3 ದಿನಗಳ ಬ್ಯಾರಿ ಮೇಳ-2019ಕ್ಕೆ ಚಾಲನೆ
Team Udayavani, Feb 9, 2019, 12:24 AM IST
ಮಂಗಳೂರು: ಪ್ರತಿಯೊಬ್ಬರು ಪರಸ್ಪರ ಶಾಂತಿ-ಸೌಹಾರ್ದದಿಂದ ಬಾಳುವ ಮೂಲಕ ಸುಂದರ ಮಂಗಳೂರು ನಿರ್ಮಾಣ ಮಾಡಬೇಕು ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ಬ್ಯಾರಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ವತಿಯಿಂದ ಪುರಭವನದಲ್ಲಿ ಶುಕ್ರವಾರದಿಂದ 3 ದಿನಗಳ ಕಾಲ ಆಯೋಜಿಸಿದ್ದ ಬ್ಯಾರಿ ಮೇಳ-2019 ಉದ್ಘಾಟಿಸಿ ಅವರು ಮಾತನಾಡಿದರು. ಬಿಸಿಸಿಐ ಜೀವಮಾನ ಶ್ರೇಷ್ಠ ಪ್ರಶಸ್ತಿಯನ್ನು ಬಿ. ಅಹ್ಮದ್ ಹಾಜಿ ಮೊಹಿಯುದ್ದೀನ್, ಶಿಕ್ಷಣ ರಂಗದ ಸೇವೆಗಾಗಿ ಡಾ| ಎಂ. ಅಬ್ದುಲ್ ರೆಹಮಾನ್, ವ್ಯವಹಾರ ಕ್ಷೇತ್ರದ ಅನಿವಾಸಿ ಭಾರತೀಯ ಪ್ರಶಸ್ತಿಯನ್ನು ಶೇಖ್ ಕರ್ನಿರೆ, ವ್ಯವಹಾರ ಸಾಧನೆಗಾಗಿ ಎ.ಕೆ. ಅಹ್ಮದ್ ಅವರಿಗೆ ಬ್ಯಾರಿ ಮೇಳ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಚಿವ ಯು.ಟಿ. ಖಾದರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಪ್ರದರ್ಶನ ಮಳಿಗೆಯನ್ನು ಯೇನ ಪೊಯ ವಿ.ವಿ.ಯ ಕುಲಾಧಿಪತಿ ವೈ. ಅಬ್ದುಲ್ಲಾ ಕುಂಞಿ ಉದ್ಘಾಟಿಸಿದರು.
ಬಿಸಿಸಿಐ ಅಧ್ಯಕ್ಷ ಎಸ್.ಎಂ. ರಶೀದ್, ವಿ. ಪರಿಷತ್ ಸದಸ್ಯ ಬಿ.ಎಂ. ಫಾರೂಕ್, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಮೊದಿನ್ ಬಾವಾ, ಮೇಯರ್ ಭಾಸ್ಕರ್ ಕೆ., ಮೊಹಮ್ಮದ್ ಮಸೂದ್, ಯು.ಕೆ. ಮೋನು, ಇಬ್ರಾಹಿಂ, ಮೊಹಮ್ಮದ್ ಕರಂಬಾರು, ಅಬ್ದುಲ್ ಹಮೀದ್, ಹಿದಾಯತ್ ಮತ್ತಿತರರಿದ್ದರು.
ಮುಡಿಪಿನಲ್ಲಿ ಅಗ್ನಿಶಾಮಕ ಠಾಣೆ
ಇದೇ ವೇಳೆ ಮಾತನಾಡಿದ ಎಂ.ಬಿ. ಪಾಟೀಲ್, ಮುಡಿಪುವಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣ ಮಾಡುವ ಬಗ್ಗೆ ಈಗಾಗಲೇ ಬೇಡಿಕೆ ಬಂದಿದೆ. ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ನಿರ್ಮಾಣಕ್ಕೆ ಸರಕಾರ ಬದ್ಧವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?