14 ವರ್ಷಗಳಿಂದ ಕೊಲನಿಗೆ ಕಲಿಕೋಪಕರಣ ವಿತರಣೆ ಮಾಡುತ್ತಿರುವ ಕೊಡುಗೈ ದಾನಿ


Team Udayavani, Jul 8, 2019, 5:29 PM IST

1

ಬದಿಯಡ್ಕ: ಎಲ್ಲಾ ಮಕ್ಕಳಿಗೂ ವಿದ್ಯಾಭ್ಯಾಸದ ಹಕ್ಕಿದೆ. ಆದುದರಿಂದ ಸೂಕ್ತ ವಿದ್ಯಾಭ್ಯಾಸ ನೀಡುವಲ್ಲಿ ಹೆತ್ತವರು ಆಸಕ್ತಿ ತೋರಬೇಕು. ಸರಕಾರಿ ಶಾಲೆ ಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಉಚಿತವಾಗಿ ನೀಡಲಾಗುತ್ತಿದೆ. ಎಲ್ಲರೂ ತಮ್ಮ ಮ್ಕಕಳನ್ನು ಶಾಲೆಗೆ ಕಳುಹಿಸಲೇಬೇಕು. ಮಾತ್ರವಲ್ಲದೆ ಈ ಶಾಲೆಯ ಕಟ್ಟಡಕ್ಕೆ 2 ಲಕ್ಷ ರೂ. ಮೀಸಲಿಟ್ಟಿದ್ದೇವೆ. ಇನ್ನು 2 ತಿಂಗಳಲ್ಲಾಗಿ ಕೆಲಸ ಪ್ರಾರಂಭಿಸಲಿದ್ದೇವೆ. ಇಲ್ಲಿನ ವಿದ್ಯುತ್ತಿನ ಕೊರತೆಯನ್ನು ಪಂಚಾಯತು ಈಗಾಗಲೇ ನೀಗಿಸಿದೆ. ಇಲ್ಲಿಯ ಮಕ್ಕಳಿಗೆ ಕಲಿಯುವಿಕೆಗೆ ಬೇಕಾದ ಹಣದ ಕೊರತೆಯಿರಬಾರದು ಎಂಬ ದೃಷ್ಟಿಯಿಂದ 14 ವರ್ಷಗಳಿಂದ ಪುಸ್ತಕ ಉಚಿತವಾಗಿ ತನ್ನ ಸ್ವಂತ ಕೈಯಿಂದ ನೀಡುತ್ತಿದ್ದೇನೆ ಎಂದು ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್‌.ಕೃಷ್ಣ ಭಟ್‌ ಹೇಳಿದರು.

ಅವರು ಪೆರಡಾಲ ಕೊರಗ ಕಾಲನಿಯ ಎಂ.ಜಿ.ಎಲ್‌.ಸಿ. ಏಕಧ್ಯಾಪಕ ಶಾಲೆಯ ಕೊರಗ ಮಕ್ಕಳಿಗೆ ತನ್ನ ಸ್ವಂತ ಖರ್ಚಿನಿಂದ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು.

ಬಡವರ ಪಾಲಿಗೆ ವಿದ್ಯೆ ಕೇವಲ ಒಂದು ಕನಸಾಗದೆ ನಾಳೆಯ ಬೆಳಕಾಗಬೇಕು ಎಂಬ ಉದ್ಧೇಶದಿಂದ ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್‌.ಕೃಷ್ಣ ಭಟ್‌ ಪೆರಡಾಲ ಕೊರಗ ಕಾಲನಿಯ ಎಂ.ಜಿ.ಎಲ್‌.ಸಿ. ಮಕ್ಕಳಿಗೆ ಸುಮಾರು 10 ವರ್ಷದಿಂದ ಬರವಣಿಗೆ ಸಾಮಾಗ್ರಿಗಳನ್ನು ಉಚಿತವಾಗಿ ನೀಡುತ್ತಿದ್ದಾರೆ . ಇವರು ಕೇವಲ ರಾಜಕೀಯ ರಂಗದಲ್ಲಿ ಮಾತ್ರವಲ್ಲದೆ ಸಮಾಜ ಸೇವೆಯಲ್ಲಿಯೂ ಗುರುತಿಸಿಕೊಂಡ ವ್ಯಕ್ತಿ. ಕಿಳಿಂಗಾರಿನ ಸಾಯಿರಾಮ್‌ ಮನೆಯವರು ಬಡವರಿಗೆ ಮನೆಗಳನ್ನು, ರಿಕ್ಷಾ, ಹೊಲಿಗೆ ಯಂತ್ರ ಮುಂತಾದವುಗಳನ್ನು ಉಚಿತವಾಗಿ ನೀಡಿ ಆಸರೆಯಾಗುವ ಕೊಡುಗೆ„ದಾನಿಗಳು. ಇವರ ಸೇವೆ ಮನೆಮಾತಾಗಿದೆ ಎಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಉಪಾಧ್ಯಕ್ಷರಾದ ಪ್ರೊ.ಶ್ರೀನಾಥ್‌ ಅಭಿಪ್ರಾಯಪಟ್ಟರು. ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಬದಿಯಡ್ಕ ಗ್ರಾಮ ಪಂಚಾಯತಿನ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ಯಾಮ ಪ್ರಸಾದ ಮಾನ್ಯ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಎಂ.ಜಿ.ಎಲ್‌.ಸಿ.ಯ ಎಲ್ಲಾ ಮಕ್ಕಳಿಗೂ ಪುಸ್ತಕ ವಿತರಿಸಲಾಯಿತು. ಪಂಚಾಯತು ಅಧ್ಯಕ್ಷರು ತುಳುವಿನಲ್ಲಿ ಮಾತನಾಡಿ ಎಲ್ಲರ ಗಮನ ಸೆಳೆದರು. ಎಂ.ಜಿ.ಎಲ್‌.ಸಿ.ಯ ಅಧ್ಯಾಪಕರಾದ ಬಾಲಕೃಷ್ಣ ಸ್ವಾಗತಿಸಿ, ಪುಷ್ಪಾ ವಂದಿಸಿದರು.

ಕೊಲನಿಯಲ್ಲಿ ಯಾವುದೇ ತೊಂದರೆಗಳಿದ್ದಲ್ಲಿ ಪರಿಹರಿಸುವುದರಲ್ಲಿ ಪಂಚಾಯತು ಕಾರ್ಯಪ್ರವೃತ್ತವಾಗಿದೆ. ಇಲ್ಲಿನ ಎಲ್ಲರೂ ವಿದ್ಯಾಭ್ಯಾಸ ವಂತರಾಗಬೇಕು ಎಂಬುದು ನಮ್ಮ ಆಸೆ. ಆದಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರಗಳನ್ನು ನೀಡಲಾಗುವುದು.
ಶ್ಯಾಮ ಪ್ರಸಾದ ಮಾನ್ಯ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.