ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಕನ್ನಡ ಶಾಲೆಗೆ ಭಾಷೆ ತಿಳಿಯದ ಅಧ್ಯಾಪಕರ ನೇಮಕ

Team Udayavani, Nov 3, 2019, 2:50 AM IST

NN-22

ಕಾಸರಗೋಡು: ಕನ್ನಡ ಮಾಧ್ಯಮ ಶಾಲೆಗೆ ಕನ್ನಡ ಭಾಷೆ ತಿಳಿಯದ ಅಧ್ಯಾಪಕರು ಸೇರ್ಪಡೆಯಾಗುತ್ತಿರುವ ವಿಷಯ ಇಂದು ಕಾಸರಗೋಡಿನ ಬಹುದೊಡ್ಡ ಶೈಕ್ಷಣಿಕ, ಸಾಮಾಜಿಕ ಸಮಸ್ಯೆಯಾಗಿ ಕಾಡುತ್ತಿದೆ. ಜಿಲ್ಲೆಯ ವಿವಿಧ ಕನ್ನಡ ಮಾಧ್ಯಮ ಹೈಸ್ಕೂಲ್‌ಗ‌ಳಿಗೆ ವಿವಿಧ ವಿಷಯ ಬೋಧನೆಗಾಗಿ ಕೇರಳ ಲೋಕ ಸೇವಾ ಆಯೋಗದ ಮೂಲಕ ನೇಮಕಗೊಂಡ ಅಧ್ಯಾಪಕರಿಗೆ ಕನ್ನಡ ಭಾಷೆ ತಿಳಿಯದಿರುವ ವಿಷಯ ಕಳೆದ ವರ್ಷವೇ ಬಹಿರಂಗವಾಗಿದೆ. ಈ ಶೈಕ್ಷಣಿಕ ವರ್ಷದಲ್ಲಿ ಇದು ಪುನರಾವರ್ತನೆಯಾಗಿದೆ. ಈ ವಿಷಯದಲ್ಲಿ ಭಾಗಿಯಾದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಕೇರಳ ತುಳು ಅಕಾಡೆಮಿ ಅಧ್ಯಕ್ಷ ಉಮೇಶ್‌ ಎಂ.ಸಾಲಿಯಾನ್‌ ಅವರು ಕೇರಳ ಸರಕಾರಕ್ಕೆ ಮನವಿ ಮಾಡಿದ್ದಾರೆ.

