ಉಡುಪಿ: ಸರ್ವಂ ಯೋಗಮಯಂ… ರಾಮ್‌ದೇವ್‌ ನೇತೃತ್ವದ ಯೋಗ ಶಿಬಿರಕ್ಕೆ ಸಿದ್ಧತೆ


Team Udayavani, Nov 15, 2019, 8:03 PM IST

tt-4

ರಾಮ್‌ದೇವ್‌ ಅವರು ನಡೆಸಿಕೊಡುವ ಯೋಗ ಶಿಬಿರ ವೇದಿಕೆಯ ಅಂತಿಮ ಸಿದ್ಧತೆ.

ಉಡುಪಿ: ಶನಿವಾರದಿಂದ ಐದು ದಿನಗಳ ಕಾಲ ಉಡುಪಿ ಶ್ರೀಕೃಷ್ಣಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ಯೋಗಗುರು ಬಾಬಾ ರಾಮ್‌ದೇವ್‌ ನೇತೃತ್ವದಲ್ಲಿ ನಡೆಯುವ ಬೃಹತ್‌ ಯೋಗ ಶಿಬಿರಕ್ಕೆ ಉಡುಪಿ ಅಣಿಗೊಂಡಿದೆ.

ಶುಕ್ರವಾರ ರಾಮ್‌ದೇವ್‌ ಅವರನ್ನು ಬರಮಾಡಿಕೊಂಡ ಕರಾವಳಿ ಬೈಪಾಸ್‌ನಿಂದ ಕಲ್ಸಂಕ ಮಾರ್ಗ, ಪಾರ್ಕಿಂಗ್‌ ಪ್ರದೇಶಗಳನ್ನು ಕೇಸರಿ ಧ್ವಜಗಳಿಂದ ಅಲಂಕರಿಸಲಾಗಿದೆ. ವಿವಿಧ ಕಡೆಗಳಲ್ಲಿ ರಾಮ್‌ದೇವ್‌ ಮತ್ತು ಪರ್ಯಾಯ ಶ್ರೀಪಲಿಮಾರು ಸ್ವಾಮೀಜಿಯವರ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಪ್ರದರ್ಶಿಸಲಾಗಿದೆ.

ಎರಡು ದಶಕಗಳಿಂದ ಜನರ ಬಾಯಲ್ಲಿ ಯೋಗವನ್ನು ಬ್ರಾಂಡ್‌ ಆಗಿ ಪರಿವರ್ತಿಸಿದ ರಾಮ್‌ದೇವ್‌ 2011ರಲ್ಲಿ ಉಡುಪಿಗೆ ಆಗಮಿಸಿ ಬೃಹತ್‌ ಯೋಗ ಶಿಬಿರವನ್ನು ನಡೆಸಿದ್ದರು. ಆಗ ಇರುವಂತ ಯೋಗ ವಾತಾವರಣ ಮಗದೊಮ್ಮೆ ಉಡುಪಿಯಲ್ಲಿ ಸೃಷ್ಟಿಯಾಗಿದೆ. ವಿಶೇಷವಾಗಿ ಆರೋಗ್ಯ ಕಾಳಜಿಯವರು ರಾಮ್‌ದೇವ್‌ ಅವರ ಸಂದೇಶವನ್ನು ನೇರವಾಗಿ ಆಲಿಸಲು ಕುತೂಹಲಿಗಳಾಗಿದ್ದಾರೆ. ಯೋಗಾಸನಗಳನ್ನು ಪ್ರದರ್ಶಿಸುತ್ತ ನಿರ್ದಿಷ್ಟ ಯೋಗಾಸನಗಳ ಪ್ರಯೋಜನಗಳನ್ನು ತಿಳಿಸುವ ಜತೆಗೆ ಇತರ ಸಂದೇಶಗಳನ್ನು ನೀಡುವುದು ರಾಮ್‌ದೇವ್‌ ವೈಶಿಷ್ಟ್ಯ. 2011ರಲ್ಲಿ ಹೀಗೆಯೇ ಅವರು ಮಾಡಿದ್ದರು. ಆಗ ಎಂಜಿಎಂ ಕಾಲೇಜಿನ ಮೈದಾನದಲ್ಲಿ ನಡೆದಿತ್ತು.

ಪಾರ್ಕಿಂಗ್‌ ಪ್ರದೇಶದಲ್ಲಿ ಸಾವಿರಾರು ಜನರು ಕುಳಿತುಕೊಂಡು ಯೋಗಾಸನಗಳನ್ನು ಮಾಡುವಂತಾಗಲು ಮಧ್ಯಭಾಗದಲ್ಲಿ ವ್ಯವಸ್ಥೆಗೊಳಿಸಲಾಗಿದೆ. ಹೊರಗಿನಿಂದ ಬರುವ ವಾಹನಗಳ ನಿಲುಗಡೆಗೆ ಪಾರ್ಕಿಂಗ್‌ ಪ್ರದೇಶದ ಬಳಿಯ ಗದ್ದೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಶಿಬಿರದ ಸಮಯ ಹೊರತುಪಡಿಸಿ ಶಿಬಿರ ಡೇರೆಯ ಸುತ್ತ ವಾಹನ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.

ಗುಜರಾತ್‌ನಿಂದ ಆರು ಲಾರಿಗಳಲ್ಲಿ ಬಂದ ಪರಿಕರಗಳಿಂದ ವೇದಿಕೆ ಸಿದ್ಧತೆ ಕೆಲಸ ಶುಕ್ರವಾರ ರಾತ್ರಿವರೆಗೂ ನಡೆಯುತ್ತಿತ್ತು. ಇದೆಲ್ಲ ಕೆಲಸಗಳನ್ನೂ ಪತಂಜಲಿ ಸಮಿತಿಯವರು ನೇರವಾಗಿ ನಿರ್ವಹಿಸುತ್ತಿದ್ದಾರೆ. ಹರಿದ್ವಾರ ಮತ್ತು ರಾಜ್ಯದ ವಿವಿಧ ಕಡೆಗಳಿಂದ ಬಂದ ಪತಂಜಲಿ ಸಮಿತಿಯ ಕಾರ್ಯಕರ್ತರು ಶಿಬಿರ ಸ್ಥಾನದ ಪಕ್ಕದಲ್ಲಿರುವ ಪಲಿಮಾರು ಮಠದ ರಾಮಧಾಮ ಅತಿಥಿಗೃಹದಲ್ಲಿದ್ದು ನಡೆಯುತ್ತಿರುವ ಕೆಲಸಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.