ಗೋವಿನ ಕಾಳಜಿ ಮತ್ತೆ ಅನಾವರಣ: ಡಾ| ವೈ.ವಿ.ಕೃಷ್ಣಮೂರ್ತಿ


Team Udayavani, Jun 10, 2019, 6:10 AM IST

govina-kalaji

ಬದಿಯಡ್ಕ: ಹಲಸು ಹಾಗೂ ಗೋವಿನೊಂದಿಗೆ ಅಂಟಿಕೊಂಡ ಕಾರ್ಯಕರ್ತರ ನಂಟಿನಿಂದ ಹಲಸು ಮೇಳವು ಯಶಸ್ಸನ್ನು ಕಂಡಿದ್ದು ಗೋವಿನ ಕುರಿತಾದ ಕಾಳಜಿ ಮತ್ತೂಮ್ಮೆ ಅನಾವರಣಗೊಂಡಿದೆ. ಗೋವಿನ ರಕ್ಷಣೆಗಾಗಿ ರಾಮಚಂದ್ರಾಪುರ ಮಠವು ಕಂಡುಕೊಂಡ ನೂತನ ಯೋಜನೆ ಹಲಸು ಆಗಿದೆ. ತನ್ಮೂಲಕ ಹಸುವಿನ ಹಸಿವೆಯನ್ನು ನೀಗಿಸುವಲ್ಲಿ ಇದು ಮೊದಲ ಹಲಸು ಮೇಳವಾಗಿ ಇತಿಹಾಸದ ಪುಟದಲ್ಲಿ ದಾಖಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಕಾಮದುಘಾ ಸಂಚಾಲಕ ಡಾ.ವೈ.ವಿ.ಕೃಷ್ಣಮೂರ್ತಿ ಅವರು ಹೇಳಿದರು.

ಮುಳ್ಳೇರಿಯ ಹವ್ಯಕ ಮಂಡಲದ ನೇತೃತ್ವದಲ್ಲಿ ಬಜಕೂಡ್ಲು ಅಮೃತಧಾರಾ ಗೋಶಾಲೆ, ಬದಿಯಡ್ಕ ಮಹಿಳ್ಳೋದಯ ಹಾಗೂ ಗೋಭಕ್ತರ ಸಹಕಾರದೊಂದಿಗೆ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶನಿವಾರ ನಡೆದ ಹಲಸುಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಲಕ್ಷ ಹಪ್ಪಳದ ಗುರಿ ಲಕ್ಷವನ್ನು ತಲುಪಿದೆ ಎಂದ ಅವರು ಮನೆಯಲ್ಲಿ ಹಲಸಿನ ಮಯಣವಾಗಿದ್ದರೂ ಮನಸ್ಸಿನಲ್ಲಿ ಗೋಪ್ರೇಮ ಜಾಗೃತವಾಗಿದೆ ಎಂದರು.
ಮುಳ್ಳೇರಿಯ ಹವ್ಯಕ ಮಂಡಲ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯ ಸರ್ಪಮಲೆ, ಮಂಡಲ ಪ್ರಧಾನ ಗುರಿಕ್ಕಾರ ಮೊಗ್ರ ಸತ್ಯನಾರಾಯಣ ಭಟ್‌, ಮಹಿಳ್ಳೋದಯದ ಸ್ಥಾಪಕಾಧ್ಯಕ್ಷೆ ಯಶೋದಮ್ಮ ಕಾರ್ಯಾಡು, ಹಲಸು ಮೇಳ ಸಮಿತಿಯ ಅಧ್ಯಕ್ಷ ಶಿವಪ್ರಸಾದ ವರ್ಮುಡಿ ಮಾತನಾಡಿದರು. ದೀಪಾ ದೊಡ್ಡಮಾಣಿ ಅನುಭವವನ್ನು ಹಂಚಿಕೊಂಡರು. ಮಂಡಲ ಮಹಿಳಾ ಪ್ರಧಾನೆ ಕುಸುಮಾ ಪೆರ್ಮುಖ ಸ್ವಾಗತಿಸಿ, ಕುಂಬಳೆ ವಲಯ ಅಧ್ಯಕ್ಷ ಬಾಲಕೃಷ್ಣ ಶರ್ಮ ವಂದಿಸಿದರು. ಶಂಕರ ಪ್ರಸಾದ ಕುಂಚಿನಡ್ಕ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

” ನಮ್ಮಲ್ಲೇ ಇರುವ ವಸ್ತುವಿಗೆ ಬೇಡಿಕೆ ತರಿಸಿದೆ’
ಮುಳ್ಳೇರಿಯ ಹವ್ಯಕ ಮಂಡಲ ಅಧ್ಯಕ್ಷ ಪ್ರೊ|ಶ್ರೀಕೃಷ್ಣ ಭಟ್‌ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ಗೋವಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಗುರುಗಳ ಕೃಪಾಕಟಾಕ್ಷದಿಂದ ಹಲಸು ಮೇಳವು ಅತ್ಯದ್ಭುತವಾದ ರೀತಿಯಲ್ಲಿ ಸಂಪನ್ನವಾಗಿದೆ. ಮಹಿಳಾ ಕಾರ್ಯಕರ್ತರ ಉತ್ಸಾಹ, ಶ್ರಮ, ಕಾಳಜಿಯು ನಮ್ಮಲ್ಲೇ ಇರುವ ವಸ್ತುವಿಗೆ ಬೇಡಿಕೆ ಬರುವಂತೆ ಮಾಡಿದೆ. ಮುಳ್ಳೇರಿಯ ಮಂಡಲದ 12 ವಲಯದ ಕಾರ್ಯಕರ್ತರು ಹಾಗೂ ಗೋಪ್ರೇಮಿಗಳು ಅಭಿನಂದನಾರ್ಹರು ಎಂದರು ಗೋಕರ್ಣ ಮಂಡಲಾಧ್ಯಕ್ಷ ಈಶ್ವರಿ ಬೇರ್ಕಡವು ಮಾತನಾಡುತ್ತಾ ಅನೇಕ ಸವಾಲುಗಳನ್ನು ದಿಟ್ಟವಾಗಿ ಎದುರಿಸಿ ಕಾರ್ಯಕರ್ತರು ಗೋಪ್ರೇಮದಿಂದ ಎಲ್ಲವನ್ನೂ ಮೆಟ್ಟಿನಿಂತು ಮೇಳದ ಯಶಸ್ಸಿಗೆ ಕಾರಣಕರ್ತರಾಗಿದ್ದಾರೆ. ಉತ್ತಮವಾದ ಸಂದೇಶವನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಕಾರ್ಯದಲ್ಲಿ ಮುಂದೆಯೂ ಎಲ್ಲರೂ ಕೈಜೋಡಿಸಬೇಕೆಂದರು.ತೂಗು ಸೇತುವೆಯ ಸರದಾರ ಪದ್ಮಶ್ರೀ ಗಿರೀಶ್‌ ಭಾರದ್ವಾಜ್‌ ವೇದಿಕೆಯಲ್ಲಿ ಉಪಸ್ಥಿತರಿದ್ದು, ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠಕ್ಕೆ ಹಲಸು ಮೇಳ ಸಮಿತಿಯಿಂದ ಕೊಡಮಾಡಿದ ಗಿಡಗಳನ್ನು ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಅವರಿಗೆ ಹಸ್ತಾಂತರಿಸಿ ಮಾತನಾಡಿ ಕಾರ್ಯಕ್ರಮಕ್ಕೆ ಮೆಚ್ಚುಗೆಯನ್ನು ಸೂಚಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.