ಗರ್ಭಿಣಿಯರ ಆಹಾರ ಸೇವನೆಯಲ್ಲಿ ಎಚ್ಚರಿಕೆ ಅಗತ್ಯ


Team Udayavani, Nov 19, 2019, 5:00 AM IST

cc-28

ಎಲ್ಲ ಹೆಣ್ಣು ಮಕ್ಕಳ ಬದುಕಿನ ಮಹತ್ತರವಾದ ಘಟ್ಟ ಗರ್ಭಧಾರಣೆ. ಈ ಸಮಯದಲ್ಲಿ ಅವಳು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಅತ್ಯಂತ ಸೂಕ್ಷ್ಮವಾದ ಈ ಅವಧಿಯಲ್ಲಿ ದೇಹದಲ್ಲಿನ ಬದಲಾವಣೆಯೊಂದಿಗೆ ಮಾನಸಿಕವಾಗಿಯೂ ಹಲವು ವ್ಯತ್ಯಾಸಗಳು ಕಂಡುಬರುತ್ತವೆ. ಸದಾ ತಾನು ಜನ್ಮ ನೀಡುವ ಮಗುವಿನ ಕುರಿತಾಗಿ ಜಪಿಸುವ ಅವಳು ತನ್ನ ಕಂದಮ್ಮನ ಬಗ್ಗೆ ಸಾವಿರಾರು ಆಸೆ-ಕನಸುಗಳನ್ನು ಇಟ್ಟುಕೊಂಡಿರುತ್ತಾಳೆ.

ಆ ಕನಸನ್ನು ಹೆಮ್ಮರವಾಗಿ ಬೆಳೆಸಬೇಕಾದರೆ ದೇಹದ ಪೋಷಣೆಯೊಂದಿಗೆ ಈ ಸಂದರ್ಭದಲ್ಲಿ ಆಕೆ ಸೇವಿಸುವ ಆಹಾರ ಮತ್ತು ಪಾನೀಯಗಳ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ.

ಅಲೋವೆರಾ : ಹೆಣ್ಮಕ್ಕಳ ತ್ವಚೆಯನ್ನು ಹೆಚ್ಚಿಸುವ ಶಕ್ತಿ ಇರುವ ಈ ಆಹಾರ ಪದಾರ್ಥ ಗರ್ಭಿಣಿಯರ ಆಹಾರ ಕ್ರಮಗಳಿಂದ ಅಂತರ ಕಾಯ್ದುಕೊಳ್ಳುವುದು ಉತ್ತಮ. ಅಲೋವೆರಾ ಮಿಶ್ರೀತ ಪಾನೀಯ, ಆಹಾರ ಸೇವನೆ ಒಳಿತಲ್ಲ. ಇದರ ಸೇವನೆಯಿಂದ ರಕ್ತಸ್ರಾವ ಉಂಟಾಗುವ ಅವಕಾಶ ಇದ್ದು, ಗರ್ಭಪಾತದಂತಹ ಅಪಾಯಕ್ಕೂ ಕಾರಣವಾಗಬಹುದು.

ಪಪ್ಪಾಯ : ತಾಯ್ತನವನ್ನು ಎದುರು ನೋಡುತ್ತಿರುವ ಮಹಿಳೆಯರು ಪಪ್ಪಾಯವನ್ನು ತಿನ್ನುವುದು ಒಳ್ಳೆಯದಲ್ಲ. ಪಪ್ಪಾಯ ಕಾಯಿಯ ಪದಾರ್ಥಗಳನ್ನು ತಿಂದರೆ ಗರ್ಭಪಾತವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ಹಣ್ಣಿನಲ್ಲಿರುವ ಕಿಣ್ವ ಕಣಗಳು ಗರ್ಭಾಶಯವನ್ನು ಕುಗ್ಗಿಸುವುದಲ್ಲದೆ, ಗರ್ಭಪಾತವನ್ನು ಉಂಟು ಮಾಡಬಹುದು.

ಅನಾನಸ್‌: ಗರ್ಭಿಣಿಯರ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಫ‌ಲಗಳಲ್ಲಿ ಅನಾನಸ್‌ ಕೂಡ ಒಂದಾಗಿದ್ದು, ಇದರಲ್ಲಿರುವ ಬ್ರೊಮಲೆನ್‌ ಎಂಬ ಅಂಶ ಗರ್ಭಾಶಯದ ಸ್ನಾಯುವಿನ ಮೇಲೆ ಪರಿಣಾಮ ಬೀರುತ್ತದೆ.

ಸೋಯಾ ಸಾಸ್‌: ಬಸುರಿ ಮಹಿಳೆಯರು ತೆಗೆದುಕೊಳ್ಳುವ ಆಹಾರದಲ್ಲಿ ಸೋಯಾ ಸಾಸ್‌ ಅಂತಹ ಪದಾರ್ಥಗಳನ್ನು ಬಳಸದಿದ್ದರೆ ಒಳಿತು. ಇದರ ಸೇವೆನೆಯಿಂದ ಗರ್ಭಿಣಿಯರ ರಕ್ತದೊತ್ತಡ ಹೆಚ್ಚಾಗುವುದರೊಂದಿಗೆ ಗರ್ಭಧಾರಣೆ ಮೇಲೆಯೂ ಪರಿಣಾಮ ಬೀರುತ್ತದೆ.

ಹಸಿ ಮೊಟ್ಟೆ: ಗರ್ಭಿಣಿ ಮಹಿಳೆಯರು ಹಸಿ ಮೊಟ್ಟೆ ಮತ್ತು ಮೊಟ್ಟೆಯ ಹಳದಿಯನ್ನು ಸೇವಿಸುವುದರಿಂದ ಗರ್ಭಪಾತವಾಗುವ ಸಾಧ್ಯತೆ ಇದ್ದು, ಮೆಯೊನಿಸ್‌ಗಳ ತಯಾರಿಕೆಯಲ್ಲಿಯೂ ಮೊಟ್ಟೆಯನ್ನು ಬಳಸುವುದರಿಂದ ಇದನ್ನು ಸೇವಿಸುವುದು ಕೂಡ ಅಪಾಯಕಾರಿ.

ಗರ್ಭಾವಸ್ಥೆಯ ಸಮಯದಲ್ಲಿ ಸೇವಿಸಲು ಅನರ್ಹವಾದ ಕೆಲವೊಂದು ಆಹಾರಗಳನ್ನು ಇಲ್ಲಿ ತಿಳಿಸಿದ್ದು, ಈ ಆಹಾರಗಳಿಂದ ದೂರವಿರುವುದು ಉತ್ತಮ.

- ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.