ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ

 ಬಿಜೂರು ಗ್ರಾಮ ಪಂಚಾಯತ್‌

Team Udayavani, Mar 18, 2020, 1:11 AM IST

bijooru-water-2

ಕಳೆದ ಬೇಸಗೆಯಲ್ಲಿ ತೀವ್ರವಾಗಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ “ಉದಯವಾಣಿ’ಯು ಭೇಟಿ ಕೊಟ್ಟು, “ಜೀವಜಲ’ ಎನ್ನುವ ಸರಣಿಯಡಿ ಸಾಕ್ಷಾತ್‌ ವರದಿಗಳನ್ನು ಪ್ರಕಟಿಸಿತ್ತು. ಈ ಬಾರಿಯ ಬೇಸಗೆಯಲ್ಲಿ ನೀರಿನ ಸಮಸ್ಯೆಯ ನಿವಾರಣೆಗೆ ಸ್ಥಳೀಯ ಪಂಚಾಯತ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯಾವೆಲ್ಲ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ? ಮುಂದೆ ಆಗಬೇಕಾದ ಪ್ರಮುಖ ಕ್ರಮಗಳೆಲ್ಲದರ ಕುರಿತಾದ ಸರಣಿ ಇದು.

ಬಿಜೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕಳೆದ ಬೇಸಗೆಯಲ್ಲಿ ನೀರಿನ ಸಮಸ್ಯೆ ಇರಲಿಲ್ಲ. ಈ ಬೇಸಗೆಯಲ್ಲಿ ಕೆಲವು ಪ್ರದೇಶಗಳಲ್ಲಿ ಸಮಸ್ಯೆ ಉಂಟಾ ಗುವ ಸಾಧ್ಯತೆ ಇದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನಕ್ಕೆ ಗ್ರಾ.ಪಂ. ಮುಂದಾಗಿದೆ.

ಉಪ್ಪುಂದ: ಕಳೆದ ಹಲವು ದಶಕಗಳಿಂದ ಬಿಜೂರು ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎನ್ನುವ ಹೋರಾಟಕ್ಕೆ ಈ ಬಾರಿ ತಾರ್ಕಿಕ ಅಂತ್ಯ ದೊರಕಿದೆ.

ಎಪ್ರಿಲ್‌-ಮೇ ವೇಳೆ ಸಮಸ್ಯೆ
ಕಳೆದ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸಿದ್ದ ಬಿಜೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸದ್ಯ ವಿವಿಧ ಭಾಗಗಳಲ್ಲಿ ನೀರಿನ ಸಮಸ್ಯೆ ಇಲ್ಲ. ಎಪ್ರಿಲ್‌ – ಮೇ ತಿಂಗಳಲ್ಲಿ ಕೆಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಕಳೆದ ಬಾರಿ ನೀರಿನ ಸಮಸ್ಯೆಗೆ ಟ್ಯಾಂಕರ್‌ ನೀರು ನೀಡುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿತ್ತು. ಈ ಬಾರಿ ಬೇಸಗೆಗೆ ಮುನ್ನ ಬಾವಿ, ಹ್ಯಾಡ್‌ ಬೋರ್‌ವೆಲ್‌ಗಳನ್ನು ನಿರ್ಮಿಸುವ ಮೂಲಕ ಶಾಶ್ವತ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳುವ ಪ್ರಯತ್ನಕ್ಕೆ ಗ್ರಾಮ ಪಂಚಾಯತ್‌ ಮುಂದಾಗಿದೆ.

ಟ್ಯಾಂಕರ್‌ ನೀರು ಪೂರೈಕೆ
ನವಗ್ರಾಮ ಕಾಲನಿಯಲ್ಲಿನ ಮನೆಗಳಿಗೆ ಬವಳಾಡಿಯಲಿರುವ ಟ್ಯಾಂಕ್‌ನಿಂದ ನಲ್ಲಿ ಮೂಲಕ ನೀರು ನೀಡಲಾಗುತ್ತದೆ. ಇಲ್ಲಿನ ಬಾವಿಯಲ್ಲಿ ನೀರು ಕಡಿಮೆಯಾದಲ್ಲಿ ಟ್ಯಾಂಕರ್‌ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.

3 ಮತ್ತು 4ನೇ ವಾರ್ಡ್‌ನ ಮನೆಗಳ ಎದುರು ಹರಿಯುತ್ತಿರುವ ನದಿ ನೀರು ಉಪ್ಪು ಮಿಶ್ರಿತವಾಗಿರುವುದರಿಂದ ಉಪಯೋಗಿಸಲು ಸಾಧ್ಯವಾಗುತ್ತಿಲ್ಲ. ಇಲ್ಲಿನವರ ನೀರಿನ ಸಮಸ್ಯೆ ಮುಕ್ತಿಗೆ ಜನಪ್ರತಿನಿಧಿಗಳು, ಅಧಿಕಾರಿಗಳ ಯತ್ನದಿಂದ ಶಾಶ್ವತ ಪರಿಹಾರ ಕಂಡು ಕೊಳ್ಳಲಾಗಿದೆ.

