ಸಾಂಕ್ರಾಮಿಕ ರೋಗ ಭೀತಿಯಲ್ಲಿ ಸೀತಾಂಗೋಳಿ


Team Udayavani, Mar 23, 2020, 5:04 AM IST

ಸಾಂಕ್ರಾಮಿಕ ರೋಗ ಭೀತಿಯಲ್ಲಿ ಸೀತಾಂಗೋಳಿ

ವಿದ್ಯಾನಗರ: ನೀರು ಹರಿಯುವ ಚರಂಡಿಯ ತುಂಬ ಕಸಕಡ್ಡಿ, ಹೋಟೇಲುಗಳ ತ್ಯಾಜ್ಯ. ಬೇಸಗೆಯಲ್ಲೂ ಕಟ್ಟಿನಿಂತ ನೀರಿನಲ್ಲಿ ಹುಳುಗಳು ತುಂಬಿ ಪರಿಸರದಲ್ಲಿ ಕೆಟ್ಟ ವಾಸನೆ ಬರುತ್ತಿದೆ. ಮಳೆಗಾಲಕ್ಕಾಗುವಾಗ ಈ ಕಸಕಡ್ಡಿಗಳ ರಾಶಿಯಿಂದಾಗಿ ಮಳೆನೀರು ಚರಂಡಿಯಲ್ಲಿ ಸುಸೂತ್ರವಾಗಿ ಹರಿಯಲಾಗದೆ ಉಂಟಾಗಬಹುದಾದ ಸಮಸ್ಯೆ ಜನರ ಆತಂಕಕ್ಕೆ ಕಾರಣವಾದರೆ, ತ್ಯಾಜ್ಯ ಉಂಟುಮಾಡಬಹುದಾದ ಸಾಂಕ್ರಾಮಿಕ ರೋಗದ ಭೀತಿ ಇನ್ನೊಂದೆಡೆ. ಆ ಮೂಲಕ ಇಂದು ಸೀತಾಂಗೋಳಿ ಪೇಟೆ ಸದ್ದಿಲ್ಲದೆ ಸಾಂಕ್ರಾಮಿಕ ರೋಗಗಳ ತಾಣವಾಗಿ ಬದಲಾಗುತ್ತಿದೆ.

ನಾಡಿನೆಲ್ಲೆಡೆ ಪರಿಸರ ಶುಚಿತ್ವದ ಮಹತ್ವದ ಬಗ್ಗೆ ಜಾಗƒತಿ ಮೂಡಿಸುತ್ತಿದ್ದರೂ ಕೆಲವರು ಕಿವಿಯಿದ್ದು ಕಿವುಡಾಗುವ, ಕಣ್ಣಿದ್ದು ಕುರುಡಾಗುತ್ತಿದ್ದಾರೆ. ಹರಡುತ್ತಿರುವ ಸಾಂಕ್ರಾಮಿಕ ರೋಗಗಳ ಹಾವಳಿ ಬಗ್ಗೆ ಜನಜಾಗƒತಿ ಮೂಡಿಸುವ ಆರೋಗ್ಯ ಇಲಾಖೆ ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಸೀತಾಂಗೋಳಿ ಪೇಟೆಯ ಚರಂಡಿಯಲ್ಲಿ ತುಂಬಿಕೊಂಡಿರುವ ಮಲಿನ ಜಲದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದಿರುವುದು ವಿಪರ್ಯಾಸ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಪುತ್ತಿಗೆ ಹಾಗೂ ಬದಿಯಡ್ಕ ಗ್ರಾಮ ಪಂಚಾಯತ್‌ನ ಗಡಿಭಾಗವಾಗಿರುವ ಸೀತಾಂಗೋಳಿ ಪೇಟೆಯಲ್ಲಿ ಮಳೆನೀರು ಹರಿಯುವ ಚರಂಡಿ ಇಂದು ಮಲಿನಜಲ ದಾಸ್ತಾನುಗೊಳ್ಳುವ ತಿಪ್ಪೆಯಾಗಿ ಬದಲಾಗಿದೆ. ಮಲಿನ ನೀರಿನೊಂದಿಗೆ ಹೊಟೇಲುಗಳಿಂದ ಬರುವ ನೀರು, ಆಹಾರ ತ್ಯಾಜ್ಯ, ಕೊಳೆತ ತರಕಾರಿ, ಮತ್ತಿತರ ತ್ಯಾಜ್ಯಗಳೂ ಸೇರಿ ಗಬ್ಬುವಾಸನೆ ಪೇಟೆಯನ್ನು ಆವರಿಸುತ್ತಿದೆ. ಚರಂಡಿ ಸಮೀಪದಲ್ಲೇ ಬದಿಯಡ್ಕ ಭಾಗಕ್ಕೆ ತೆರಳುವ ಬಸ್ಸು ತಂಗುದಾಣವಿದ್ದು ಪ್ರಯಾಣಿಕರು ಮೂಗುಮುಚ್ಚಿಕೊಂಡು ಇಲ್ಲಿ ನಿಲ್ಲಬೇಕಾದ ದುಸ್ಥಿತಿ ಎದುರಾಗಿದೆ.

