ಸ್ಥಳೀಯರಿಂದಲೇ ಸಾರ್ವಜನಿಕ ಸಂಪರ್ಕ ರಸ್ತೆ ನಿರ್ಮಾಣ


Team Udayavani, Jun 12, 2019, 6:10 AM IST

raste-nirmana

ಪೆರ್ಲ: ಕಾಟುಕುಕ್ಕೆ ಖಂಡೇರಿಯಿಂದ ಮುಂಗ್ಲಿಕಾನ ತೋಡಿನವರೆಗೆ ಇದ್ದ ರಸ್ತೆಯನ್ನು ವಿಸ್ತರಿಸಿ ಬಾಳೆಮೂಲೆ ಮೂಲಕ ಕರ್ನಾಟಕದ ಒಡ್ಯ ಭಾಗಕ್ಕೆ ಸಂಪರ್ಕಿಸುವ ರಸ್ತೆಯ ನಿರ್ಮಾಣ ಕಾಮಗಾರಿಯು ಸ್ಥಳೀಯರ ನೇತೃತ್ವದಲ್ಲಿ ನಡೆಯಿತು. ಪ್ರಸ್ತುತ ಯೋಜನೆಯು ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದು ಇದೀಗ ಅದು ಸಾಕಾರಗೊಂಡು ಈ ಪ್ರದೇಶದ ಜನರ ಸಾರಿಗೆ ಸಮಸ್ಯೆಯನ್ನು ದೂರಗೊಳಿಸಿದೆ.

ರಸ್ತೆಗಾಗಿ ಶ್ರಮದಾನ
ಸ್ಥಳೀಯ ಫಲಾನುಭವಿಗಳು ರಸ್ತೆ ನಿರ್ಮಾಣದ ಶ್ರಮದಾನ ನಡೆಸಿದ್ದು ಅಲ್ಲದೆ ನಿರ್ಮಾಣದ ವೆಚ್ಚ ಸುಮಾರು ಒಂದು ಲಕ್ಷ ರೂಪಾಯಿಗಳಷ್ಟು ಧನಸಹಾಯದ ಮೂಲಕ ಭರಿಸಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಕಾಟುಕುಕ್ಕೆ ವಾರ್ಡ್‌ ಸದಸ್ಯೆ ಮಲ್ಲಿಕಾ ರೈ, ಮಮತಾ ರೈ ಹಾಗೂ ಊರಿನವರಾದ ಜಯರಾಮ ರೈ ದಂಬೆಕಾನ, ವಿಷ್ಣು ಭಟ್‌ ಬಾಳೆಮೂಲೆ ಅವರ ವಿಶೇಷ ಕಾಳಜಿಯಿಂದ ಈ ಯೋಜನೆಯು ಸಾಕಾರಗೊಳಿಸಲು ನಿರಂತರ ಶ್ರಮವಹಿಸಿ ನೀರಾವರಿ ಇಲಾಖೆಯಿಂದ ಅಣೆಕಟ್ಟು, ಮೇಲ್ಸೇತುವೆಗೆ ಅನುದಾನ ಲಭಿಸಲು ಹಾಗೂ ರಸ್ತೆಗೆ ಜಾಗ ಲಭಿಸಲು ಜಮೀನುದಾರರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಣೆಕಟ್ಟು, ಮೇಲ್ಸೇತುವೆ ಅನುಮೋದನೆ ಹಂತದಲ್ಲಿ
ಇದೀಗ ಮಾರ್ಗ ಪೂರ್ತಿಗೊಳ್ಳಲು ತೊಡಕಾಗಿರುವ ಮುಂಗ್ಲಿಕಾನ ತೋಡಿಗೆ ಅಣೆಕಟ್ಟು ಮತ್ತು ಮೇಲ್ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು, ಅನುಮೋದನೆಗೊಳ್ಳುವ ಅಂತಿಮ ಹಂತದಲ್ಲಿದೆ ಎಂದು ಎಣ್ಮಕಜೆ ಗ್ರಾಮ ಪಂಚಾಯತ್‌ ಸದಸ್ಯೆ ಮಲ್ಲಿಕಾ ರೈ ತಿಳಿಸಿದ್ದಾರೆ.

ರಸ್ತೆಗಾಗಿ ಫ‌ಲವತ್ತಾದ ಭೂಮಿ ದಾನ ಮಾಡಿದರು
ರಸ್ತೆಯು ಹಾದು ಹೋಗುವ ಸ್ಥಳದ ಮಾಲಕರಾದ ಐತ್ತಪ್ಪ ರೈ ಪಟ್ಟೆ, ಸದಾಶಿವ ರೈ ಬಾಳೆಮೂಲೆ, ಪ್ರಸಾದ ರೈ ಮುಂಗ್ಲಿಕ್ಕಾನ ಇವರು ರಸ್ತೆ ನಿರ್ಮಾಣಕ್ಕೆ ಬೇಕಾದ ಸ್ಥಳವನ್ನು ಉದಾರವಾಗಿ ನೀಡಿದ ಕಾರಣ ಯೋಜನೆ ಸಾಕಾರಗೊಂಡಿದೆ. ಇವರು ತಮ್ಮ ಕೃಷಿಭೂಮಿಯ ಫಲವತ್ತಾದ ಅಡಿಕೆ ಮರಗಳನ್ನು ಕಡಿದು ಮಾರ್ಗಸಾಗಲು ಸಹಕರಿಸಿದ್ದು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

– ಬಾಲಕೃಷ್ಣ ಅಚ್ಚಾಯಿ

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.