ಕರಾವಳಿಯ ವಿವಿಧೆಡೆ ಸಾಧಾರಣ ಮಳೆ
Team Udayavani, Mar 31, 2019, 6:30 AM IST
ಮಂಗಳೂರು/ ಅಜೆಕಾರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಶನಿವಾರ ಸಂಜೆ ವೇಳೆಗೆ ಸಾಧಾರಣ ಮಳೆಯಾಗಿದೆ.
ಸುಬ್ರಹ್ಮಣ್ಯ ಮತ್ತು ಕಾರ್ಕಳದ ಅಜೆಕಾರು, ನಾರಾವಿ ಸುತ್ತಮುತ್ತಲ ಮಾ. 30ರ ಸಂಜೆ 4ರ ಸುಮಾರಿಗೆ ಮಳೆ ಸುರಿದಿದೆ.
ಅಂಡಾರು, ಶಿರ್ಲಾಲು, ಕೆರ್ವಾಶೆ, ಕಾಡುಹೊಳೆ, ಮುನಿಯಾಲು ಪರಿಸರ ದಲ್ಲಿ ಸುಮಾರು ಅರ್ಧ ಗಂಟೆ ಕಾಲ ಮಳೆ ಸುರಿದಿದೆ. ಹಿರ್ಗಾನ ಪರಿಸರದಲ್ಲಿ ತುಂತುರು ಮಳೆ ಬಿದ್ದಿದೆ.
ಮಳೆಯ ಜತೆಗೆ ಸಿಡಿಲು ಗುಡುಗುಗಳ ಆರ್ಭಟದಿಂದಾಗಿ ಪರಿಸರದಲ್ಲಿ ಕೆಲವು ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.
ಈ ಪರಿಸರದಲ್ಲಿ ಕಳೆದ 5 ತಿಂಗಳಿಂದ ಮಳೆ ಬೀಳದೆ ರೈತರು ತೀವ್ರ ಸಂಕಷ್ಟಪಟ್ಟಿದ್ದರೆ ಕುಡಿಯುವ ನೀರಿಗೂ ತತ್ವಾರ ಎದುರಾಗಿತ್ತು. ಸುರಿದ ಮಳೆಯಿಂದಾಗಿ ಅಲ್ಪ ಮಟ್ಟಿಗೆ ಇಳೆ ತಂಪಾಗಿದೆ.
ತಾಪಮಾನ ಏರಿಕೆ
ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದ್ದು, ಸೆಕೆಯ ಪ್ರಮಾಣ ಹೆಚ್ಚಿತ್ತು. ಜಿಲ್ಲೆಯಲ್ಲಿ 35 ಡಿ.ಸೆ. ಗರಿಷ್ಠ ಮತ್ತು 25 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲ ಕರಾವಳಿ ಪ್ರದೇಶದ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