ಸಂಸ್ಕೃತ ಶಾಲೆಯೇ ಕನ್ನಡ ಮಾಧ್ಯಮ ಸರಕಾರಿ ಶಾಲೆಯಾಯಿತು

ಶತಮಾನೋತ್ತರ ಬೆಳ್ಳಿಹಬ್ಬದ ಅಂಚಿನಲ್ಲಿರುವ ಸಾಲೆತ್ತೂರು ಶಾಲೆ

Team Udayavani, Nov 19, 2019, 5:34 AM IST

cc-18

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1903 ಶಾಲೆ ಆರಂಭ
ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿದ್ದ “ಉತ್ತಮ ಶಾಲೆ’

ವಿಟ್ಲ: ಬಂಟ್ವಾಳ ತಾ|ನ ಸಾಲೆತ್ತೂರಿನಲ್ಲಿ ವಿದ್ಯಾಭಿಮಾನಿಗಳ ಶ್ರಮದ ಫಲವಾಗಿ ಕೊಳ್ನಾಡು ಗ್ರಾಮದ ಕಾಡುಮಠದಲ್ಲಿ 1903ರಲ್ಲಿ ಸಂಸ್ಕೃತ ಶಾಲೆ ಆರಂಭಗೊಂಡು ಕಾಲಕ್ರಮೇಣ ಕಾಡುಮಠದಿಂದ ಕುಂಡೈಮೂಲೆಗೆ ಸ್ಥಳಾಂತರಗೊಂಡಿತು. ಬಳಿಕ ಸರಕಾರಿ ಶಾಲೆಯಾಗಿ ಊರ್ಜಿತವಾಯಿತು ಎಂಬ ಐತಿಹ್ಯವಿದೆ. ಆರಂಭದಲ್ಲಿ ಮಣ್ಣಿನ ಗೋಡೆ, ಮುಳಿಹುಲ್ಲಿನ ಛಾವಣಿಯಿದ್ದ ಶಾಲೆಗೆ 1942ರಲ್ಲಿ ವ್ಯವಸ್ಥಿತ ಕಟ್ಟಡ ರಚನೆಯಾಯಿತು. 1968ರಲ್ಲಿ ಹಿ.ಪ್ರಾ. ಶಾಲೆಯಾಗಿ ಮೇಲ್ದರ್ಜೆಗೇರಿತು. ಅಗರಿ ಲಕ್ಕಪ್ಪ ರೈ, ಕುಳಾಲು ಅಣ್ಣಪ್ಪ ಭಂಡಾರಿ ಅವರಂತಹ ಸ್ವಾತಂತ್ರ್ಯ ಹೋರಾಟಗಾರರ “ಹಿಸ್ಟರಿ ಆಫ್‌ ತುಳುವ’ ಕೃತಿ ಖ್ಯಾತಿಯ ಪ್ರೊ| ಬಿ.ಎ. ಸಾಲೆತ್ತೂರು ಅವರ ಆದರ್ಶಗಳ ನಡುವೆ ಈ ಶಾಲೆ ಇಲ್ಲಿಯವರೆಗೆ ಸಾವಿರಾರು ವಿದ್ಯಾರ್ಥಿಗಳನ್ನು ರಾಷ್ಟ್ರಕ್ಕೆ ಅರ್ಪಿಸಿದೆ.

ಉತ್ತಮ ಶಾಲೆ
1994ರಲ್ಲಿ ಉತ್ತಮ ಶಾಲೆ ಎಂದು ಗುರುತಿ ಸಲ್ಪಟ್ಟಿತ್ತು. ಮುಖ್ಯ ಅಧ್ಯಾಪಕರಾಗಿದ್ದ ಬಾಬು ಮುಗೇರ, ಸಹಶಿಕ್ಷಕಿಯಾಗಿದ್ದ ವಿಜಯಾ ಶೆಟ್ಟಿ ಸಾಲೆತ್ತೂರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶತ್ತಿ, ಮುಖ್ಯ ಶಿಕ್ಷಕಿಯಾಗಿದ್ದ ಶಶಿಕಲಾ ತಾ| ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದಿದ್ದಾರೆ.
ಇಲ್ಲಿನ ಮಕ್ಕಳು ಹಲವು ಬಾರಿ ಖೋ ಖೋ ದಲ್ಲಿ ರಾಜ್ಯಮಟ್ಟಕ್ಕೆ, ಚಂದನ ವಾಹಿನಿ “ಥಟ್‌ ಅಂತ ಹೇಳಿ’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಶಾಲೆಗೆ 1.80 ಎಕ್ರೆ ಜಾಗವಿದ್ದು, ಸಂಯುಕ್ತ ಪ್ರೌಢಶಾಲೆಯಾಗಿ ಆರಂಭಗೊಂಡ ಸರಕಾರಿ ಪ್ರೌಢಶಾಲೆ ಇದೀಗ ಪ್ರತ್ಯೇಕ ಅಸ್ತಿತ್ವ ಹೊಂದಿದೆ.

