ತುಕ್ಕು ಹಿಡಿದು ನಾಶದತ್ತ ಸರಿದ ಬೀಚ್‌ ಪಾರ್ಕ್‌


Team Udayavani, May 6, 2019, 6:10 AM IST

park

ಕಾಸರಗೋಡು: ನಗರವನ್ನು ಆಕರ್ಷಕವನ್ನಾಗಿ ಪರಿವರ್ತಿಸುವ ಮತ್ತು ಸ್ಥಳೀಯರಿಗೆ ಸಂಜೆ ಹೊತ್ತು ವಿಶ್ರಾಂತಿ ಪಡೆಯಲು ಸೌಕರ್ಯ ಕಲ್ಪಿಸುವುದಕ್ಕಾಗಿ ಕಾಸರಗೋಡು ನಗರದಲ್ಲಿ ಆರು ಪಾರ್ಕ್‌ ಗಳಿವೆ. ಆರಂಭ ಶೂರತನವೆಂಬಂತೆ ಪಾರ್ಕ್‌ಗಳು ತಲೆಯೆತ್ತುತ್ತಿದ್ದಾಗ ಈ ಪಾರ್ಕ್‌ಗಳು ನಗರಸಭೆಯ ಉದ್ದೇಶಗಳು ಈಡೇರು ತ್ತವೆ ಎಂದೇ ಪರಿಗಣಿಸಲಾಗಿತ್ತು. ಆದರೆ ಇಲ್ಲಿನ ಪಾರ್ಕ್‌ಗಳೆಲ್ಲ ಅವ್ಯವಸ್ಥೆಯ ಮತ್ತು ಸಮಾಜಕಂಟಕರ ಕೇಂದ್ರವಾಗಿ ಬದಲಾಗಿರುವುದು ನಿಜಕ್ಕೂ ಆತಂಕವನ್ನು ಹುಟ್ಟಿಸುತ್ತದೆ. ನಗರದಲ್ಲಿರುವ ಎಲ್ಲಾ ಪಾರ್ಕ್‌ಗಳು ಒಡೆದ ಮದ್ಯ ಬಾಟಲಿಗಳ ಕೇಂದ್ರಗಳಾಗಿ ಬದಲಾಗಿವೆ. ಈ ಸಾಲಿಗೆ “ಬೀಚ್‌ ಪಾರ್ಕ್‌’ ಸೇರ್ಪಡೆಗೊಂಡಿದೆ.

ಹಲವು ಯೋಜನೆಗಳು ಹೀಗೆ..! ಕಾಮಗಾರಿ ನಡೆದರೂ ಉದ್ಘಾಟನೆಗೆ ಮೀನಮೇಷ ಎಣಿಸುತ್ತಲೇ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಇದಕ್ಕೆ ಹಲವು ಉದಾಹರಣೆಗಳು ನಮ್ಮ ಮುಂದಿವೆ. ಇನ್ನು ಕೆಲವು ಶಿಲಾನ್ಯಾಸಗೊಂಡು ಹಲವು ವರ್ಷಗಳೇ ಸಂದರೂ ಕಾಮಗಾರಿ ಆರಂಭಗೊಳ್ಳುವುದೇ ಇಲ್ಲ. ಇಲ್ಲಿ ಹೇಳ ಹೊರಟಿರುವುದು ಮೊದಲ ಸಾಲಿಗೆ ಸೇರಿದ್ದು.

ಕಾಸರಗೋಡು ನಗರದಲ್ಲಿ ಪ್ರಕೃತಿಯನ್ನು ಸವಿಯಲು ಹಾಗೂ ಸಂಜೆಯ ಹೊತ್ತು ವಿಶ್ರಾಂತಿ ಪಡೆಯಲು ಸಾಕಷ್ಟು ಪಾರ್ಕ್‌ ಗಳಿವೆ. ಬಹುತೇಕ ಪಾರ್ಕ್‌ಗಳು ಅವ್ಯವಸ್ಥೆಯಿಂದ ಕೂಡಿದ್ದು, ಇದ್ದಬದ್ದ ಮಕ್ಕಳ ಆಟಿಕೆ ಸಾಮಗ್ರಿಗಳು ಕಿತ್ತು ಹೋಗಿವೆ. ಇಲ್ಲವೇ ಕಳವಾಗಿವೆ. ಇನ್ನು ಕೆಲವು ಮುರಿದು ಬಿದ್ದಿವೆೆ. ಆದರೆ ಈ ಚಿತ್ರದಲ್ಲಿರುವ ಪಾರ್ಕ್‌ ಕಾಮಗಾರಿ 2016ರಲ್ಲೇ ಪೂರ್ತಿಯಾಗಿತ್ತು. ಆದರೆ ಈ ಪಾರ್ಕ್‌ ಇನ್ನೂ ಅಧಿಕೃತವಾಗಿ ಉದ್ಘಾಟನೆಗೊಂಡಿಲ್ಲ. ಕಾಸರಗೋಡು ಕಸಬ ಕಡಪ್ಪುರದಲ್ಲಿ ನಿರ್ಮಿಸಲಾದ ಈ ಪಾರ್ಕ್‌ ಅಧಿಕೃತವಾಗಿ ಉದ್ಘಾಟನೆಗೊಳ್ಳದಿದ್ದರೂ ಜನರೇ ಪಾರ್ಕ್‌ ನೊಳಗೆ ನುಗ್ಗಿ ಉದ್ಘಾಟಿಸಿದ್ದಾರೆ ಎಂಬುದು ಬೇರೆ ಮಾತು. ಸುಣ್ಣ ಬಣ್ಣ ಬಳಿದು ಉದ್ಘಾಟನೆಗೆ ಸಜ್ಜುಗೊಂಡಿತ್ತು. ಪಾರ್ಕ್‌ ಗೆ ಕಾಂಪೌಂಡು ನಿರ್ಮಾಣವಾಗಿತ್ತು.

