ಕಲ್ಮಕಾರು ಶೆಟ್ಟಿಕಟ್ಟ: ಬಿದಿರು ಸಂಕವೇ ಆಧಾರ

ಮಳೆಗಾಲದಲ್ಲಿ ಮಕ್ಕಳು ಅಪಾಯಕಾರಿಯಾಗಿ ಹೊಳೆ ದಾಟಬೇಕು

Team Udayavani, Jun 20, 2019, 5:00 AM IST

d-20

ಸುಬ್ರಹ್ಮಣ್ಯ: ಮಳೆಗಾಲ ಆರಂಭವಾಯಿತೆಂದರೆ ಇಲ್ಲಿಯವರಿಗೆ ಸಂಕಷ್ಟದ ಸರಮಾಲೆ ಶುರುವಿಟ್ಟು ಕೊಳ್ಳುತ್ತದೆ. ಮಕ್ಕಳಿಗೆ ಹೊಳೆ ದಾಟುವ ಚಿಂತೆ. ಹೆತ್ತವರಿಗೆ ಮಕ್ಕಳ ಪ್ರಾಣದ ಭೀತಿ. ಅಲುಗಾಡುತ್ತಿರುವ ಬಿದಿರಿನ ತೂಗು ಸೇತುವೆಯ ಮೇಲೆ ಸರ್ಕಸ್‌ ಮಾಡುತ್ತ ತೆರಳಬೇಕಾದ ಸ್ಥಿತಿ ಕಲ್ಮಕಾರು ಗ್ರಾಮದ ಶೆಟ್ಟಿಕಟ್ಟ ನಿವಾಸಿಗಳದು.

ಕಲ್ಮಕಾರು ಗ್ರಾಮದಿಂದ ಅಂಜನಕಜೆ ಕೊಪ್ಪಡ್ಕ ಗುಳಿಕಾನ ಗುಡ್ಡೆಕಾನ ಪೆರ್ಮುಕಜೆ ಪ್ರದೇಶಗಳನ್ನು ತಲುಪಲು ಶೆಟ್ಟಿಕಜೆ ಎನ್ನುವಲ್ಲಿ ಹರಿಯುವ ಹೊಳೆಗೆ ಸೇತುವೆ ನಿರ್ಮಿಸಬೇಕಿದೆ. ಮಳೆಗಾಲದಲ್ಲಿ ಈ ಹೊಳೆ ನೆರೆಯಿಂದ ತುಂಬಿ ಹರಿದು ಸ್ಥಳೀಯರ ಸಂಚಾರಕ್ಕೆ ಅಡಚಣೆ ಯಾಗುತ್ತಿದೆ. ಕಲ್ಮಕಾರು ಅಂಗನವಾಡಿ, ಪ್ರಾಥಮಿಕ ಶಾಲೆ, ಇತರೆಡೆಯ ಶಾಲೆ, ಕಾಲೇಜುಗಳಿಗೆ ತೆರಳುವ ಮಕ್ಕಳು ಹೊಳೆ ದಾಟಿಯೇ ಬರಬೇಕು.

ಬಿದಿರಿನ ತೂಗು ಸೇತುವೆ
ಮಳೆಗಾಲದ ವೇಳೆ ಸ್ಥಳೀಯರು ತಾತ್ಕಾಲಿಕ ಬಿದಿರಿನ ತೂಗುಸೇತುವೆ ನಿರ್ಮಿಸಿಕೊಳ್ಳುತ್ತಾರೆ. ಈ ಬಾರಿ ಮರದ ಸೇತುವೆ ನಿರ್ಮಿಸಲು ನಿವಾಸಿಗಳು ಸಿದ್ಧರಾಗುತ್ತಿದ್ದಾರೆ. ಪ್ರತಿ ಮಳೆಗಾಲದಲ್ಲೂ ತುಂಬಿ ಹರಿಯುವ ಹೊಳೆಯನ್ನು ಅಲುಗಾಡುವ ತೂಗು ಸೇತುವೆಯಲ್ಲಿ ಪುಟ್ಟ ಮಕ್ಕಳು ದಾಟುವಾಗ ಭಯವಾಗುತ್ತದೆ.