ಹಳೆ ವಿದ್ಯಾರ್ಥಿಗಳು
ಅಧ್ಯಾಪಕರಾಗಿದ್ದ “ಪರಡೆ ಕಲಿ ಗಂಗಸರ’ ಖ್ಯಾತಿಯ ದಿ| ನರ್ಕಳ ಮಾರಪ್ಪ ಶೆಟ್ಟರು, ನಿವೃತ್ತ ಐಎಎಸ್‌ ಅಧಿಕಾರಿ ಅಗರಿ ವಿಟ್ಟಲ ರೈ, ಕರ್ಣಾಟಕ ಬ್ಯಾಂಕಿನ ನಿವೃತ್ತ ಮಹಾಪ್ರಬಂಧಕ ಜಿ.ಕೆ. ಭಟ್‌, ಡಾ| ಶ್ರೀಧರ ಭಟ್‌ ಮಾವೆ, ಡಾ| ಅಗರಿ ವಿಟ್ಟಲ ಅಡ್ಯಂತಾಯ, ಶಿವರಾಮ ಅಡ್ಯಂತಾಯ, ಮುಂಬಯಿ ಹೈಕೋರ್ಟ್‌ ನ್ಯಾಯಾಧೀಶ ಕೊಲ್ಲಾಡಿ ಬಾಲಕೃಷ್ಣ ಅಡ್ಯಂತಾಯ, ಭದ್ರಾವತಿ ಪರಿಮಳ ಆಯಿಲ್‌ ಇಂಡಸ್ಟ್ರಿ ಮಾಲಕ
ಪಡೆಕುಂಜ ಜಗನ್ನಾಥ ನಾೖಕ್‌, ರಾಮಣ್ಣ ಆಳ್ವರು ಇಲ್ಲಿನ ಹಳೆ ವಿದ್ಯಾರ್ಥಿಗಳು.

ಹಿಂದಿನ ಮುಖ್ಯ ಶಿಕ್ಷಕರು
ಮುಖ್ಯ ಶಿಕ್ಷಕರಾಗಿ ಪಿ. ವೆಂಕಟರಮಣಯ್ಯ, ತನಿಯಪ್ಪ ಮೂಲ್ಯ, ಶಂಕರ ಪುರುಷ, ಮುಕುಂದ ರಾವ್‌ ಕೆ., ಎನ್‌. ನಾರಾಯಣ ಗೌಡ, ಎಂ. ನಾರಾಯಣ ರೈ, ಕೆ. ಕೃಷ್ಣ ರಾವ್‌, ಮಾವೆ ಸೀತಾರಾಮ ಭಟ್‌(ಪ್ರ.), ಬಾಬು ಮುಗೇರ ಎಂ., ಶಶಿಕಲಾ ಸೇವೆ ಸಲ್ಲಿಸಿದ್ದಾರೆ.

ಪ್ರಸ್ತುತ 280 ವಿದ್ಯಾರ್ಥಿಗಳಿದ್ದು, 10 ಮಂದಿ ಶಿಕ್ಷಕರು ಹಾಗೂ ಓರ್ವ ಅತಿಥಿ ಶಿಕ್ಷಕರಿದ್ದಾರೆ. ಈ ವರ್ಷದಿಂದ ಆಂಗ್ಲ ಮಾಧ್ಯಮದಲ್ಲಿ ಎಲ್‌ಕೆಜಿ ತೆರೆಯಲಾಗಿದೆ. ಎಸ್‌ಡಿಎಂಸಿಯವರ ಸಹಕಾರದಿಂದ ಶಾಲೆಯ ಎಲ್ಲ ಕೆಲಸಕಾರ್ಯಗಳು ಸುಸೂತ್ರವಾಗಿ ನಡೆಯುತ್ತಿದ್ದು, ಶಾಲಾ ಪ್ರವಾಸ, ವಾರ್ಷಿಕೋತ್ಸವಗಳು ನಡೆಯುತ್ತಿವೆ.

ಶತಮಾನ ದಾಟಿದ ಶಾಲೆಗೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಳ್ಳುತ್ತಿದ್ದಾರೆ. ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿ ಸಂಘ, ಪಂ.ನ ಎಲ್ಲ ಜನಪ್ರತಿನಿಧಿಗಳ ಸಹಕಾರದಿಂದ ಸಂಸ್ಥೆ ಉತ್ತಮವಾಗಿ ಮುನ್ನಡೆಯುತ್ತಿದೆ.
-ರಮಣಿ, ಮುಖ್ಯ ಶಿಕ್ಷಕಿ

1ರಿಂದ 5ನೇ ತರಗತಿವರೆಗೆ ಈ ಶಾಲೆಯಲ್ಲಿ ಓದಿದ್ದೆ. ಆಗ ಮೂವರು ಶಿಕ್ಷಕರಿದ್ದರು.ಅವರೆಲ್ಲರ ಪಾಠ ಉತ್ತಮವಾಗಿತ್ತು. ಪಠ್ಯ- ಪಠ್ಯೇತರ ಚಟುವಟಿಕೆಗಳಿಗೆ ಉತ್ತಮ ಪ್ರೋತ್ಸಾಹ ನೀಡಿದ್ದರು. ಇಲ್ಲಿನ ವಿದ್ಯಾರ್ಥಿ ಜೀವನದ ನೆನಪು ಮರುಕಳಿಸುತ್ತದೆ. ಈ ಶಾಲೆಗೆ ಮತ್ತು ನನ್ನ ಶಿಕ್ಷಕರಿಗೆ ಋಣಿಯಾಗಿದ್ದೇನೆ.
-ಅಗರಿ ವಿಟ್ಟಲ ರೈ, ನಿವೃತ್ತ ಐಎಎಸ್‌ ಅಧಿಕಾರಿ, ಹಿರಿಯ ವಿದ್ಯಾರ್ಥಿ

- ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.