2016 ರಲ್ಲಿ ಕೇರಳ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯು ಹೊರಡಿಸಿದ ಆದೇಶ ಪ್ರಕಾರ ಒಂದರಿಂದ ಹತ್ತನೆಯ ತರಗತಿವರೆಗೆ ಕನ್ನಡ ಕಲಿತ ಉದ್ಯೋಗಾರ್ಥಿಗಳಿಗೆ ಮಾತ್ರ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿಷಯ ಬೋಧನೆಗೆ ಅವಕಾಶವಿರುವುದನ್ನು ಸ್ಪಷ್ಟಪಡಿಸಿದೆ. ಈಗ ಸಮಸ್ಯೆಯಾಗಿರುವ ಕನ್ನಡ ಭಾಷೆ ಗೊತ್ತಿಲ್ಲದ ಅಧ್ಯಾಪಕರ ನೋಟಿಫಿಕೇಶನ್‌ 2016 ರ ಮೊದಲಾಗಿದ್ದರೂ ಇವರ ನೇಮಕಾತಿಯ ಸಂದರ್ಶನವು 2017 ಮತ್ತು 2018 ರಲ್ಲಿ ನಡೆದಿರುವುದು ತಿಳಿದುಬರುತ್ತದೆ. ಆದೇಶದ ಮಹತ್ವ ತಿಳಿದಿರುವ ಸಂದರ್ಶನ ಸಮಿತಿಯ ಸದಸ್ಯರು ತಮ್ಮ ಸಾಮಾನ್ಯ ಜ್ಞಾನವನ್ನೂ ಬದಿಗಿರಿಸಿ ಕನ್ನಡ ಭಾಷೆ ಗೊತ್ತಿಲ್ಲದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿದ್ದಾರೆ. ಇದು ಹಲವು ಸಂಶಯಗಳಿಗೆ ಎಡೆಮಾಡಿಕೊಡುತ್ತದೆ. ಮಾತ್ರವಲ್ಲದೆ ಅಭ್ಯರ್ಥಿಗಳ ಕನ್ನಡ ಜ್ಞಾನವನ್ನು ಪರೀಕ್ಷಿಸಲು ಸಂದರ್ಶನ ಸಮಿತಿಯಲ್ಲಿ ಇದ್ದ ಕನ್ನಡ ಭಾಷಾ ತಜ್ಞರು ತಮ್ಮ ಕರ್ತವ್ಯಪ್ರಜ್ಞೆ ಮರೆತಿದ್ದಾರೆ. ಇದೆಲ್ಲವೂ ಹಲವು ಸಂಶಯಗಳಿಗೆ ಎಡೆಮಾಡಿಕೊಡುತ್ತಿದ್ದು ಇದರ ವಿರುದ್ಧ ಸಮಗ್ರ ತನಿಖೆ ನಡೆಯಬೇಕಾಗಿದೆ. ಭಾಷಾ ಅಲ್ಪಸಂಖ್ಯಾಕರ ಔದ್ಯೋಗಿಕ ಬದುಕಿನ ಇಂತಹ ಮಹತ್ವದ ಸಂದರ್ಶನದಲ್ಲಿ ಪ್ರಧಾನ ಪಾತ್ರವಹಿಸಿದ ಕನ್ನಡ ಭಾಷಾತಜ್ಞರು ಕನ್ನಡಿಗರಿಗೆ ಅಪಚಾರವೆಸಗಿದ್ದಾರೆ.

ಕ್ರಮ ಕೈಗೊಳ್ಳಬೇಕು
ಇದು ಕೇರಳ ಸರಕಾರದ ಘನತೆಗೆ ಮತ್ತು ಕೇರಳ ಲೋಕ ಸೇವಾ ಆಯೋಗದ ಪಾರದರ್ಶಕತೆಗೆ ಕಳಂಕ ತರುವಂತಾಗಿದೆ. ಸರಕಾರವು ಇದರ ಗಂಭೀರತೆಯನ್ನು ಅರಿತು ಕರ್ತವ್ಯಚ್ಯುತಿ ಮಾಡಿದವರ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಉಮೇಶ್‌ ಎಂ. ಸಾಲಿಯಾನ್‌ ಆಗ್ರಹಿಸಿದ್ದಾರೆ.

ಈಗಾಗಲೇ ನೇಮಕಾತಿಗೊಂಡಿರುವ ಕನ್ನಡ ಗೊತ್ತಿಲ್ಲದ ಅಧ್ಯಾಪಕರನ್ನು ಬೇರೆ ಇಲಾಖೆಗೆ ಅಥವಾ ಮಲೆಯಾಳ ಮಾಧ್ಯಮ ಶಾಲೆಗೆ ವರ್ಗಾಯಿಸಿ ಕನ್ನಡ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಬೇಕಾಗಿ ಅವರು ಸರಕಾರದಲ್ಲಿ ವಿನಂತಿಸಿದ್ದಾರೆ. ಈ ಬಗ್ಗೆ ಉಮೇಶ್‌ ಎಂ.ಸಾಲಿಯಾನ್‌ ಅವರು ಕೇರಳ ಶಿಕ್ಷಣ ಸಚಿವ ರವೀಂದ್ರನಾಥ್‌ ಅವರನ್ನು ಮುಖತ: ಭೇಟಿಯಾಗಿ ವಿಷಯದ ಗಂಭೀರತೆಯನ್ನು ಚರ್ಚಿಸಿದ್ದಾರೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.