ಅಶಕ್ತರ ನೆರವಿಗೆ ಬಾಟಲ್‌ ನೀರು ಮಾರುವ ಯುವಕರ ತಂಡ

ನಾಲ್ಕು ಕಡೆ ಯಶಸ್ವಿಯಾದ ರಾಜಕೇಸರಿ | ಇಂದು ಬಿ.ಸಿ. ರೋಡ್‌ನ‌ಲ್ಲಿ ನೀರು ಮಾರಾಟ

Team Udayavani, Dec 15, 2019, 5:32 AM IST

zx-16

ಬಂಟ್ವಾಳ: ಬೆಳ್ತಂಗಡಿ ತಾ|ನಲ್ಲಿ ಹುಟ್ಟಿಕೊಂಡಿರುವ ರಾಜಕೇಸರಿ ಸಂಘಟನೆ ಕುಡಿಯುವ ನೀರಿನ ಬಾಟಲ್‌(ಮಿನರಲ್‌ ವಾಟರ್‌) ಮಾರಾಟ ಮಾಡಿ, ಲಾಭಾಂಶವನ್ನು ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡುತ್ತಿದೆ. ಈಗಾಗಲೇ 4 ಕಡೆಗಳಲ್ಲಿ ಮಿನರಲ್‌ ವಾಟರ್‌ ಮಾರಾಟ ಮಾಡಿ ಯಶಸ್ವಿಯಾ ಗಿದೆ. 5ನೇ ಕಾರ್ಯಕ್ರಮವಾಗಿ ಬಾಲಕಿಗೆ ನೆರವಾಗಲು ಡಿ. 15ರಂದು ಬಿ.ಸಿ. ರೋಡ್‌ ಬಸ್‌ ನಿಲ್ದಾಣದಲ್ಲಿ ಮಿನರಲ್‌ ವಾಟರ್‌ ಮಾರಾಟ ಮಾಡಲಿದೆ. ಸಂಘಟನೆ ನೀರು ಮಾರಾಟ ಮಾಡಿ ಬಂದ ಆದಾಯವನ್ನು ರೋಗಿಗಳಿಗೆ ನೀಡಿ ಚಿಕಿತ್ಸೆಗೆ ನೆರವಾಗುತ್ತಿದೆ.

4 ಕಡೆ ಯಶಸ್ವಿ ಕಾರ್ಯ
ರಾಜಕೇಸರಿ ಸಂಘಟನೆ ಪ್ರಥಮ ಬಾರಿಗೆ ಬೆಳ್ತಂಗಡಿಯಲ್ಲಿ ಈ ಕಾರ್ಯ ಮಾಡಿದ್ದು, ಮುಂಡಾಜೆಯ ಬಾಲಕಿ ಯೊಬ್ಬಳಿಗೆ 40 ಸಾವಿರ ರೂ. ನೆರವು ನೀಡಿದೆ. 2ನೇ ಹಂತದಲ್ಲಿ ಉಡುಪಿ ಸರ್ವೀಸ್‌ ಬಸ್‌ ನಿಲ್ದಾಣದಲ್ಲಿ ಈ ಕಾರ್ಯ ಮಾಡಿದ್ದು, ಕಣ್ಣು ಕಾಣದ ವ್ಯಕ್ತಿ, ಅಪಘಾತದ ಗಾಯಾಳು, ಕ್ಯಾನ್ಸರ್‌ ಪೀಡಿತ ವ್ಯಕ್ತಿಗೆ ತಲಾ 20 ಸಾವಿರ ರೂ. (ಒಟ್ಟು 60 ಸಾ. ರೂ.) ನೆರವು ನೀಡಿದೆ. 3ನೇ ಹಂತದಲ್ಲಿ ಮೂಡುಬಿದಿರೆ ಪೇಟೆಯಲ್ಲಿ ಈ ಕಾರ್ಯ ಮಾಡಿದ್ದು, ಒಟ್ಟು 44,444 ರೂ.ಗಳನ್ನು ಪಣಪಿಲ ಗ್ರಾಮದ 3 ವರ್ಷ ಪ್ರಾಯದ ಮಗುವಿನ ಚರ್ಮ ರೋಗದ ಚಿಕಿತ್ಸೆಗೆ ನೆರವಾಗಿದೆ. ಬಳಿಕ 4ನೇ ಹಂತದಲ್ಲಿ ಬೆಳ್ತಂಗಡಿಯಲ್ಲಿ ಮತ್ತೆ ಈ ಕಾರ್ಯ ಮಾಡಿ, ಕಡಿರುದ್ಯಾವರ ಗ್ರಾಮದ ನಿವಾಸಿಯೊಬ್ಬರಿಗೆ 20 ಸಾವಿರ ರೂ.ಗಳನ್ನು ನೆರವಿನ ರೂಪದಲ್ಲಿ ನೀಡಿದೆ.

