪದಲ್ಲಿ ನವ ಗ್ರಹಗಳ ಪ್ರತಿಷ್ಠೆಯನ್ನೂ ನೆರವೇರಿಸಲಾಗಿದೆ. ಈ ನವಗ್ರಹಗಳನ್ನು ಮಹಾಬಲಿಪುರಂನಲ್ಲಿ ತಯಾರಿಸಲಾಗಿದ್ದು, ಅಲ್ಲಿಂದ ತರಲಾಗಿದೆ. ಈ ಕ್ಷೇತ್ರದಲ್ಲಿ 108 ಶಿವಲಿಂಗ ಪ್ರತಿಷ್ಠೆಯೂ ಇದೆ. ಸುಮಾರು 10 ಅಂತಸ್ತಿನ ಕಟ್ಟಡದಷ್ಟು ಎತ್ತರದಲ್ಲಿರುವ ಈ ಶಿವಲಿಂಗ ಶೀಘ್ರದಲ್ಲೇ ಗಿನ್ನೆಸ್‌ ಬುಕ್‌ನಲ್ಲೂ ಸ್ಥಾನ ಪಡೆಯುವ ಸಾಧ್ಯತೆಯಿದೆ. 30 ಮಂದಿ ಶಿಲ್ಪಿಗಳು ಶಿವಲಿಂಗದೊಳಗೆ ವಿಸ್ಮಯಕಾರಿ ಹಾಗೂ ಮನೋಹರವಾದ ಶಿಲ್ಪಗಳನ್ನು ರಚಿಸಿದ್ದಾರೆ. ಸಂತರ ಹಾಗೂ ಧಾರ್ಮಿಕ ಸಾಧಕರ ಕೆತ್ತನೆಗಳು ಅದರೊಳಗಿವೆ. ಭಕ್ತರು ನೀಡಿದ ನೆರವಿನಿಂದ ಈ ಶಿವಲಿಂಗವನ್ನು ನಿರ್ಮಿಸಲಾಗಿದೆ.

ಶಿವಲಿಂಗದೊಳಗಿನ ಸುರಂಗ ಮಾರ್ಗದ ಮೂಲಕ ಸಾಗುವಾಗ ಹಿಮಾಲಯದಲ್ಲಿ ನಡೆದಾಡಿದ ಅನುಭವವಾಗುತ್ತದೆ ಎಂದಬುದಾಗಿ ಭಕ್ತರು ಹೇಳುತ್ತಿದ್ದಾರೆ. ದೇವಸ್ಥಾನದ ಮಠಾಧಿಪತಿ ಸ್ವಾಮಿ ಮಹೇಶ್ವರಾನಂದ ಸರಸ್ವತಿ ಅವರ ಕಲ್ಪನೆ ಹಾಗೂ ಆಶಯದದಂತೆ ಬೃಹತ್‌ ಶಿವಲಿಂಗ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.