ಕೋವಿಡ್-19 ನಿಯಂತ್ರಣ: ಜಿಲ್ಲೆಗೆ ಹೆಚ್ಚುವರಿ ಪೊಲೀಸ್‌


Team Udayavani, Mar 24, 2020, 4:15 AM IST

ಕೋವಿಡ್-19 ನಿಯಂತ್ರಣ: ಜಿಲ್ಲೆಗೆ ಹೆಚ್ಚುವರಿ ಪೊಲೀಸ್‌

ಕಾಸರಗೋಡು: ಮಾರಣಾಂತಿಕ ಕೋವಿಡ್-19 ವೈರಸ್‌ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಪೊಲೀಸ್‌ ಇಲಾಖೆ ಮುಂದಾಗಿದ್ದು, ಇದರಂತೆ ಕಾಸರಗೋಡು ಜಿಲ್ಲೆಗೆ ಹೆಚ್ಚುವರಿ ಪೊಲೀಸರನ್ನು ನೇಮಿಸಲಾಗುವುದು.

ಸರಕಾರದ ಆದೇಶಗಳನ್ನು ಮತ್ತು ನಿಯಂತ್ರಣಗಳನ್ನು ಪಾಲಿಸಲು ಹೆಚ್ಚುವರಿ ಪೊಲೀಸರ ಅಗತ್ಯವಿದೆ ಎಂದು ಕಂಡುಕೊಂಡು ಹೆಚ್ಚುವರಿ ಪೊಲೀಸರನ್ನು ನೇಮಿಸಲಾಗುವುದೆಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ.ಎಸ್‌. ಸಾಬು ಅವರು ಹೇಳಿದ್ದಾರೆ. ಉತ್ತರ ವಲಯ ಐ.ಜಿ. ಅಶೋಕ್‌ ಯಾದವ್‌, ಎರ್ನಾಕುಳಂ ಸಿಟಿ ಪೊಲೀಸ್‌ ಕಮಿಷನರ್‌ ವಿಜಯ ಸಖಾರೆ, ಡಿಐಜಿ ಸೇತುರಾಮನ್‌, ಕೋಟ್ಟಯಂ ಕ್ರೈಂಬ್ರಾಂಚ್‌ ಎಸ್‌.ಪಿ. ಸಾಬು ಮ್ಯಾಥ್ಯೂ, ಟೆಲಿಕಮ್ಯೂನಿಕೇಶನ್‌ ಎಸ್‌ಪಿ ಡಿ. ಶಿಲ್ಪಾ ಅವರು ಪೊಲೀಸ್‌ ಪಡೆಗೆ ನೇತೃತ್ವ ನೀಡುವರು.

ಅನಗತ್ಯವಾಗಿ ಮನೆಯಿಂದ ಹೊರಗೆ ಬಂದು ತಿರುಗಾಡುವವರನ್ನು ಬಂಧಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ 10 ವಾಹನಗಳಲ್ಲಿ 50 ಮಂದಿ ಪೊಲೀಸರನ್ನು ನೇಮಿಸಲಾಗುವುದು. ಮನೆಯಿಂದ ಹೊರಗೆ ಬಂದವರನ್ನು ಪ್ರಶ್ನಿಸಿ ಅವರು ಯಾಕಾಗಿ ಮನೆಯಿಂದ ಹೊರಗೆ ಬಂದಿದ್ದಾರೆ ಎಂದು ವಿಚಾರಿಸಿ ಅಗತ್ಯಕ್ಕೆ ಬಂದ ಬಗ್ಗೆ ಸ್ಪಷ್ಟವಾದರೆ ಮಾತ್ರವೇ ಕಳುಹಿಸಲಾಗುವುದು. ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಅಂಗಡಿಗಳಿಂದ ಅವಶ್ಯ ಸಾಮಗ್ರಿಗಳನ್ನು ಖರೀದಿಸಲು ಹೋಗುವ ಗ್ರಾಹಕರನ್ನು ಪೊಲೀಸರು ಅಂಗಡಿಯ ಮುಂದೆ ನಿಯಂತ್ರಿಸುವರು.

