ಸುವರ್ಣ ತ್ರಿಭುಜ ಜು. 12: ದಿಲ್ಲಿಗೆ ನಿಯೋಗ ಭೇಟಿ ಸಾಧ್ಯತೆ
Team Udayavani, Jul 3, 2019, 2:01 PM IST
ಮಲ್ಪೆ: ಸುವರ್ಣ ತ್ರಿಭುಜ ಬೋಟ್ಮುಳುಗಡೆಯಾಗಿರುವ ವಿಚಾರದಲ್ಲಿ ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮಲ್ಪೆ ಮೀನುಗಾರ ಸಂಘದ ನಿಯೋಗವು ಜು. 12ರಂದು ದಿಲ್ಲಿಗೆ ತೆರಳಿ ಕೇಂದ್ರ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಅವರನ್ನು ಭೇಟಿ ಮಾಡುವ ನಿರೀಕ್ಷೆ ಇದೆ.
ಜನಪ್ರತಿನಿಧಿಗಳು, ಮೀನುಗಾರರ ಕುಟುಂಬದವರು ನಿಯೋಗದೊಂದಿಗೆ ತೆರಳಲಿದ್ದು, ಈಗಿನ ಕೇಂದ್ರ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರ ಮುಖೇನ ರಕ್ಷಣಾ ಮಂತ್ರಿಯನ್ನು ಭೇಟಿಯಾಗಲಿದ್ದಾರೆ. ಈ ಸಂದರ್ಭ ಕೇಂದ್ರ ಸರಕಾರದಿಂದ ಮೀನುಗಾರ ಕುಟುಂಬಕ್ಕೆ ನ್ಯಾಯ ಒದಗಿಸುವ ಮತ್ತು ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡುವಂತೆಯೂ ಆಗ್ರಹಿಸಲಾಗುವುದು ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ತಿಳಿಸಿದ್ದಾರೆ.
ಜು. 5ರಂದು ಕೇಂದ್ರ ಬಜೆಟ್ ಇರುವುದರಿಂದ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮುಗಿದ ಅನಂತರ ರಕ್ಷಣಾ ಸಚಿವರನ್ನು ಭೇಟಿ ಮಾಡುವ ಭರವಸೆಯನ್ನು ನೀಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