ಬೆಳ್ತಂಗಡಿ ಪ್ರವಾಹ ಹಾನಿ ಕಂಡು ಮುಖ್ಯಮಂತ್ರಿ ದಿಗ್ಭ್ರಮೆ: ಹೊಸಮನೆ ನಿರ್ಮಾಣ ಭರವಸೆ
Team Udayavani, Aug 12, 2019, 1:14 PM IST
ಬೆಳ್ತಂಗಡಿ: ನೆರೆಪೀಡಿತ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ವೀಕ್ಷಣೆಗೆ ಬೆಳ್ತಂಗಡಿಗೆ ಆಗಮಿಸಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕುಕ್ಕಾವು ಪ್ರದೇಶಕ್ಕೆ ಭೇಟಿ ನೀಡಿದರು.
ಪ್ರವಾಹದಿಂದ ಉಂಟಾದ ಸಮಸ್ಯೆಯ ಕೇಳಿ ಗಂಭೀರತೆ ಕೇಳಿ ಮುಖ್ಯಮಂತ್ರಿ ಯಡಿಯೂರಪ್ಪ ಆತಂಕ ವ್ಯಕ್ತಪಡಿಸಿದರು.
ಶಾಸಕ ಹರೀಶ್ ಪೂಂಜ, ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳೀನ್ ಕುಮಾರ್, ಪ್ರಭಾಕರ್ ಭಟ್ ಮತ್ತಿರರು ಮುಖ್ಯಮಂತ್ರಿಯವರಿಗೆ ನೆರೆ ಹಾನಿಯ ಬಗ್ಗೆ ಮಾಹಿತಿ ನೀಡಿದರು.
ಹೊಸಮನೆ ನಿರ್ಮಾಣ ಭರವಸೆ
ಭಾರಿ ಮಳೆ, ಪ್ರವಾಹದಿಂದಾಗಿ ಈ ಭಾಗದಲ್ಲಿ 321 ಭಾಗಶಃ ಹಾನಿಯಾದ ಮನೆಗಳಿದ್ದು, 275 ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ. ತಾತ್ಕಾಲಿಕ ಪ್ರತಿ ಕುಟುಂಬಕ್ಕೆ 10 ಸಾವಿರ ಪರಿಹಾರ ಘೋಷಣೆ ಮಾಡಿದ ಸಿಎಂ, ಸಂಪೂರ್ಣ ಹಾನಿಯಾದ ಮನೆಗೆ ಹೊಸಮನೆ ನಿರ್ಮಾಣ ಭರವಸೆ ನೀಡಿದರು.
ಹೊಸ ಮನೆ ನಿರ್ಮಾಣ ಆಗುವವರೆಗೆ ತಾತ್ಕಾಲಿವಾಗಿ 5 ಸಾವಿರ ಬಾಡಿಗೆ, ಪ್ರತಿ ಮನೆ ರಿಪೇರಿಗೆ 1 ಲಕ್ಷ ತಕ್ಷಣ ಪರಿಹಾರ, ಹೊಸ ಮನೆ ನಿರ್ಮಾಣಕ್ಕೆ 5 ಲಕ್ಷ ಕೊಡುವ ಘೋಷಣೆ ಮಾಡಿದರು. ಸೈಟ್ ಇಲ್ಲದವರಿಗೆ ಹೊಸ ಸೈಟ್ ನೀಡುವ ಭರವಸೆ ನೀಡಿದ ಅವರು, 15 ದಿವಸದಲ್ಲಿ ಕೆಲಸ ಶುರು ಮಾಡಲು ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