ಮುಚ್ಚಿ ಹೋಗಿದೆ ಚರಂಡಿ; ಕೃತಕ ನೆರೆ ಸಂಭವ

ಮಳೆಗಾಲದ ಪೂರ್ವ ತಯಾರಿ: ಮುನ್ನೆಚ್ಚರಿಕೆ ವಹಿಸದ ಲೋಕೋಪಯೋಗಿ ಇಲಾಖೆ

Team Udayavani, May 22, 2019, 6:09 AM IST

charandi

ಈಶ್ವರಮಂಗಲ: ಇನ್ನು ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದ್ದು, ಈಶ್ವರಮಂಗಲ ಪೇಟೆಯಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆಯ ಇಕ್ಕೆಲಗಳ ಚರಂಡಿಯಲ್ಲಿ ಹೂಳು ತುಂಬಿ ಕೃತಕ ನೆರೆಯ ಭೀತಿ ಕಾಡುತ್ತಿದೆ. ಮಳೆಗಾಲದ ಪೂರ್ವ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಿಡಬ್ಲೂéಡಿ ಕೈಗೊಂಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಪೇಟೆಯಲ್ಲಿ ಕೃತಕ ನೆರೆಯ ಭೀತಿ ಕಾಡುತ್ತಿದೆ. ಕಳೆದ ಬಾರಿ ಮುಂಗಾರು ಮಳೆಯ ಸಂದರ್ಭ ಪೇಟೆಯಲ್ಲಿ ಕೃತಕ ನೆರೆಯಿಂದ ಸಾರ್ವಜನಿಕರ ಸಹಿತ ವಾಹನ ಸವಾರರು ಹಲವು ರೀತಿಯ ತೊಂದರೆ ಎದುರಿಸಿದ್ದರು. ಇದಾಗಿ ಒಂದು ವರ್ಷ ಉರುಳಿ ಹೋದರೂ ಇಲಾಖೆ ಸ್ಪಂದಿಸಿಲ್ಲ. ತುರ್ತು ಕಾಮಗಾರಿ ನಡೆಸಲು ಅವಕಾಶಗಳು ಇದ್ದರೂ ಅಧಿಕಾರಿಗಳಲ್ಲಿ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ.

ಪೇಟೆಯ ಮುತುವರ್ಜಿ
ಸ್ಥಳೀಯ ಗ್ರಾ.ಪಂ. ಕಳೆದ ಹಲವು ವರ್ಷಗಳಿಂದ ಪೇಟೆ ಭಾಗದಲ್ಲಿ ಚರಂಡಿ ದುರಸ್ತಿ ಕಾರ್ಯ ನಡೆಸುತ್ತಿದೆ. ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಕೃತಕ ನೆರೆ ಉಂಟಾದ ಸಂದರ್ಭ ತಾತ್ಕಾಲಿಕ ದುರಸ್ತಿ ಕಾರ್ಯ ನಡೆಸಿದೆ. ಇಲಾಖೆ ಮಾಡಬೇಕಾಗುವ ಕೆಲಸವನ್ನು ಪಂಚಾಯತ್‌ ಮಾಡುತ್ತಿದೆ.

ಬದಲಾಗುತ್ತಿರುವ ಅಧಿಕಾರಿಗಳು
ಇಲಾಖೆಯ ಅಧಿಕಾರಿಗಳು ಬದಲಾಗುತ್ತಿರುವುದರಿಂದ ಪೇಟೆಯ ಸಮಸ್ಯೆಗಳು ಹಾಗೆಯೇ ಉಳಿದು ಕೊಂಡಿವೆೆ. ಕಳೆದ ವರ್ಷ ನೆಟ್ಟಣಿಗೆ ಮುಟ್ನೂರು ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಇದ್ದ ಪಿಡಬ್ಲೂéಡಿ ಅಧಿಕಾರಿ ವರ್ಗಾವಣೆ ಗೊಂಡಿದ್ದಾರೆ. ಬೇರೆ ಅಧಿಕಾರಿಗಳು ಈ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಮಳೆ ಗಾಲದಲ್ಲಿ ಈ ಸಮಸ್ಯೆ ಅವರ ಗಮನಕ್ಕೆ ಬರುತ್ತದೆ.

ಮುಂದಿನ ವರ್ಷ ಮಳೆಗಾಲದ ಒಳಗಡೆ ವರ್ಗಾವಣೆಗೊಳ್ಳುತ್ತಾರೆ. ಹೀಗೆ ಅಧಿಕಾರಿಗಳು ವರ್ಗಾವಣೆಗೊಳ್ಳುತ್ತಾ ಇರುವು ದರಿಂದ ಪೇಟೆ ಸಮಸ್ಯೆ ಹೀಗೆ ಉಳಿದುಕೊಂಡಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ.

ಜನಪ್ರತಿನಿಧಿಗಳು ಸ್ಪಂದಿಸಲಿ
ಈಶ್ವರಮಂಗಲ ಪೇಟೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಮಳೆಗಾಲ ಸದ್ಯದಲ್ಲೇ ಆರಂಭವಾಗಲಿದ್ದು, ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಚರಂಡಿ ಹೂಳು ತೆಗೆಯುವ ಕೆಲಸವಾಗಬೇಕು. ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು ಎಂದು ಈಶ್ವರಮಂಗಲ ನವಚೇತನ ಮಿತ್ರ ವೃಂದದ ಅಧ್ಯಕ್ಷ ಪ್ರಶಾಂತ್‌ ನಾಯರ್‌ ಕುಂಟಾಪು ಅವರು ಹೇಳಿದರು.

ಚರಂಡಿಯಲ್ಲಿ ಕಸಕಡ್ಡಿಗಳು
ಬೆಳೆಯುತ್ತಿರುವ ಪೇಟೆಯಲ್ಲಿ ನೆಟ್ಟಣಿಗೆಮುಟ್ನೂರು ಗ್ರಾ.ಪಂ. ಕಸ ವಿಲೇವಾರಿಗೆ ಸರಿಯಾದ ವ್ಯವಸ್ಥೆಗಳನ್ನು ಮಾಡದೇ ಇರುವುದರಿಂದ ಪೇಟೆಯ ಸುತ್ತಮುತ್ತದ ಚರಂಡಿಗಳಲ್ಲಿ ಕಸಕಡ್ಡಿಗಳು ತುಂಬಿ ಹೋಗಿವೆೆ. ಕಳೆದ ಮಳೆಗಾಲದಲ್ಲಿ ಈಶ್ವರಮಂಗಲ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿಯ ಮೋರಿಯಲ್ಲಿ ಹೂಳು ತುಂಬಿ ಕೃತಕ ನೆರೆ ಉಂಟಾಗಿತ್ತು. ಇದನ್ನು ಇನ್ನೂ ದುರಸ್ತಿ ಮಾಡಿಲ್ಲ.

- ಮಾಧವ ನಾಯಕ್‌ ಕೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.