ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಜವಾಬ್ದಾರಿ
Team Udayavani, Oct 15, 2021, 1:33 PM IST
ಉದ್ಯಾವರ: ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಜವಾಬ್ದಾರಿ ಆಗಲು ಮೊದಲು ನಾವು ನಮ್ಮ ಮನೆಯಲ್ಲಿ ಪ್ಲಾಸ್ಟಿಕ್ ಉಪಯೋಗ ನಿಲ್ಲಿಸಿದಾಗ ಮಾತ್ರ ಸಾಧ್ಯ ಎಂದು ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷೆ ಮೇರಿ ಡಿ’ಸೋಜಾ ಹೇಳಿದರು.
ಅವರು ಶನಿವಾರ ಕೆಥೋಲಿಕ್ ಸಭಾ ಉಡುಪಿ ಪ್ರದೇಶ, ಉಡುಪಿ ವಲಯ, ಉದ್ಯಾವರ ಘಟಕ ಹಾಗೂ ಇತರ ಸಹಭಾಗಿ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಮತ್ತು ನಿರ್ಮಲ ಪರಿಸರ ನಮ್ಮ ಕರ್ತವ್ಯ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕೆಥೋಲಿಕ್ ಸಭಾ ಆಧ್ಯಾತಿಕ ನಿರ್ದೇಶಕ ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್, ವಲಯ ಧರ್ಮಗುರು ವಂ|ಚಾರ್ಲ್ಸ್ ಮಿನೇಜಸ್, ಕೇಂದ್ರಿಯ ಸಮಿತಿಯ ನಿಯೋಜಿತ ಅಧ್ಯಕ್ಷ ಸಂತೋಷ್ ಕರ್ನೆಲಿಯೊ, ಉಪಾಧ್ಯಕ್ಷ ರೊನಾಲ್ಡ್ ಡಿ’ಆಲ್ಮೇಡಾ, ಕಾರ್ಯದರ್ಶಿ ಗ್ರೆಗರಿ ಪಿ.ಕೆ ಡಿ’ಸೋಜಾ, ವಲಯ ಅಧ್ಯಕ್ಷ ಲವೀನಾ ಪಿರೇರಾ, ಘಟಕ ಅಧ್ಯಕ್ಷ ಆಲ್ವಿನ್ ಅಂದ್ರಾದೆ, ಸ್ಥಳೀಯ ಉದ್ಯಾವರ ಚರ್ಚ್ನ ವಂ|ಝೇವಿಯರ್ ಪಿಂಟೊ, ಲಯನ್ಸ್ ಕ್ಲಬ್ ಅಧ್ಯಕ್ಷ ಗೋಡ್ ಫ್ರೀ ಡಿ’ಸೋಜಾ, ಸ್ತ್ರೀ ಸಂಘಟನೆಯ ಅಧ್ಯಕ್ಷೆ ಐರಿನ್ ಪಿರೇರ, ಐಸಿವೈಎಮ್ ಸಂಘಟನೆಯ ಅಧ್ಯಕ್ಷ ಪ್ರಿತೇಶ ಪಿಂಟೋ ಹಾಗೂ ಮೊದಲಾದವರು ಉಪಸ್ಥಿತರಿದ್ದರು.