ಪ್ರಕೃತಿ ಮೇಲೆ ಪ್ರಹಾರ ಸರಿಯಲ್ಲ


Team Udayavani, Jun 7, 2019, 5:50 AM IST

f-32

ಸುಳ್ಯ: ಅಭಿವೃದ್ಧಿ ನೆಪದಲ್ಲಿ ಹಸುರು ಸಂಪತ್ತಿನ ಮೇಲೆ ಪ್ರಹಾರ ಮಾಡಲಾಗುತ್ತಿದೆ. ಇದರಿಂದ ನೀರಿನ ಕೊರತೆ, ಬಿಸಿಲಿನ ತಾಪ ಏರಿಕೆಯಾಗಿ ಪ್ರಕೃತಿ ವಿಕೋಪದಂತಹ ಘಟನೆಗಳು ಸಂಭವಿಸುತ್ತಿವೆ ಎಂದು ಸಿವಿಲ್‌ ನ್ಯಾಯಾಧೀಶ ಯಶ್ವಂತ ಕುಮಾರ್‌ ಕೆ.ಹೇಳಿದರು.

ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್‌ ಇಲಾಖೆ, ಸ.ಪ.ಪೂ. ಕಾಲೇಜಿನ ಆಶ್ರಯದಲ್ಲಿ ಬುಧವಾರ ಸುಳ್ಯ ಸ.ಪ.ಪೂ. ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಪರಿಸರದ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪರಿಸರ ದಿನಾಚರಣೆ ಪೂರಕವಾಗಬೇಕು. ಗಿಡ ನೆಟ್ಟು ಅದನ್ನು ಉಳಿಸುವಲ್ಲಿ ಯುವ ಸಮುದಾಯ ಆಸಕ್ತಿ ಹೊಂದಬೇಕು ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ದಳ ಸುಬ್ರಾಯ ಭಟ್‌ ಮಾತನಾಡಿ, ಪ್ರಕೃತಿ ವಿನಾಶಕ್ಕೆ ಪ್ರಯತ್ನಿಸಬೇಡಿ. ಅಕ್ರಮ ಗಣಿಗಾರಿಕೆ, ಅವೈಜ್ಞಾನಿಕ ಮೀನುಗಾರಿಕೆ ಪ್ರಕೃತಿ ವಿಕೋಪದಂತಹ ಘಟನೆಗೆ ಕಾರಣ ಎಂದು ವಿವರಿಸಿದರು. ಕಸ ವಿಲೇವಾರಿ ಕುರಿತು ವಿದೇಶದಲ್ಲಿ ಸಾಕಷ್ಟು ಜಾಗೃತಿ ಇದೆ. ಅಲ್ಲಲ್ಲಿ ಕಸದ ಬುಟ್ಟಿ ಇಟ್ಟು ಎಲ್ಲೆಂದರಲ್ಲಿ ಕಸ ಎಸೆಯದಂತೆ ಎಚ್ಚರ ವಹಿಸಲಾಗಿದೆ. ಆದರೆ ಭಾರತದಲ್ಲಿ ಆ ಜಾಗೃತಿ, ಸೌಲಭ್ಯದ ಕೊರತೆ ಇದ್ದು, ಆ ಬಗ್ಗೆ ನಾವು ಎಚ್ಚೆತ್ತುಕೊಳ್ಳಬೇಕು ಎಂದರು.

ಗುಡ್ಡ ಪ್ರದೇಶದಲ್ಲಿ ಪ್ರಕೃತಿ ತನ್ನ ಬಳಕೆಗಾಗಿ ಸಂಗ್ರಹಿಸಿಟ್ಟಿರುವ ನೀರನ್ನು ಹಲವೆಡೆ ಪೈಪ್‌ ಬಳಸಿ ಮನೆ, ತೋಟಕ್ಕೆ ಉಪಯೋಗಿಸುತ್ತಾರೆ. ಉಚಿತವಾಗಿ ಬರುವ ನೀರು ಎಂದು ಬೇಕಾಬಿಟ್ಟಿ ಪೋಲು ಮಾಡಲಾಗುತ್ತದೆ. ಆದರೆ ಈ ರೀತಿ ಬಳಕೆಗೆ ಕಾನೂನಿನಲ್ಲಿ ಅವಕಾಶ ಇಲ್ಲ. ಇದು ಕಾನೂನು ಬಾಹಿರ ಎಂದು ಮಂಜುನಾಥ ಹೇಳಿದರು.

ಸುಳ್ಯ ಸಪ.ಪೂ. ಕಾಲೇಜು ಪ್ರಾಂಶುಪಾಲ ಮೋಹನ ಗೌಡ ಬಿ.ಕೆ. ಮಾತನಾಡಿ, ನೆಲ, ಜಲ, ಗಾಳಿ ಮಾಲಿನ್ಯ ಆಗದಂತೆ ಪ್ರತಿಯೊಬ್ಬರೂ ಜಾಗೃತರಾಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಉಪಾಧ್ಯಕ್ಷ ಶ್ರೀಹರಿ ಕುಕ್ಕುಡೇಲು ಮಾತನಾಡಿ, ವಿದ್ಯಾರ್ಥಿ ಶಕ್ತಿಗೆ ಪರಿಸರ ಸಂರಕ್ಷಿಸುವ ಸಾಮರ್ಥ್ಯ ಇದೆ. ಈ ನಿಟ್ಟಿನಲ್ಲಿ ಹೆಚ್ಚು ಒತ್ತು ಕೊಡಬೇಕು ಎಂದರು.

ವೇದಿಕೆಯಲ್ಲಿ ಸುಳ್ಯ ಪಿಎಸ್‌ಐ ಹರೀಶ್‌ ಕುಮಾರ್‌, ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಪ್ರೀತಿ ನಾಯ್ಕ ಉಪಸ್ಥಿತರಿದ್ದರು. ನ್ಯಾಯವಾದಿ ಹರೀಶ್‌ ಬೂಡುಪನ್ನೆ ಸ್ವಾಗತಿಸಿ, ನಾಗೇಶ ವಂದಿಸಿದರು. ದಿನೇಶ್‌ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ಸ.ಪ.ಪೂ. ಕಾಲೇಜಿನ ವಠಾರದಲ್ಲಿ 10 ಗಿಡಗಳನ್ನು ನೆಡಲಾಯಿತು. ವಿದ್ಯಾರ್ಥಿಗಳಿಗೆ 30 ಗಿಡಗಳನ್ನು ವಿತರಿಸಲಾಯಿತು.

ಬೆಳೆಯಲು 60 ವರ್ಷ; ಕಡಿಯಲು 5 ನಿಮಿಷ
ವಲಯ ಅರಣ್ಯಾಧಿಕಾರಿ ಮಂಜುನಾಥ ಎನ್‌. ಮಾತನಾಡಿ, ಒಂದು ಗಿಡ ಮರವಾಗಿ ಬೆಳೆಯಲು 60 ವರ್ಷ ಬೇಕು. ಅದನ್ನು ಕಡಿಯಲು 5 ನಿಮಿಷ ಸಾಕು. ಹೀಗಾಗಿ ಕಡಿಯುವ ಮನಃಸ್ಥಿತಿ ಬದಲಾಯಿಸಿ ಬೆಳೆಸುವ ಬಗ್ಗೆ ಯೋಚನೆ ಮಾಡಬೇಕು. ಸ್ವಂತ ಜಾಗೃತಿ ಇಲ್ಲದಿರುವುದೇ ವಿನಾಶಕ್ಕೆ ಮುಖ್ಯ ಕಾರಣ ಎಂದು ವಿಶ್ಲೇಷಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.