ಯಾವುದೇ ಗೊಂದಲವಿಲ್ಲ,ಬಿಜೆಪಿ ಗೆಲುವು ಖಾತ್ರಿ


Team Udayavani, Mar 17, 2018, 7:15 AM IST

Mathina-Matha.jpg

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಕುರಿತಂತೆ ಯಾವುದೇ ಗೊಂದಲವಿಲ್ಲ ಎನ್ನುವುದು ಬೈಂದೂರಿನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ಪ್ರವೀಣ್‌ ಕುಮಾರ್‌ ಗುರ್ಮೆ ನುಡಿ. ಅವರು 15 ವರ್ಷ ಕುತ್ಯಾರು ಗ್ರಾಮ ಪಂಚಾಯತ್‌ ಸದಸ್ಯರಾಗಿ, ಒಂದು ಬಾರಿ ಅಧ್ಯಕ್ಷರಾಗಿ, ಕಾಪು ಬಿಜೆಪಿ ಕ್ಷೇತ್ರಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಚುನಾವಣಾ ಸಿದ್ಧತೆ ಹೇಗೆ ನಡೆಯುತ್ತಿದೆ?
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಏಳು ಮಹಾ ಶಕ್ತಿ ಕೇಂದ್ರಗಳು, 243 ಬೂತ್‌ಗಳಲ್ಲಿ ಈಗಾಗಲೇ ಬೈಠಕ್‌ಗಳನ್ನು ನಡೆಸಲಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ.

ಪಕ್ಷದಿಂದ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿದೆಯೇ?
ಇಲ್ಲ. ಕಳೆದ ಬಾರಿ ಅಲ್ಪ ಅಂತರದಿಂದ ಸೋತಿದ್ದ ಬಿ.ಎಂ. ಸುಕುಮಾರ ಶೆಟ್ಟಿ ಅವರು ಈ ಬಾರಿ ಪ್ರಬಲ  ಆಕಾಂಕ್ಷಿಯಾಗಿದ್ದಾರೆ. ಯಾರನ್ನೇ ಅಭ್ಯರ್ಥಿಯಾಗಿ ಘೋಷಿಸಿದರೂ ಗೆಲ್ಲಿಸಲು ಎಲ್ಲ ರೀತಿಯ ಸಿದ್ಧತೆಗಳು ನಡೆಯುತ್ತಿವೆ. ಅಭ್ಯರ್ಥಿ ಆಯ್ಕೆ ಕುರಿತಂತೆ ಪಕ್ಷ ಸರಿಯಾದ ನಿರ್ಧಾರ ಕೈಗೊಳ್ಳುತ್ತದೆ. 

ಬಿಜೆಪಿ ಗೆಲ್ಲುವ ವಿಶ್ವಾಸವಿದೆಯೇ?
ಕಳೆದ ವಿಧಾನಸಭಾ ಚುನಾವಣೆ ಬಳಿಕ ನಡೆದ ಲೋಕಸಭಾ ಚುನಾವಣೆ ಸಹಿತ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಲ್ಲಿಯೂ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. 7ರಲ್ಲಿ 5 ಜಿ.ಪಂ. ಸದಸ್ಯರು ಬಿಜೆಪಿಗರು, 25 ತಾ.ಪಂ. ಸದಸ್ಯರಲ್ಲಿ 15 ಮಂದಿ ಬಿಜೆಪಿಯವರು, 654 ಗ್ರಾ.ಪಂ. ಸದಸ್ಯರಲ್ಲಿ 296 ಮಂದಿ ಬಿಜೆಪಿ ಸದಸ್ಯರಿದ್ದಾರೆ. ಕಳೆದ ಬಾರಿ ಬಿಜೆಪಿ ಹಾಗೂ ಕೆಜೆಪಿ ಗೊಂದಲದಿಂದಾಗಿ ಅಲ್ಪ ಮತಗಳ ಅಂತರದಿಂದ ಸೋಲನ್ನು ಕಾಣಬೇಕಾಯಿತು. ಆದರೆ ಈ ಬಾರಿ ಖಂಡಿತ ಬಿಜೆಪಿ ಗೆಲ್ಲಲಿದೆ.

ಟಿಕೆಟ್‌ ವಿಚಾರವಾಗಿ ಪಕ್ಷದಲ್ಲಿ  ಗೊಂದಲಗಳಿವೆಯೇ?
ಇಲ್ಲ. ಟಿಕೆಟ್‌ ಯಾರಿಗೆ ಕೊಡಬೇಕು ಎನ್ನುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಸೂಕ್ತ ಹಾಗೂ ಗೆಲ್ಲುವ ಅಭ್ಯರ್ಥಿಯನ್ನು ರಾಷ್ಟ್ರ, ರಾಜ್ಯ ನಾಯಕರು ಕಣಕ್ಕಿಳಿಸುತ್ತಾರೆ. ಚುನಾವಣೆಗೆ ಬೈಂದೂರಿಗೆ 

ಬಿಜೆಪಿಯ ಆಶ್ವಾಸನೆಗಳೇನು?
ನಾಲ್ಕು ಅವಧಿಯಿಂದ ಕಾಂಗ್ರೆಸ್‌ ಶಾಸಕರಿದ್ದರೂ ಕುಡಿ ಯುವ ನೀರಿನ ಸಮಸ್ಯೆಗೆ ಪರಿಹಾರ ಹುಡುಕಿಲ್ಲ. ನೀರಿಗೆ ಮೊದಲ ಆದ್ಯತೆ. ಗ್ರಾಮೀಣ ಪ್ರದೇಶಗಳಿಗೆ ಇನ್ನೂ ಸರಿ ಯಾದ ರಸ್ತೆ ಸೌಲಭ್ಯಗಳಿಲ್ಲ. ತ್ರಾಸಿ, ಕಂಬದಕೋಣೆ, ಕೊಲ್ಲೂರು, ಮರವಂತೆ ಭಾಗಗಳಿಂದ ಬೈಂದೂರಿನ ಸರಕಾರಿ ಆಸ್ಪತ್ರೆಗೆ ಜನ ಚಿಕಿತ್ಸೆಗೆ ಬರುತ್ತಾರೆ. ಆದರೆ ಇಲ್ಲಿರುವ ಸೌಲಭ್ಯ ಸಾಕಾಗುತ್ತಿಲ್ಲ. ಬಿಜೆಪಿ ಗೆದ್ದರೆ ಈ ಆಸ್ಪತ್ರೆ ಮೇಲ್ದರ್ಜೆ ಗೇರಿಸಲು ಪ್ರಯತ್ನಿಸಲಾಗುವುದು.

 - ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.