AIADMK ಯಿಂದಲೂ ಮೇಕೆದಾಟುಗೆ ಕ್ಯಾತೆ:ಪ್ರಣಾಳಿಕೆಯಲ್ಲಿ ಏನೇನಿದೆ?


Team Udayavani, Mar 23, 2024, 6:12 AM IST

1-aawqw

ಚೆನ್ನೈ: ದಿನಗಳ ಹಿಂದೆ ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಕರ್ನಾಟಕ ಸರಕಾರ ಮೇಕೆದಾಟುವಿನಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಅಣೆಕಟ್ಟು ಯೋಜನೆಗೆ ತಕರಾರು ತೆಗೆದಿತ್ತು. ಇದೀಗ ಆ ರಾಜ್ಯದ ಪ್ರಮುಖ ವಿಪಕ್ಷ ಎಐಎಡಿಎಂಕೆ ಕೂಡ ಯೋಜನೆಯ ವಿರುದ್ಧ ನಿಲುವು ಪ್ರಕಟಿಸಿದೆ.

ಶುಕ್ರವಾರ ಚೆನ್ನೈಯಲ್ಲಿ ಬಿಡುಗಡೆಯಾಗಿರುವ ಆ ಪಕ್ಷದ ಪ್ರಣಾಳಿಕೆಯಲ್ಲಿ ಈ ಅಂಶವನ್ನು ತಮಿಳುನಾಡಿನ ಪ್ರಮುಖ ವಿಪಕ್ಷವಾಗಿರುವ ಎಐಎಡಿಕೆ ಉಲ್ಲೇಖಿಸಿದೆ. ಪ್ರಮುಖವಾಗಿ ಕಾವೇರಿ-ಗುಂಡಾರ್‌-ವೈಗೈ, ಗೋದಾವರಿ-ಕಾವೇರಿ ನದಿ ಜೋಡಣೆಗೂ ಆಗ್ರಹಿಸಿದೆ. ಮೊನ್ನೆಯಷ್ಟೇ ಪ್ರಕಟವಾದ ಡಿಎಂಕೆ ಪ್ರಣಾಳಿಕೆಯಲ್ಲೂ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಹೇಳಲಾಗಿತ್ತು.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಮತ್ತು ಇತರರು ಚೆನ್ನೈಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದರು. ಆರ್ಥಿಕವಾಗಿ ಹಿಂದುಳಿದ ಪ್ರತೀ ಕುಟುಂಬದ ಮಹಿಳಾ ಮುಖ್ಯಸ್ಥೆಗೆ ತಿಂಗಳಿಗೆ 3,000 ರೂ. ಸಹಾಯಧನ, ತಮಿಳುನಾಡಿನಲ್ಲಿ ರಾಜ್ಯಪಾಲರು ಮತ್ತು ಸರಕಾರದ ನಡುವೆ ತಿಕ್ಕಾಟ ನಡೆಯುತ್ತಿರುವುದರಿಂದ ಮುಖ್ಯಮಂತ್ರಿ ಜತೆಗೆ ಸಮಾಲೋಚನೆ ನಡೆಸಿದ ಬಳಿಕವೇ ನಡೆಸಬೇಕು ಎಂದೂ ಪ್ರಣಾಳಿಕೆಯಲ್ಲಿ ಆಗ್ರಹಿಸಲಾಗಿದೆ. ಇದರ ಜತೆಗೆ ನೀಟ್‌ಗೆ ಪರ್ಯಾಯ ಪರೀಕ್ಷೆ, ಚೆನ್ನೈಯಲ್ಲಿ ಸುಪ್ರೀಂ ಕೋರ್ಟ್‌ ಪೀಠ ಸೇರಿದಂತೆ ಒಟ್ಟು 113 ಭರವಸೆಗಳನ್ನು ನೀಡಿದ್ದೇವೆ ಎಂದು ವಾಗ್ಧಾನ ಮಾಡಿದೆ.

ಡಿಎಂಕೆ-ಎಐಎಡಿಎಂಕೆ ಪ್ರಣಾಳಿಕೆಯಲ್ಲಿ ಸಾಮ್ಯತೆ!
ತಮಿಳುನಾಡಿನ ಆಡಳಿತ ಮತ್ತು ವಿಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳು ಪ್ರಕಟಿಸಿರುವ ಪ್ರಣಾಳಿಕೆಗಳಲ್ಲಿ ಸಾಕಷ್ಟು ಸಾಮ್ಯತೆಗಳಿವೆ. ಕರ್ನಾಟಕದ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ವಿರೋಧ, ಬಡ ಕುಟುಂಬದ ಮುಖ್ಯಸ್ಥೆಗೆ ಮಾಸಿಕ ಆರ್ಥಿಕ ನರೆವು, ಚೆನ್ನೈಯಲ್ಲಿ ಸುಪ್ರೀಂ ಕೋರ್ಟ್‌ ಪೀಠ ಸ್ಥಾಪನೆ, ರಾಜ್ಯಪಾಲರ ನೇಮಕ, ಶೈಕ್ಷಣಿಕ ಸಾಲಮನ್ನಾ, ಎನ್‌ಇಪಿ ರದ§ತಿ, ಸಿಎಎ ರದ್ಧತಿ, ಹಿಂದಿ ಹೇರಿಕೆಗೆ ವಿರೋಧ ಇತ್ಯಾದಿ ಭರವಸೆಗಳೂ ಎರಡೂ ಪಕ್ಷಗಳ ಪ್ರಣಾಳಿಕೆಯಲ್ಲಿರು ವುದು ಸೋಜಿಗವಾಗಿದೆ.

ಎಐಎಡಿಎಂಕೆ ಪ್ರಣಾಳಿಕೆಯಲ್ಲಿ ಏನೇನಿದೆ?
ಚೆನ್ನೈಯಲ್ಲಿ ಚಳಿಗಾಲದ ಸಂಸತ್‌ ಅಧಿವೇಶನ
ಹಿಂದಿ ಹೇರಿಕೆಗೆ ವಿರೋಧ
ಮುಲ್ಲಪೆರಿಯಾರ್‌ ವಿವಾದ ಬಗೆಹರಿಸುವುದು
ದಿನದ 24 ಗಂಟೆಯೂ ತ್ರಿಫೇಸ್‌ ವಿದ್ಯುತ್‌
ಶೈಕ್ಷಣಿಕ ಸಾಲ ಸಂಪೂರ್ಣ ಮನ್ನಾ
ಕೇಂದ್ರದ ಯೋಜನೆಗಳಲ್ಲಿ ಕೇಂದ್ರ ಪಾಲು ಹೆಚ್ಚಳ
ನೀಟ್‌ಗೆ ಪರ್ಯಾಯ ಪರೀಕ್ಷೆ
ಹೈವೇಗಳಲ್ಲಿ ಬೈಕ್‌ಗಳಿಗೆ ಪ್ರತ್ಯೇಕ ಲೇನ್‌
ಎನ್‌ಇಪಿ ಬದಲಿಗೆ ಹೊಸ ಶಿಕ್ಷಣ ನೀತಿ
ಸಿಎಎ ವ್ಯಾಪ್ತಿಗೆ ತಮಿಳು ಶ್ರೀಲಂಕನ್‌. ಮುಸ್ಲಿಮರು
ಉದ್ಯೋಗ ಖಾತ್ರಿ ವೇತನ ಹೆಚ್ಚಳಕ್ಕೆ ಕ್ರಮ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.