ಮಲೇರಿಯಾ ಬಾಧಿತರ ಪಟ್ಟಿಯಲ್ಲಿ ಮಂಗಳೂರಿಗೆ ಮೊದಲ ಸ್ಥಾನ!

ವಲಸಿಗರಿಂದ ರೋಗಾಣು ಪ್ರಸರಣ: ನಿಯಂತ್ರಣಕ್ಕೆ ಅಧಿಕಾರಿಗಳ ಹರಸಾಹಸ

Team Udayavani, Jul 19, 2019, 5:06 AM IST

t-51

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಲೇರಿಯಾ ಬಾಧಿತರ ಪ್ರಮಾಣ ಇಳಿಕೆಯಾಗುತ್ತಿದ್ದರೂ ರಾಜ್ಯ ಮಟ್ಟದಲ್ಲಿ ಉಭಯ ಜಿಲ್ಲೆಗಳಿಗೆ ಮೊದಲೆರಡು ಸ್ಥಾನ ಖಾಯಂ ಆಗಿದೆ. ಮಂಗಳೂರಿಗಂತೂ ಮೊದಲ ಸ್ಥಾನ!

ಈ ಎರಡೂ ಜಿಲ್ಲೆಗಳಲ್ಲಿ ಹೆಚ್ಚಿರುವ ಅನ್ಯ ರಾಜ್ಯಗಳ ವಲಸೆ ಕಾರ್ಮಿಕರು ರೋಗ ಪ್ರಸರಣದಲ್ಲಿ ಪ್ರಧಾನ ಪಾತ್ರ ವಹಿಸುತ್ತಿರುವುದು ಮತ್ತು ಸೊಳ್ಳೆ ಉತ್ಪತ್ತಿಗೆ ಇರುವ ಪೂರಕ ವಾತಾವರಣ ಇದಕ್ಕೆ ಮುಖ್ಯ ಕಾರಣ. ಸಮುದ್ರದ ಹಿನ್ನೀರು ಕೂಡ ಸೊಳ್ಳೆ ಉತ್ಪತ್ತಿಯಲ್ಲಿ ಮುಖ್ಯ ಪಾತ್ರ ವಹಿಸುತ್ತಿದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಳಿಕದ ಸ್ಥಾನ ಕೊಪ್ಪಳ, ಬಾಗಲಕೋಟೆ, ಯಾದಗಿರಿ, ರಾಯಚೂರು ಜಿಲ್ಲೆಗಳದು.

1990ರ ಬಳಿಕ ಮಂಗಳೂರಿನಲ್ಲಿ ನಿರ್ಮಾಣ ಚಟುವಟಿಕೆಗಳು ವೇಗ ಪಡೆದುಕೊಂಡ ಕಾರಣ ವಲಸಿಗರ ಸಂಖ್ಯೆಯೂ ಹೆಚ್ಚಿತು. ಅವರ ದೇಹದಲ್ಲಿರುವ ರೋಗಾಣುಗಳು ಸೊಳ್ಳೆಗಳ ಮೂಲಕ ಇತರರ ದೇಹ ಪ್ರವೇಶಿಸಿ ರೋಗ ವ್ಯಾಪಿಸುತ್ತಿದೆ; ನಿರ್ಮಾಣ ಸ್ಥಳಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿರುವುದೂ ಮಲೇರಿಯಾಕ್ಕೆ ಪೂರಕ ಎಂದು ಮನಪಾ ಆರೋಗ್ಯಾಧಿಕಾರಿ ಡಾ| ಮಂಜಯ್ಯ ಶೆಟ್ಟಿ ಮತ್ತು ಉಡುಪಿ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ಪ್ರಶಾಂತ್‌ ಹೇಳುತ್ತಾರೆ.

ಪ್ರಮಾಣ ಇಳಿಕೆ
ಮಂಗಳೂರು ನಗರ ಮಲೇರಿಯಾ ಪ್ರಮಾಣದಲ್ಲಿ ಅಗ್ರಸ್ಥಾನದಲ್ಲಿದ್ದರೂ ಕಳೆದ ವರ್ಷಕ್ಕೆ ಹೋಲಿಸಿ ದರೆ ಈ ಬಾರಿ ಇಳಿಕೆಯಾಗಿದೆ. 2019ರ ಜೂನ್‌ ವರೆಗೆ 814 ಅಧಿಕೃತ ಮಲೇರಿಯಾ ಪ್ರಕರಣ ಕಂಡು ಬಂದಿದ್ದು, ಕ್ಯೂಬಿಸಿ ಪರೀಕ್ಷಾ ವಿಧಾನದ ಪ್ರಕಾರ ನೋಡಿದರೆ ಪ್ರಕರಣ 1,500 ದಾಟಿರುವ ಸಾಧ್ಯತೆ ಇದೆ. ಕ್ಯೂಬಿಸಿ ಪರೀಕ್ಷಾ ವಿಧಾನದಲ್ಲಿ ತತ್‌ಕ್ಷಣ ಫ‌ಲಿತಾಂಶ ಸಾಧ್ಯವಾಗುತ್ತದೆ. ಪ್ರಸ್ತುತ ಈ ವ್ಯವಸ್ಥೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಾತ್ರವಿದೆ ಎನ್ನುತ್ತಾರೆ ದಕ್ಷಿಣ ಕನ್ನಡ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ನವೀನ್‌ ಕುಮಾರ್‌.

ಮಂಗಳೂರಿನಲ್ಲೇ ಯಾಕೆ ಹೆಚ್ಚು?
ಮಂಗಳೂರಿನಲ್ಲಿ ವಾತಾವರಣದಲ್ಲೂ ತೇವಾಂಶ ಸಾಮಾನ್ಯವಾಗಿ ಹೆಚ್ಚು ಇರುವುದು ಸೊಳ್ಳೆಗಳ ಸಂತಾನೋತ್ಪತ್ತಿಗೆ ಪೂರಕವಾಗಿದೆ.

ಮಂಗಳೂರು ನಗರದಲ್ಲಿ ಕ್ಯೂಬಿಸಿ ಮಲೇರಿಯಾ ಪರೀಕ್ಷಾ ವಿಧಾನ (ಕ್ಯೂಬಿಸಿ) ಪ್ರಕಾರ ಮಲೇರಿಯಾ ಪ್ರಮಾಣ ದಾಖಲು ಮಾಡಲಾಗಿದೆ. ಅದರಂತೆ ಜನವರಿಯಲ್ಲಿ 342 (ಕಳೆದ ವರ್ಷ 431), ಫೆಬ್ರವರಿಯಲ್ಲಿ 182 (281), ಮಾರ್ಚ್‌ನಲ್ಲಿ 180 (329), ಎಪ್ರಿಲ್ನಲ್ಲಿ 117 (292), ಮೇ ತಿಂಗಳಿನಲ್ಲಿ 106 (372), ಜೂನ್‌ನಲ್ಲಿ 166 (741) ಪ್ರಕರಣಗಳು ದಾಖಲಾಗಿವೆ. ಉಡುಪಿ ಜಿಲ್ಲೆಯಲ್ಲಿ ಈ ವರ್ಷ ಇಲ್ಲಿಯವರೆಗೆ 35 ಪ್ರಕರಣಗಳು ದಾಖಲಾಗಿವೆ.

-ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.