Ayodhya;ಮೋದಿ ಭರ್ಜರಿ ರೋಡ್ ಶೋ: ಜನರ ಹೃದಯ ರಾಮನಷ್ಟೇ ವಿಶಾಲ
Team Udayavani, May 6, 2024, 6:10 AM IST
ಲಕ್ನೋ: 3ನೇ ಹಂತದ ಲೋಕಸಭೆ ಚುನಾವಣೆಗೆ ಇನ್ನೇನು 2 ದಿನಗಳು ಬಾಕಿ ಇರುವಂತೆಯೇ ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ರಾಮ ಮಂದಿರ ಉದ್ಘಾಟನೆಯ ಬಳಿಕ ಅಯೋಧ್ಯೆಗೆ ಮೋದಿ ಅವರ ಮೊದಲ ಭೇಟಿ ಇದಾಗಿದ್ದು, ಜನರು ಅದ್ದೂರಿ ಸ್ವಾಗತ ಕೋರಿದ್ದಾರೆ.
ಜನಸಾಗರವೇ ಸೇರಿದ್ದ ರಸ್ತೆಯಲ್ಲಿ ತೆರೆದ ವಾಹನದಲ್ಲಿ ಪಿಎಂ ರೋಡ್ ಶೋ ನಡೆಸಿದ್ದು, ಸಿಎಂ ಯೋಗಿ ಆದಿತ್ಯನಾಥ ಕೂಡ ಸಾಥ್ ನೀಡಿದ್ದಾರೆ. ಫೈಜಾಬಾದ್ನ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಲಲ್ಲು ಸಿಂಗ್ ಪರವಾಗಿ ಮೋದಿ ಮತಯಾಚಿಸಿದ್ದು, ಜನರು ಪ್ರಧಾನಿ ಮೇಲೆ ಪುಷ್ಪವೃಷ್ಟಿಗರೆದಿದ್ದಾರೆ. ಸುಗ್ರೀವಾ ಫೋರ್ಟ್ ನಿಂದ ಲತಾ ಮಂಗೇಶ್ಕರ್ ಚೌಕ್ ವರೆಗೆ 2 ಕಿ.ಮೀ. ದೂರದವರೆಗೆ ರೋಡ್ ಶೋ ನಡೆದಿದೆ. ಇದರಲ್ಲಿ ಭಾಗಿಯಾಗಿದ್ದ ಜನರಿಗೆ ಪ್ರಧಾನಿ ಎಕ್ಸ್ ನಲ್ಲಿ ಧನ್ಯವಾದ ತಿಳಿಸಿದ್ದು, “ಅಯೋಧ್ಯಾ ಜನರ ಹೃದಯ ಶ್ರೀರಾಮನಷ್ಟೇ ವಿಶಾಲವಾದುದು. ನಮ್ಮನ್ನು ಬೆಂಬಲಿಸಲು ನೆರೆದಿರುವ ಎಲ್ಲರಿಗೂ ಧನ್ಯವಾದಗಳು’ ಎಂದು ಟ್ವೀಟ್ ಮಾಡಿದ್ದಾರೆ. 3ನೇ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರವೂ ರವಿವಾರ ಅಂತ್ಯಗೊಂಡಿದೆ.
ಬಾಲಕರಾಮನ ಆಶೀರ್ವಾದ ಪಡೆದ ಮೋದಿ
ಐತಿಹಾಸಿಕ ರಾಮ ಮಂದಿರದ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಬಾಲಕರಾಮನ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ರಾಮನ ಪಾದಕ್ಕೆ ಪುಷ್ಪಗಳನ್ನು ಅರ್ಪಿಸಿ, ದೀರ್ಘದಂಡ ನಮಸ್ಕಾರ ಮಾಡಿ, ಬಾಲಕರಾಮನ ಆಶೀರ್ವಾದ ಕೋರಿದ್ದಾರೆ. ಪ್ರಧಾನಿ ಆಗಮನಕ್ಕೆ ಮಂದಿರವನ್ನು ಸಂಪೂರ್ಣವಾಗಿ ಸಿಂಗರಿಸಲಾಗಿತ್ತು. ಮಂದಿರದ ಆವರಣದಲ್ಲಿ ಪ್ರಧಾನಿ ಅವರನ್ನು ಕಂಡ ಭಕ್ತರು ಪುಳಕಿತರಾಗಿದ್ದಾರೆ.
ಪ್ರಧಾನಿಗೆ ಅದ್ದೂರಿ ಸ್ವಾಗತ ನೀಡಿದ ಅಯೋಧ್ಯೆ
ಮೋದಿ ಆಗಮನಕ್ಕೆ ಸ್ವಾಗತ ಕೋರಲು ರವಿವಾರ ಇಡೀ ಅಯೋಧ್ಯಾನಗರಿ ಸಜ್ಜು ಗೊಂಡಿತ್ತು. ಎಲ್ಲೆಡೆ ಪುಷ್ಪಾಲಂಕಾರ ಮತ್ತು ದೀಪಾಲಂಕಾರಗಳನ್ನು ಮಾಡಲಾಗಿತ್ತು. ಸಿಎಂ ಯೋಗಿ ಮತ್ತು ಮೋದಿ ಅವರ ಕಟೌಟ್ಗಳು ನಗರದ ಎಲ್ಲೆಡೆ ರಾರಾಜಿಸಿದವು. ಮಂದಿರದ ಉದ್ಘಾಟನೆ ಸಂದರ್ಭದಲ್ಲಿ ಅಯೋಧ್ಯೆ ಸಜ್ಜುಗೊಂಡಿದ್ದ ಮಾದರಿಯಲ್ಲೇ ರಸ್ತೆ ಬದಿಯಲ್ಲಿ ಸಂಪೂರ್ಣ ಕೇಸರಿ ಬಾವುಟಗಳು, ಹೂವುಗಳಿಂದ ಅಲಂಕರಿಸಲಾಗಿತ್ತು. ರೋಡ್ ಶೋ ನಡೆಯುವ 2 ಕಿ.ಮೀ. ಮಾರ್ಗದ ಉದ್ದಕ್ಕೂ ಜನರು ಪ್ರಧಾನಿಯನ್ನು ಸ್ವಾಗತಿಸಲು ಕಿಕ್ಕಿರಿದು ನಿಂತಿದ್ದರು. ನಗರದಾದ್ಯಂತ ಭದ್ರತಾ ವ್ಯವಸ್ಥೆಯನ್ನೂ ಬಿಗಿಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ
Form 17c: ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?
Lok Sabha Election 2024: 6ನೇ ಹಂತದ ಪ್ರಚಾರ ಅಂತ್ಯ, 25ರಂದು 58 ಕ್ಷೇತ್ರಗಳಲ್ಲಿ ಚುನಾವಣೆ
Pakistan ತಾಕತ್ತೇನೆಂದು ಖುದ್ದು ಪರೀಕ್ಷಿಸಿ ಬಂದಿರುವೆ:ಮೋದಿ!
Election Commission;ಎಲ್ಲ ಬೂತ್ಗಳ ಮಾಹಿತಿ ಪ್ರಕಟ ಅಸಾಧ್ಯ: ಏನಿದು ಫಾರ್ಮ್ 17-ಸಿ?
MUST WATCH
ಹೊಸ ಸೇರ್ಪಡೆ
Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ
Martin: ಬಂತು ಸ್ಟಾರ್ ಸಿನಿಮಾ; ಧ್ರುವ ಸರ್ಜಾ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದ ತಂಡ
Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು
Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್
Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು