ಕುಂದಾಪುರದಲ್ಲಿ ಎರ್ನಾಕುಲಂ – ಪುಣೆ ಸೂಪರ್ ಫಾಸ್ಟ್ ರೈಲಿಗೆ ನಿಲುಗಡೆ; ಸ್ವಾಗತ
Team Udayavani, Oct 23, 2019, 4:18 AM IST
ಕುಂದಾಪುರ: ಎರ್ನಾಕುಲಂ-ಪುಣೆ ಸೂಪರ್ಫಾಸ್ಟ್ ರೈಲಿಗೆ ಮಂಗಳವಾರದಿಂದ ಕುಂದಾಪುರ (ಮೂಡ್ಲಕಟ್ಟೆ)ದ ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಲಾಗಿದ್ದು, ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯ ವತಿಯಿಂದ ಸ್ವಾಗತ ಕೋರಲಾಯಿತು.
ಜೈ ಭಾರ್ಗವ ಬಳಗದ ಮನವಿ ಮೇರೆಗೆ ಸಂಸದ ಪ್ರತಾಪ್ಸಿಂಹ ರೈಲ್ವೇ ಸಚಿವರಲ್ಲಿ ಮಾತನಾಡಿ ರೈಲು ನಿಲುಗಡೆಗೆ ಸಹಕರಿಸಿದ್ದರು. ಎರಡು ದಿನಗಳ ಹಿಂದಷ್ಟೇ ಅಂದರೆ ಅ. 20ರಂದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಪ್ರಯತ್ನದಿಂದಾಗಿ ಕುಂದಾಪುರದಲ್ಲಿ ಕೊಚ್ಚುವೇಲಿ-ಗಂಗಾನಗರ ರೈಲಿಗೆ ನಿಲುಗಡೆಗೆ ಅವಕಾಶ ನೀಡಲಾಗಿತ್ತು. ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ, ಜೈ ಭಾರ್ಗವ ಬಳಗದ ಸದಸ್ಯರು, ಕೋಟೇಶ್ವರ ರೋಟರಿ, ರೋಟರ್ಯಾಕ್ಟ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ರೈಲು ಪ್ರತಿ ಮಂಗಳವಾರ ಮತ್ತು ಶುಕ್ರವಾರ ಎರ್ನಾಕುಲಂನಿಂದ ಮಂಗಳೂರು – ಉಡುಪಿ – ಕುಂದಾಪುರ- ಕಾರವಾರ – ಮಡಗಾಂವ್- ಪನ್ವೇಲ್ ಮಾರ್ಗವಾಗಿ ಪುಣೆಗೆ ಹಾಗೂ ಸೋಮವಾರ ಮತ್ತು ಶುಕ್ರವಾರ ಪುಣೆಯಿಂದ ಎರ್ನಾಕುಲಂಗೆ ಸಂಚರಿಸುತ್ತದೆ. ಇದರಿಂದ ಕೇರಳದಿಂದ ಕೊಲ್ಲೂರು, ಕುಂದಾಪುರದಿಂದ ಕೇರಳ, ಮಹಾರಾಷ್ಟ್ರ, ಗೋವಾಕ್ಕೆ ಹೋಗುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು