“ಪೊಲೀಸರಿಗೆ ಕಾನೂನು ರಕ್ಷಣೆ ಜತೆಗೆ ಸಾಮಾಜಿಕ ಹೊಣೆಗಾರಿಕೆಯಿದೆ’

ಬೈಂದೂರು ವೃತ್ತ ನಿರೀಕ್ಷಕರ ನೂತನ ಕಚೇರಿ ಉದ್ಘಾಟನೆ

Team Udayavani, Nov 2, 2019, 3:25 AM IST

nov-49

ಬೈಂದೂರು: ಆಧುನಿಕತೆ ಬೆಳೆದಂತೆ ಅಪರಾಧಗಳ ರೀತಿಗಳು ಕೂಡ ಬದಲಾಗುತ್ತಿದೆ. ಪೊಲೀಸ್‌ ಇಲಾಖೆ ಜನ ಹಾಗೂ ಸಮಾಜದ ಕೇಂದ್ರ ಬಿಂದು. ತಂತ್ರಜ್ಞಾನ ಬೆಳೆದಂತೆ ಅಪರಾಧಗಳ ಸಂಖ್ಯೆ ಕೂಡ ಹೆಚ್ಚುತ್ತಿದೆ. ಪ್ರಸ್ತುತ ಪೊಲೀಸ್‌ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಅಧಿಕಾರಿಗಳು ಸಮಾಜಮುಖೀ ಸೇವೆ ನೀಡಬೇಕು. ಕಾನೂನು ರಕ್ಷಣೆಯ ಜತೆಗೆ ಸಾಮಾಜಿಕ ಹೊಣೆಗಾರಿಕೆ ಕೂಡ ಪೊಲೀಸರ ಮೇಲಿದೆ ಎಂದು ರಾಜ್ಯ ಗೃಹ ಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಬೈಂದೂರು ವೃತ್ತ ನಿರೀಕ್ಷಕ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಕ್ಲಪ್ತ ಸಮಯದಲ್ಲಿ ಅಪರಾಧಗಳ ಶೋಧನೆ,ಸಾಮಾಜಿಕ ಜಾಲತಾಣಗಳ ಪ್ರಕರಣ ಭೇದಿಸುವುದು, ಸೈಬರ್‌ ವಂಚನೆಗಳನ್ನು ನಿಯಂತ್ರಿಸುವ ಸವಾಲುಗಳಿರುವುದರಿಂದ ಸೈಬರ್‌ ಘಟಕಗಳನ್ನು ಗಟ್ಟಿಗೊಳಿಸಲಾಗುತ್ತಿದೆ.ಕರಾವಳಿ ಕಾವಲು ಪಡೆ ಶಸಕ್ತರಾಗಬೇಕೆನ್ನುವ ಉದ್ದೇಶದಿಂದ ಹೆಚ್ಚುವರಿ ಅನುದಾನ ನೀಡಲಾಗುವುದು. ಕೇಂದ್ರ ಹಾಗೂ ರಾಜ್ಯ ಸರಕಾರದ ಅನುದಾನ ವಿನಿಯೋಗ ಮಾಡಿ ಇಲಾಖೆಯನ್ನು ಇನ್ನಷ್ಟು ಬಲಗೊಳಿಸಲಾಗುತ್ತದೆ
ಎಂದು ಹೇಳಿದರು.