ಚರಂಡಿಯ ಕೊಳಚೆ ನೀರಿನಲ್ಲಿ ಹುಳಗಳು ಹುಟ್ಟಿಕೊಂಡಿದ್ದು ಸಂಜೆಯಾಗುತ್ತಿದ್ದಂತೆ ವಿಪರೀತ ಕಾಟಕೊಡುವ ಸೊಳ್ಳೆಗಳು ಇಲ್ಲಿನ ನಿವಾಸಿಗಳಿಗೂ, ಪ್ರಯಾಣಿಕರಿಗೂ ಬಹುದೊಡ್ಡ ಸಮಸ್ಯೆಯಾಗಿ ಕಾಡಲಾರಂಭಿಸಿದೆ. ಮಾತ್ರವಲ್ಲದೆ ರಸ್ತೆಬದಿಯ ಈ ತೆರೆದ ಚರಂಡಿಯ ಸನಿಹ ಆಹಾರ ಪದಾರ್ಥಗಳ ಮಾರಾಟವೂ ಜೋರಾಗಿ ನಡೆಯುತ್ತಿದೆ. ಇದರಿಂದಾಗಿ ಜನರಲ್ಲಿ ಸಾಂಕ್ರಾಮಿಕ ರೋಗದ ಭೀತಿ ಹುಟ್ಟಿಕೊಂಡಿದ್ದು ಸ್ಥಳೀಯ ವ್ಯಾಪಾರಿಗಳು ಆದಷ್ಟು ಬೇಗ ಇದಕ್ಕೊಂದು ಪರಿಹಾರ ಕಾಣುವಂತೆ ಒತ್ತಾಯಿಸುತ್ತಿದ್ದಾರೆ.

ನಾಡು ರೋಗ ಭೀತಿಯಿಂದ ಕಂಗೆಟ್ಟಿರುವ ಸಂದರ್ಭದಲ್ಲೂ ಸಾಂಕ್ರಾಮಿಕ ರೋಗ ಉತ್ಪಾಧನಾ ಕೇಂದ್ರವಾಗಿ ಬದಲಾಗುತ್ತಿರುವ ಈ ಚರಂಡಿಯನ್ನು ಸ್ವತ್ಛಗೊಳಿಸುವತ್ತ ಗಮನ ಹರಿಸದ ಆರೋಗ್ಯ ಇಲಾಖೆ ಹಾಗೂ ಸ್ಥಳಿಯಾಡಳಿತ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊರೋನಾ ಎಂಬ ಮಹಾಮಾರಿಯನ್ನು ಬಡಿದೋಡಿಸಲು ಸ್ವಚ್ಚತೆಗೆ ನೀಡುವ ಆದ್ಯತೆ ಇನ್ನೂ ಜನರ ಕಣ್ಣು ತೆರೆಸುವಲ್ಲಿ ವಿಫಲವಾಗುತ್ತಿರುವುದು ವಿಪರ್ಯಾಸ.

ಜಿಲ್ಲಾಧಿಕಾರಿಗೆ ದೂರು
ಸೀತಾಂಗೋಳಿ ಪೇಟೆಯ ಈ ದುರವಸ್ಥೆಯ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ ಡಾ| ಡಿ.ಸಜಿತ್‌ಬಾಬು ಅವರಿಗೆ ದೂರು ಸಲ್ಲಿಸಿದ್ದು ಈ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ ಒದಗಿಸುವಂತೆ ಕೇಳಿಕೊಳ್ಳಲಾಗಿದೆ. ಕ್ಲಬ್‌ ಈ ನಿಟ್ಟಿನಲ್ಲಿ ದೃಢವಾದ ಹೆಜ್ಜೆಯನ್ನಿಟ್ಟಿದ್ದು ಈ ಪ್ರದೇಶದ ಸಮಸ್ಯೆಗೆ ಶಾಶ್ವತ ಪರಿಹಾರ ಕಾಣುವತ್ತ ಶ್ರಮಿಸುತ್ತಿದೆ ಎಂದು ಸೀತಾಂಗೊಳಿ ಸಂತೋಷ್‌ ಆರ್ಟ್ಸ್ ಆಂಡ್‌ ನ್ಪೋರ್ಟ್ಸ್ ಕ್ಲಬ್‌ ನ ಅಧ್ಯಕ್ಷರು ಥೋಮಸ್‌.ಡಿ”ಸೋಜಾ ಹೇಳಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.