ಬಾಲಕಿಗೆ ನೆರವು
ಡಿ. 15ರಂದು ಬಿ.ಸಿ. ರೋಡ್‌ನ‌ಲ್ಲಿ ರಾಜಕೇಸರಿ ದ.ಕ. ಜಿಲ್ಲಾ ಘಟಕ, ಬಂಟ್ವಾಳ ತಾ|ನ ನೆಲ್ಲಿಗುಡ್ಡೆ ಬಸವನಬೈಲು ಘಟಕದ ಸಹಯೋಗದೊಂದಿಗೆ ರಾಜ ಕೇಸರಿಯ ಸಂಸ್ಥಾಪಕ ದೀಪಕ್‌ ಜಿ. ಮುಂದಾಳತ್ವದಲ್ಲಿ ಘಟಕದ ಅಧ್ಯಕ್ಷ ಪ್ರದೀಪ್‌ ಪೂಜಾರಿ, ಸಂಚಾಲಕ ಸಂದೇಶ್‌ ಶೆಟ್ಟಿ ನೇತೃತ್ವದಲ್ಲಿ ಬಾಟಲ್‌ ನೀರು ಮಾರಾಟ ಮಾಡಲಿದೆ.

ಬಂಟ್ವಾಳ ತಾ|ನ ರುಕ್ಮಯ್ಯ ನಾಯ್ಕ ಅವರ ಪುತ್ರಿ ಚೈತ್ರಾ ಅನಾರೋಗ್ಯದಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೆ ನೆರವಾಗಲು ಬಿ.ಸಿ. ರೋಡ್‌ ಬಸ್‌ ನಿಲ್ದಾಣದಲ್ಲಿ ಈ ಕಾರ್ಯ ಮಾಡಲಿದೆ. ಸುಮಾರು 40 ಮಂದಿ ಯುವಕರು ಪಾಲ್ಗೊಳ್ಳಲಿದ್ದು, 30 ಸಾವಿರ ರೂ. ನೆರವಾಗುವ ಉದ್ದೇಶವಿದೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.

ಅರ್ಧ ಲೀಟರ್‌ ಬಾಟಲ್‌
ಸಂಘಟನೆ ಪ್ರತಿಯೊಂದು ಕಡೆಯೂ ಅರ್ಧ ಲೀ. ನೀರಿನ ಬಾಟಲ್‌ ಮಾರಾಟ ಮಾಡಿದ್ದು, ಬಾಟಲ್‌ಗ‌ಳನ್ನು ರಖಂ ದರದಲ್ಲಿ ಪಡೆದು ಬಳಿಕ ಅದನ್ನು 10 ರೂ.ಗಳಿಗೆ ಮಾರಾಟ ಮಾಡುತ್ತದೆ. ಖರ್ಚನ್ನು ಕಳೆದು ಉಳಿಕೆ ಹಣದಲ್ಲಿ ನೆರವಿನ ಕಾರ್ಯ ಮಾಡುತ್ತದೆ.

ಉತ್ತಮ ಬೆಂಬಲ
ಬಾಟಲ್‌ ನೀರು ಮಾರಿ ಅಶಕ್ತರಿಗೆ ನೆರವಾಗುವ ಕಾರ್ಯವನ್ನು ನಮ್ಮ ಸಂಘಟನೆ ಮಾಡುತ್ತಿದ್ದು, ಈಗಾಗಲೇ 4 ಕಡೆಗಳಲ್ಲಿ ಯಶಸ್ವಿಯಾಗಿದ್ದೇವೆ. ನಮ್ಮ ಉದ್ದೇಶವನ್ನು ತಿಳಿಸಿ ಜನರ ಬಳಿ ಹೋದಾಗ ಉತ್ತಮ ಬೆಂಬಲ ವ್ಯಕ್ತಪಡಿಸಿದ್ದಾರೆ.
 - ದೀಪಕ್‌ ಜಿ. ರಾಜಕೇಸರಿ ಸಂಘಟನೆ ಸಂಸ್ಥಾಪಕರು

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.