ಹೆತ್ತವರು ಪ್ರತಿದಿನ ತಮ್ಮ ಮಕ್ಕಳನ್ನು ಬೆಳಗ್ಗೆ ಸೇತುವೆ ದಾಟಿಸಿ ಕಳುಹಿಸುತ್ತಾರೆ. ಸಂಜೆ ಶಾಲೆ ಬಿಡುವ ಹೊತ್ತಿಗೆ ಮತ್ತೆ ಹೊಳೆ ಬದಿಯಲ್ಲಿ ಬಂದು ನಿಲ್ಲುತ್ತಾರೆ. ಅವರ ಛತ್ರಿ, ಚೀಲಗಳನ್ನು ಪಡೆದು, ಕೈಹಿಡಿದು ಸಂಕವನ್ನು ದಾಟಿಸುತ್ತಾರೆ. ಕಲ್ಮಕಾರು ಶಾಲೆಗೆ ಇರುವಷ್ಟೇ ಇತಿಹಾಸ ಈ ಸಂಕಕ್ಕೂ ಇದೆ. ಇಲ್ಲಿ ತಾತ್ಕಾಲಿಕ ತೂಗುಸೇತುವೆ ನಿರ್ಮಾಣಕ್ಕೂ ಮೊದಲು ಮಕ್ಕಳು ನೆರೆ ನೀರಿನ ಪ್ರಮಾಣದ ಅಂದಾಜಿಲ್ಲದೆ ದಾಟುವ ಪ್ರಯತ್ನ ನಡೆಸಿ ಅಪಾಯಕ್ಕೆ ಸಿಲುಕಿದ ಘಟನೆಗಳು ಸಂಭವಿಸಿದ್ದುಂಟು.

ಹಲವು ಕುಟುಂಬಗಳು ಇಲ್ಲಿವೆ
ಕಲ್ಮಕಾರು – ಅಂಜನಕಜೆ, ಕೊಪ್ಪಡ್ಕ, ಗುಳಿಕಾನ, ಗುಡ್ಡೆಕಾನ, ಪೆರ್ಮುಕಜೆ ಮಧ್ಯೆ ಸಂಪರ್ಕ ಸಾಧಿಸುವ ಈ ಪ್ರದೇಶದಲ್ಲಿ 40ಕ್ಕೂ ಅಧಿಕ ಮನೆಗಳಿವೆ. ಪರಿಶಿಷ್ಟ ಜಾತಿ, ಪಂಗಡಗಳ ಕುಟುಂಬಗಳು ಇಲ್ಲಿವೆ. ಮಲೆಕುಡಿಯ ನಿವಾಸಿಗಳು ಇಲ್ಲಿದ್ದಾರೆ.

ಪಡಿತರ, ಆಹಾರ ಸಾಮಗ್ರಿ, ಅನಾರೋಗ್ಯ ಸಂದರ್ಭದಲ್ಲಿ ಚಿಕಿತ್ಸೆ ಇತ್ಯಾದಿಗಳಿಗೆ ಸೇತುವೆ ಆಶ್ರಯಿಸಿ ತೆರಳಬೇಕು. ಅನಾರೋಗ್ಯ ಪೀಡಿತರನ್ನು ಈ ಸೇತುವೆ ಮೇಲೆ ಕಂಬಳಿಯಲ್ಲಿ ಹೊತ್ತೂಯ್ಯಬೇಕು.
ಪರ್ಯಾಯ ರಸ್ತೆಯಿದ್ದರೂ ಅದಕ್ಕಾಗಿ ಸುತ್ತು ಬಳಸಿ ತೆರಳಬೇಕು. ಅಲ್ಲಿಯೂ ಹೊಳೆ ಸಿಗುತ್ತದೆ. ಅದು ನೆರೆಗೆ ತುಂಬಿ ಹರಿಯುವುದರಿಂದ ಆ ರಸ್ತೆಯೂ ಮಳೆಗಾಲದಲ್ಲಿ ಪ್ರಯೋಜನಕ್ಕೆ ಬರುವು ದಿಲ್ಲ. ಕುಟುಂಬಗಳು ವಾಸವಿರುವ ಈ ಪ್ರದೇಶದ ಸುತ್ತ ಹೊಳೆ ಹರಿಯುತ್ತಿ ರುವುದರಿಂದ ಈ ಊರು ದ್ವೀಪದಂತಿದೆ.

ಸಮಸ್ಯೆ ಪರಿಹಾರವಾಗಿಲ್ಲ
ಜ್ವಲಂತ ಸಮಸ್ಯೆ ಕುರಿತು ಸ್ಥಳೀಯರು ಸಚಿವರು, ಸಂಸದರು, ಶಾಸಕರು ಸಹಿತ ಸ್ಥಳೀಯ ಜನಪ್ರತಿನಿಧಿ ಹಾಗೂ ಅಧಿಕಾರಿ ಹೀಗೆ ಎಲ್ಲರ ಗಮನಕ್ಕೆ ತಂದಿದ್ದರೂ ಪ್ರಯೋಜನ ಶೂನ್ಯ. ಗ್ರಾಮ ಸಭೆಗಳಲ್ಲೂ ಚರ್ಚೆ ನಡೆದರೂ ಪರಿಹಾರ ಕಂಡಿಲ್ಲ. ಇಲ್ಲಿರುವ ತಾತ್ಕಾಲಿಕ ಸೇತುವೆಯೂ ಕೈ ಕೊಟ್ಟರೆ ತ್ರಿಶಂಕು ಸ್ಥಿತಿ. ಮಕ್ಕಳಿಗೆ ಶಾಲೆಗೆ ತೆರಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ಕೆಲವು ಹೆತ್ತವರು ಈ ಸಂಕಷ್ಟ ಬೇಡಪ್ಪ ಅಂತ ತಮ್ಮ ಮಕ್ಕಳನ್ನು ಸಂಬಂಧಿಕರ ಮನೆಯಲ್ಲಿ, ಹಾಸ್ಟೆಲ್‌ಗ‌ಳಲ್ಲಿ ಬಿಡುತ್ತಿದ್ದಾರೆ.

ತಹಶೀಲ್ದಾರ್‌ ಪ್ರಯತ್ನ
ಇಲ್ಲಿ ಶಾಶ್ವತವಾಗಿ ಸೇತುವೆ ಯೊಂದನ್ನು ನಿರ್ಮಿಸುವಂತೆ 40 ವರ್ಷ ಗಳಿಂದ ಬೇಡಿಕೆ ಇದೆ. ಲೋಕಸಭಾ ಚುನಾವಣೆ ಹೊತ್ತಲ್ಲಿ ಈ ಭಾಗದ ನಾಗರಿಕರು ಚುನಾವಣೆ ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದ್ದರು. ಈ ವೇಳೆ ಸುಳ್ಯ ತಹಶೀಲ್ದಾರ್‌ ಸ್ಥಳಕ್ಕೆ ಭೇಟಿ ನೀಡಿ, ನಿವಾಸಿಗಳ ಸಮಸ್ಯೆ ಅರಿತು ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಜತೆಗೆ ನಾಗರಿಕರ ಸಮ್ಮುಖ ಸಭೆ ನಡೆಸಿದ್ದರು. ಆದರೆ ಇಲ್ಲಿ ಸೇತುವೆ ನಿರ್ಮಿಸಲು ಬೃಹತ್‌ ಮೊತ್ತದ ಅನುದಾನದ ಆವಶ್ಯಕತೆ ಇರುವುದನ್ನು ಅಧಿಕಾರಿಗಳು ತಿಳಿಸಿದ್ದರು.

ನಿಯೋಗ ತೆರಳುತ್ತೇವೆ
ಮಳೆಗಾಲದಲ್ಲಿ ತಾತ್ಕಾಲಿಕ ಬಿದಿರು ಸೇತುವೆ ನಿರ್ಮಿಸಲು ಪಂಚಾಯತ್‌ ವತಿಯಿಂದ ಹಣ ಒದಗಿಸುತ್ತಿದ್ದೇವೆ. ಶಾಶ್ವತ ಪರಿಹಾರದ ಆವಶ್ಯಕತೆ ಇದೆ. ಇದಕ್ಕೆ ಹೆಚ್ಚಿನ ಅನುದಾನ ಬೇಕಿದೆ. ಶೀಘ್ರ ನಿಯೋಗದ ಮೂಲಕ ಶಾಸಕ, ಸಂಸದರನ್ನು ಭೇಟಿಯಾಗಿ ಸೇತುವೆ ನಿರ್ಮಾಣಕ್ಕೆ ಅನುದಾನ ತರುವ ಪ್ರಯತ್ನ ನಡೆಸುತ್ತೇವೆ.
– ವೀಣಾನಂದ , ಅಧ್ಯಕ್ಷರು, ಕೊಲ್ಲಮೊಗ್ರು ಗ್ರಾ.ಪಂ.

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.