ಕಾಸರಗೋಡು ಜಿಲ್ಲೆಯಲ್ಲಿ ಬೆಳಗ್ಗೆ 11 ರಿಂದ ಸಂಜೆ 5 ಗಂಟೆಯ ವರೆಗೆ ಬೇಕರಿಗಳು ತೆರೆದು ಕಾರ್ಯಾಚರಿಸಬೇಕೆಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ತಿಳಿಸಿದ್ದಾರೆ. ಆದರೆ ಬೇಕರಿ ಅಂಗಡಿಗಳಲ್ಲಿ ಚಾಯ, ಕಾಫಿ ಸಹಿತ ಪಾನೀಯಗಳನ್ನು ವಿತರಿಸಬಾರದು. ಯಾವುದೇ ಕಾರಣಕ್ಕೂ ಅಂಗಡಿಗಳಲ್ಲಿ ಗುಂಪು ಸೇರಬಾರದೆಂದು ಮನವಿ ಮಾಡಿದ್ದಾರೆ.

ಜನರು ಅನಾವಶ್ಯಕವಾಗಿ ಪೇಟೆಗೆ ಬಾರದೆ ಮನೆಯಲ್ಲಿ ಕುಳಿತುಕೊಳ್ಳುವಂತೆ ತಿಳಿಸಿದ ಅವರು ಅಗತ್ಯ ಸಾಮಗ್ರಿಗಳಿಗೆ ಅಂಗಡಿಗಳಿಗೆ ಬರುವವರು ಪೊಲೀಸರು ನೀಡುವ ನಿರ್ದೇಶವನ್ನು ಪಾಲಿಸಬೇಕೆಂದೂ ತಿಳಿಸಿದ್ದಾರೆ. ಅಂಗಡಿಗಳಲ್ಲಿ ಒಂದು ಮೀಟರ್‌ ಅಂತರ ಕಾಯ್ದುಕೊಂಡು ಕ್ಯೂ ನಿಲ್ಲಬೇಕು. ಚಿಕನ್‌, ಮೊಟ್ಟೆ, ಬೀಫ್‌ ಅಂಗಡಿಗಳೂ ತೆರೆಯಬೇಕು. ಅಂತಹ ಅಂಗಡಿಗಳಲ್ಲಿ ಗುಂಪು ಸೇರಿದರೆ ಆ ಅಂಗಡಿಗಳನ್ನು ಮುಚ್ಚಲು ನಿರ್ದೇಶ ನೀಡಲಾಗುವುದೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕಾಸರಗೋಡಿನಲ್ಲಿ ನಿಯಂತ್ರಣ ಉಲ್ಲಂಘಿಸಿದ ಇಬ್ಬರು ಕೋವಿಡ್-19 ವೈರಸ್‌ ಸೋಂಕು ಬಾಧಿತರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳುಲಾಗುವುದು. ಪಾಸ್‌ಪೋರ್ಟ್‌ ಮಾಹಿತಿ ಕಲೆ ಹಾಕಲು ನಿರ್ದೇಶ ನೀಡಲಾಗಿದೆ. ರೋಗ ಹರಡಿದ್ದರೂ ನಿಯಂತ್ರಣ ಪಾಲಿಸದೆ ತಿರುಗಾಡಿದ ಹಿನ್ನೆಲೆಯಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ವಿದೇಶಕ್ಕೆ ಹೋಗುವುದನ್ನು ತಡೆಯುವ ಸಹಿತ ಕ್ರಮ ತೆಗೆದುಕೊಳ್ಳಲು ಚಿಂತಿಸಲಾಗುತ್ತಿದೆ.