ಶೀಘ್ರ ತಾಲೂಕು ವ್ಯಾಪ್ತಿಗೆ ಮಹಿಳಾ ಠಾಣೆ
ಕುಂದಾಪುರದಲ್ಲಿರುವ ಮಹಿಳಾ ಠಾಣೆಯನ್ನು ಜಿಲ್ಲಾ ಕೇಂದ್ರ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಇದರಿಂದ ಬೈಂದೂರಿನ ಸಂತ್ರಸ್ತರು ಮಹಿಳಾ ಠಾಣೆಗೆ ದೂರು ನೀಡಬೇಕಾದರೆ ಉಡುಪಿಗೆ ತೆರಳಬೇಕು ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಿಲ್ಲಾ ಕೇಂದ್ರದಲ್ಲಿ ಮಹಿಳಾ ಠಾಣೆ ಇರಬೇಕಾಗಿರುವ ಉದ್ದೇಶದಿಂದ ವರ್ಗಾಯಿಸಲಾಗಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಮಾಹಿತಿ ಪಡೆದುಕೊಂಡಿದ್ದು ತಾಲೂಕು ಕೇಂದ್ರವಾದ ಬೈಂದೂರಿಗೆ ಮಹಿಳಾ ಠಾಣೆ ಮಂಜೂರು ಮಾಡುವ ಕುರಿತು ಪ್ರಕ್ರಿಯೆ ಮುಂದುವರಿಸುತ್ತೆನೆ ಎಂದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸರಕಾರ ಹಾಗೂ ಖಾಸಗಿ ಬಂಡವಾಳ ಹೂಡಿಕೆ ಮಾಡಲಾಗುವುದು. ಔರಾದ್ಕರ್‌ ವರದಿ ಸಮರ್ಪಕವಾಗಿ ಅನುಷ್ಠಾನವಾಗಿದೆ. ಈ ಬಗ್ಗೆ ಗೊಂದಲಗಳಿಲ್ಲ. ಸಮಾನಾಂತರ ಪಾವತಿ ಕ್ರಮ ನಡೆಯುತ್ತಿದೆ ಎಂದರು.

ಬೈಂದೂರು ಶಾಸಕ ಬಿ. ಎಂ. ಸುಕುಮಾರ್‌ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೈಂದೂರು ಕ್ಷೇತ್ರದ ಜನರು ಶಾಂತಿಪ್ರಿಯರಾಗಿದ್ದಾರೆ. ಇಲಾಖೆಯ ಮುತುವರ್ಜಿ, ಸಾರ್ವಜನಿಕರ ಸಹಕಾರದಿಂದ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ರಘುಪತಿ ಭಟ್‌, ಭಟ್ಕಳ ಶಾಸಕ ಸುನೀಲ್‌ ನಾಯ್ಕ, ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌, ಯಡ್ತರೆ ಗ್ರಾ.ಪಂ. ಅಧ್ಯಕ್ಷೆ ಮೂಕಾಂಬು ದೇವಾಡಿಗ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಕುಮಾರ ಚಂದ್ರ, ಕುಂದಾಪುರ ಸಹಾಯಕ ಪೊಲೀಸ್‌ ಅಧೀಕ್ಷಕ ಹರಿರಾಮ್‌ ಶಂಕರ್‌, ತಾ.ಪಂ. ಅಧ್ಯಕ್ಷೆ ಶ್ಯಾಮಲಾ ಕುಂದರ್‌, ಮಟ್ಟಾರು ರತ್ನಾಕರ ಹೆಗ್ಡೆ, ಕರ್ನಾಟಕ ಸ್ಟೇಟ್‌ ಪೊಲೀಸ್‌ ಕಾರ್ಪೊರೇಶನ್‌ ಎ.ಇ. ಗೋಪಾಲ ಕೃಷ್ಣ, ಸಂತೋಷ ಕುಮಾರ್‌ ಉಳ್ಳಾಲ ಎ.ಇ., ಬೈಂದೂರು ವೃತ್ತ ನಿರೀಕ್ಷಕ ಸುರೇಶ ನಾಯ್ಕ,ಠಾಣಾಧಿಕಾರಿ ತಿಮ್ಮೇಶ್‌ ಬಿ.ಎನ್‌. ಉಪಸ್ಥಿತರಿದ್ದರು.

ಈ ಸಂದರ್ಭ ಗುತ್ತಿಗೆದಾರ ಪ್ರಮೋದ್‌ ಶೆಟ್ಟಿ ಅವರನ್ನು ಗೌರವಿಸಲಾಯಿತು. ಶಿಕ್ಷಕ ಸುಧಾಕರ ಪಿ. ಬೈಂದೂರು ಸ್ವಾಗತಿಸಿ, ನಿರ್ವಹಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.