ಗೇಟ್‌ ಹಾಕಲಾಗಿತ್ತು. ಪಾರ್ಕ್‌ನೊಳಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆಯೂ ಇದೆ. ಹುಲ್ಲು ಬೆಳೆದು ಒಣಗಿದೆ. ಆದರೆ ಆಸನ ಮುರಿದು ಬಿದ್ದಿದೆ.

ವಿದ್ಯುತ್‌ ದೀಪಗಳನ್ನು ಅಳವಡಿಸಲು ಸಿದ್ಧಪಡಿಸಿದ ಅಲಂಕೃತ ಕಂಬಗಳು ಮುರಿದು ಬೀಳುವ ಸ್ಥಿತಿಯಲ್ಲಿವೆ. ಈ ಕಂಬಗಳೂ ತುಕ್ಕು ಹಿಡಿಯುತ್ತಿವೆ. ಪಾರ್ಕ್‌ನ ಗೇಟ್‌ ತುಕ್ಕು ಹಿಡಿದು ಕಳೆಕುಂದಿದೆ. ಈಗ 24 ಗಂಟೆಯೂ ಪಾರ್ಕ್‌ನ ಗೇಟ್‌ ತೆರೆದೇ ಇರುತ್ತದೆ.

ಒಂದೆಡೆ ಸಮುದ್ರ. ಇನ್ನೊಂದೆಡೆ ಹೊಳೆ ಹರಿಯುತ್ತಿದೆ. ಇದರ ಮಧ್ಯೆ ಬೀಚ್‌ ಪಾರ್ಕ್‌ ಸ್ಥಾಪಿಸಲಾಗಿದೆ. ಈ ಪಾರ್ಕ್‌ನಲ್ಲಿ ಕುಳಿತುಕೊಂಡು ವಿಶ್ರಾಂತಿ ಪಡೆಯುವ ಜತೆಗೆ ಪ್ರಕೃತಿ ಸೌಂದರ್ಯವನ್ನು ಸವಿಯಬಹುದು. ಪಾರ್ಕ್‌ನಿಂದ ಕೆಲವೇ ದೂರದಲ್ಲಿ ನಿರ್ಮಾಣ ಹಂತದಲ್ಲಿರುವ ಮೀನುಗಾರಿಕಾ ಬಂದರು ಕಾಣಬಹುದು. ಈ ಪಾರ್ಕ್‌ಗೆ ಹೋಗಲು ಉತ್ತಮ ರಸ್ತೆಯೂ ಇದೆ. ರಸ್ತೆಗೆ ವಿದ್ಯುತ್‌ ವ್ಯವಸ್ಥೆಯೂ ಇದೆ. ಆದರೆ ಈ ಪಾರ್ಕ್‌ ಮಾತ್ರ ತನ್ನ ದುಸ್ಥಿತಿಯ ಬಗ್ಗೆ ಕಂಬನಿ ಸುರಿಸುತ್ತಿದೆ.

ಕಡಲ ತೀರದಲ್ಲಿ ಬೀಸುವ ಉಪ್ಪಿನ ತೇವಾಂಶ ಗಾಳಿಯಿಂದಾಗಿ ಕಬ್ಬಿಣಕ್ಕೆ ಶೀಘ್ರವೇ ತುಕ್ಕು ಹಿಡಿಯುತ್ತದೆ. ಇಲ್ಲಿ ಕೂಡ ಇದೇ ಕಾರಣದಿಂದ ಗೇಟ್‌, ಆಸನಗಳು, ವಿದ್ಯುತ್‌ ದೀಪ ಬಳಸುವ ಕಂಬಗಳು ತುಕ್ಕು ಹಿಡಿದು ನಾಶದ ಅಂಚಿಗೆ ಸರಿದಿವೆೆ. ಇಲ್ಲಿನ ವಿಶ್ರಾಂತಿ ಮಂದಿರ, ಕಾಂಪೌಂಡ್‌ ಮೊದಲಾದವುಗಳಿಗೆ ಬಳಿದ ಬಣ್ಣ ಮಾಸಿ ಹೋಗಿದ್ದು, ಬಣ್ಣ ಕಳೆದುಕೊಂಡಿದೆ. ಲಕ್ಷಾಂತರ ರೂ. ವೆಚ್ಚ ಮಾಡಿದ್ದರೂ ಇದನ್ನು ಸಾರ್ವಜನಿಕರಿಗೆ ವ್ಯವಸ್ಥಿತವಾಗಿ ಬಳಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಕೊರಗು ಸ್ಥಳೀಯರಿಗಿದೆ.

  • ಪ್ರದೀಪ್‌ ಬೇಕಲ್‌

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.