ವಿದೇಶದಿಂದ ಬರುವವರು ನಿಯಂತ್ರಣ ಪಾಲಿಸಬೇಕು. ಅವರೆಲ್ಲ ನಿಗಾದಲ್ಲಿರಬೇಕು. ನಿಗದಿತ ದಿನಗಳ ತನಕ ಐಸೋಲೇಶನ್‌ನಲ್ಲಿರಬೇಕು. ಈ ಸಂದರ್ಭದಲ್ಲಿ ಯಾರೊಂದಿಗೂ ಸಂಪರ್ಕ ಬೆಳೆಸಬಾರದು. ಸರಕಾರಿ ಆದೇಶಗಳನ್ನು ಪಾಲಿಸದವರ ವಿರುದ್ಧ ಪಾಸ್‌ಪೋರ್ಟ್‌ ರದ್ದು ಮಾಡುವ ಸಹಿತ ಕಠಿನ ಕ್ರಮ ತೆಗೆದುಕೊಳ್ಳುವುದಾಗಿ ಸಂಬಂಧಪಟ್ಟವರು ತಿಳಿಸಿದ್ದಾರೆ.

ವಿದೇಶದಿಂದ ಬಂದವರು ಪೊಲೀಸ್‌ ನಿಗಾದಲ್ಲಿ
ವಿದೇಶದಿಂದ ಮಾರ್ಚ್‌ 1 ರಿಂದ ಕಾಸರಗೋಡು ಜಿಲ್ಲೆಗೆ ತಲುಪಿದವರ ಹೆಸರು ಸಹಿತ ಪೂರ್ಣ ವಿವರಗಳನ್ನು ಜಿಲ್ಲಾ ಪೊಲೀಸರು ಸಂಗ್ರಹಿಸಿದ್ದಾರೆ. 4,000ದಷ್ಟು ಮಂದಿ ಮಂಗಳೂರು, ಕಣ್ಣೂರು, ಕರಿಪ್ಪೂರ್‌, ನೆಡುಂಬಾಶ್ವೇರಿ, ತಿರುವನಂತಪುರ ವಿಮಾನ ನಿಲ್ದಾಣಗಳ ಮೂಲಕ ಬಂದವರಾಗಿದ್ದಾರೆ.

ಇವರ ಮನೆಗಳಿಗೆ ಆಯಾಯ ಪೊಲೀಸ್‌ ಠಾಣೆಗಳ ಪೊಲೀಸರು ತೆರಳಿ ಅವರ ಎಲ್ಲ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಅಂತವರು ಪೊಲೀಸ್‌ ನಿಗಾದಲ್ಲಿರುತ್ತಾರೆ. ನಿರೀಕ್ಷಣ ಕಾಲಾವಧಿಗೂ ಮುನ್ನವೇ ಹೊರಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುವುದೆಂದು ಉತ್ತರ ವಲಯ ಡಿಐಜಿ ಸೇತುರಾಮನ್‌ ಅವರ ನೇತೃತ್ವದಲ್ಲಿ ನಡೆದ ಉನ್ನತ ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

2,470 ಮಂದಿ ನಿಗಾದಲ್ಲಿ
ಕೊರೊನಾ ವೈರಸ್‌ ಹರಡುತ್ತಿರುವಂತೆ ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ 38 ಮಂದಿಗೆ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ 2,470 ಮಂದಿ ನಿಗಾದಲ್ಲಿದ್ದಾರೆ. ಈ ಪೈಕಿ 61 ಮಂದಿ ಆಸ್ಪತ್ರೆಗಳ ಐಸೋಲೇಶನ್‌ ವಾರ್ಡ್‌ಗಳಲ್ಲಿದ್ದಾರೆ. 825 ಮಂದಿ ಕೊರೊನಾ ನಿಯಂತ್ರಣಕ್ಕಿರುವ ಜಿಲ್ಲಾ ಕೇಂದ್ರದಲ್ಲಿ ನೇರವಾಗಿ ನಿಗಾದಲ್ಲಿದ್ದಾರೆ. ಉಳಿದ 1,584 ಮಂದಿ ವಿವಿಧ ಪಂಚಾಯತ್‌, ನಗರಸಭೆ ವಾರ್ಡ್‌ಗಳ ಜಾಗೃತಾ ಸಮಿತಿಗಳ ನೇತೃತ್ವದಲ್ಲಿ ನಿಗಾದಲ್ಲಿದ್ದಾರೆಂದು ಡಿ.ಎಂ.ಒ. ಡಾ| ಎ.ವಿ. ರಾಮದಾಸ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.