ದೇಗುಲಗಳಲ್ಲಿ ವಿಶೇಷ ಪೂಜೆ, ಗೋಪೂಜೆ

ನಗರದಲ್ಲಿ ಸಂಭ್ರಮದ ದೀಪಾವಳಿ

Team Udayavani, Oct 29, 2019, 4:19 AM IST

x-30

ಮಹಾನಗರ: ದೀಪಾವಳಿ ಹಿನ್ನೆಲೆಯಲ್ಲಿ ನಗರದ ವಿವಿಧ ದೇವಸ್ಥಾನಗಳಲ್ಲಿ ಸೋಮವಾರ ವಿಶೇಷ ಪೂಜೆ ಪುನಸ್ಕಾರಗಳು ಜರಗಿದವು. ಗೋಪೂಜೆ, ವಾಹನ ಪೂಜೆ, ಬಲಿಯೇಂದ್ರ ಪೂಜೆಗಳನ್ನು ನೆರವೇರಿಸಲಾಯಿತು.

ಸೋಮವಾರ ದೀಪಾವಳಿ ಹಾಗೂ ಬಲಿಪಾಡ್ಯಮಿ ದಿನ. ಈ ಹಿನ್ನೆಲೆ ಯಲ್ಲಿ ವಿವಿಧ ದೇವಸ್ಥಾನಗಳಲ್ಲಿ ವಾಹನಪೂಜೆ, ಬಲಿಯೇಂದ್ರ ಪೂಜೆ, ಗೋಪೂಜೆಯನ್ನು ಈ ದಿನದಂದು ನೆರವೇರಿಸಲಾಯಿತು. ಬೆಳಗ್ಗೆಯಿಂದಲೇ ವಿವಿಧ ದೇವಸ್ಥಾನಗಳಿಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜಾ ವಿಧಿಗಳಲ್ಲಿ ಪಾಲ್ಗೊಂಡರು. ವಾಹನಗಳನ್ನು ದೇವಸ್ಥಾನಗಳಿಗೆ ಕೊಂಡೊಯ್ದು ಪೂಜೆಯನ್ನು ನೆರವೇರಿ ಸಿದರು. ನಿತ್ಯಪೂಜೆಗಳೊಂದಿಗೆ ದೀಪಾವಳಿ ವಿಶೇಷ ಪೂಜೆಗಳು ನಡೆದವು. ಕೆಲವು ದೇವಸ್ಥಾನಗಳಲ್ಲಿ ಬಲಿಯೇಂದ್ರ ಪೂಜೆ ಮಂಗಳವಾರದಂದು ನೆರವೇರಲಿದೆ.

ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ 100ಕ್ಕೂ ಹೆಚ್ಚು ಗೋವುಗಳಿಗೆ ಗೋಪೂಜೆ ನಡೆಯಿತು. ಗೋವುಗಳಿಗೆ ಹೂಹಾರ ಹಾಕಿ, ಆರತಿ ಬೆಳಗಲಾಯಿತು. ರವಿವಾರ ರಾತ್ರಿ ದೇವಸ್ಥಾನದಲ್ಲಿ ಬಲಿಯೇಂದ್ರ ಪೂಜೆ ಜರಗಿತು. ದೇವಸ್ಥಾನದ ಆಡಳಿತ ಮೊಕ್ತೇಸರ ರಮಾನಾಥ ಹೆಗ್ಡೆ, ರಾಮ್‌ ನಾಯಕ್‌, ಪ್ರೇಮಲತಾ, ಗೋವನಿತಾಶ್ರಯ ಟ್ರಸ್ಟಿನ ಎಲ್‌. ಶ್ರೀಧರ ಭಟ್‌, ಲಕ್ಷೀಶ ಯಡಿಯಾಲ್‌, ಪ್ರವೀಣ್‌ ಕುತ್ತಾರ್‌, ಪ್ರೇಮಲತಾ ಆಚಾರ್‌, ಮಂಗಳಾ, ಶಾರದಮ್ಮ ಭಾಗವಹಿಸಿದ್ದರು.

ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಗೋಪೂಜೆ, ವಾಹನ ಪೂಜೆ, ರಾತ್ರಿ ಬಲಿಯೇಂದ್ರ ಪೂಜೆ, ತುಳಸಿ ಪೂಜೆ ಜರಗಿತು. ಕದ್ರಿ ದೇವಸ್ಥಾನದಲ್ಲಿ ರಾತ್ರಿ ದೇವರ ಬಲಿ ಹೊರಟು ಕೆಳಗಿನ ಕಟ್ಟೆಯಲ್ಲಿ ಪೂಜಾವಿಧಿಗಳು ಜರಗಿದವು. ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮಧ್ಯಾಹ್ನ ಗೋಪೂಜೆ, ರಾತ್ರಿ ಬಲಿಯೇಂದ್ರ ಪೂಜೆ ಜರಗಿತು. ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ರವಿವಾರ ಬಲಿಯೇಂದ್ರ ಪೂಜೆ, ಮಹಾಪೂಜಾದಿಗಳು ಜರಗಿದವು. ರಥಬೀದಿ ಕಾಳಿಕಾಂಬಾ ಶ್ರೀ ವಿನಾಯಕ ದೇವಸ್ಥಾದಲ್ಲಿ ರಾತ್ರಿ ಗೋ-ಪೂಜೆ, ಬಲಿಯೇಂದ್ರ ಪೂಜೆ ನಡೆಯಿತು. ದೀಪಾವಳಿ ಹಿನ್ನೆಲೆಯಲ್ಲಿ ಪೊಳಲಿ ಮಾದುಕೋಡಿಯ ಕೊರಗಜ್ಜ ದೈವ ಸಾನಿಧ್ಯದ ಶ್ರೀಸಾಯಿ ಹೀಲಿಂಗ್‌ ಸೆಂಟರ್‌ ಆಶ್ರಯದಲ್ಲಿ ಕ್ಷೀರ ಅನ್ನ ಸೇವೆ ಹಾಗೂ ದೀಪಾರಾಧನೆ ನೆರವೇರಿತು. ನೂರಾರು ಭಕ್ತರು ಭಾಗವಹಿಸಿದ್ದರು.

ಬಪ್ಪನಾಡು ದೇವಸ್ಥಾನದಲ್ಲಿ ದೀಪಾವಳಿ ಪೂಜೆ
ಮೂಲ್ಕಿ: ನಗರದೆಲ್ಲೆಡೆ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಸೋಮವಾರದಂದು ಸಾರ್ವಜನಿಕರು ದೇಗುಲ ಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮತ್ತು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದೀಪಾವಳಿಯ ಪ್ರಯುಕ್ತ ವಿಶೇಷ ಪೂಜೆ ಜರಗಿದವು. ದೇವಸ್ಥಾನದಲ್ಲಿ ಆಯುಧ ಪೂಜೆಯ ಪ್ರಯುಕ್ತವಾಗಿ ವಾಹನಗಳಿಗೆ ಪೂಜೆ ಮಾಡಿಸಿದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.