4ನೇ ವಾರ್ಡ್‌ ಪ್ರದೇಶಗಳಾದ ಗರಡಿ, ಕಳಿಸಾಲು, ನಿಸರ್ಗಕೇರಿ, ದೊಂಬ್ಲಿಕೇರಿ ಪ್ರದೇಶಗಳಲ್ಲಿ ಉಪ್ಪು ನೀರಿನ ಸಮಸ್ಯೆ ಇರುವುದರಿಂದ ಇಲ್ಲಿನ ಬಾವಿಗಳ ನೀರು ಕುಡಿಯಲು ಯೋಗ್ಯವಾಗಿಲ್ಲ. ಬಹುತೇಕ ಮನೆಗಳಲ್ಲಿ ಸಿಹಿನೀರಿನ ಕೊರತೆ ಇದೆ. ಇಲ್ಲಿಗೆ ಬಿಜೂರು ಶಾಲೆಯಲ್ಲಿನ ಟ್ಯಾಂಕ್‌ನಿಂದ ನಲ್ಲಿ ಮೂಲಕ ನೀರು ನೀಡಲಾಗುತ್ತಿದೆ. 3ನೇ ವಾರ್ಡ್‌ನ ಶೆಟ್ರಕೇರಿ, ಕಳಿನಬಾಗಿಲು ವ್ಯಾಪ್ತಿಯ ಕೆಲವು ಮನೆಗಳಿಗೆ ನೀರಿನ ಸಮಸ್ಯೆ ಇದೆ.

ಇನ್ನು ದಾಸೋಡಿ ಮನೆಯ ಬಳಿ ಇರುವ ಬಾವಿಯ ನೀರನ್ನು ಸದುಪಯೋಗಪಡಿಸಿಕೊಳ್ಳಲು ಪೈಪ್‌ಲೈನ್‌ಗೆ 1.45 ಲ.ರೂ. ಹಾಗೂ 1 ಲಕ್ಷ ವಿದ್ಯುತ್‌ ಪಂಪ್‌ಸೆಟ್‌ ಕೊಠಡಿ ನಿರ್ಮಾಣಕ್ಕೆ 14ನೇ ಹಣಕಾಸು ಯೋಜನೆಯಲ್ಲಿ ಅನುದಾನ ತೆಗೆದಿರಿಸಲಾಗಿದೆ.

ಕೈಗೊಂಡ ಕ್ರಮಗಳೇನು?
3ನೇ ವಾರ್ಡ್‌ನ ಶೆಟ್ರಕೇರಿಯ ಅಂಗನವಾಡಿ ಸಮೀಪ ಜಿ.ಪಂ. ಗ್ರಾಮೀಣ ಕುಡಿಯುವ ನೀರು ಮತ್ತು
ನೈಮಲ್ಯ ಉಪವಿಭಾಗ ಬೈಂದೂರು ಯೋಜನೆಯಿಂದ 10 ಲಕ್ಷ ರೂ. ವೆಚ್ಚದ 50 ಸಾವಿರ ಲೀ. ಸಾಮರ್ಥ್ಯದ ವಾಟರ್‌ ಟ್ಯಾಂಕನ್ನು ನಿರ್ಮಾಣ ಮಾಡಲಾಗಿದೆ. ಪಕ್ಕದಲ್ಲೇ ಜಿಲ್ಲಾ ಪಂಚಾಯತ್‌ನಿಂದ 10 ಲಕ್ಷ ರೂ. ಅನುದಾನದಲ್ಲಿ ಬಾವಿ ನಿರ್ಮಾಣ ಮಾಡಲಾಗುತ್ತಿದೆ. ಇದರಲ್ಲಿ ಸಾಕಷ್ಟು ನೀರು ಇರುವುದರಿಂದ ನೀರಿನ ಸಮಸ್ಯೆಗೆ ಮುಕ್ತಿ ಸಿಗಲಿದೆ ಎನ್ನುವುದು ನಾಗರಿಕರ ಅಭಿಪ್ರಾಯ.

ಸಮಸ್ಯೆ ನಿವಾರಣೆಗೆ ಕ್ರಮ
ಗ್ರಾಮದ 3 ಮತ್ತು 4ನೇ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕಾಗಿ ಶೆಟ್ರಕೇರಿಯಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣ ಮಾಡಲಾಗಿದೆ ಹಾಗೂ ಒಂದು ಬಾವಿ ನಿರ್ಮಾಣ ಹಂತದಲ್ಲಿದೆ. ಇದರಲ್ಲಿ ಸಾಕಷ್ಟು ನೀರಿದೆ. ಅಲ್ಲದೆ ದಾಸೋಡಿ ಮನೆ ಬಳಿಯ ಬಾವಿಯಲ್ಲಿನ ನೀರು ಬಳಸಿಕೊಳ್ಳಲು ಅನುದಾನ ನೀಡಲಾಗಿದೆ. ಉಳಿದ ಭಾಗದಲ್ಲಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ.
– ಸತೀಶ ತೋಳಾರ್‌, ಪಿಡಿಓ

ಕೃಷ್ಣ ಬಿಜೂರು

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.