BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
ಜಿಗಜಿಣಗಿ ಮೂರು ಬಾರಿ ಸಂಸದರಾಗಿ, ಸಚಿವರಾಗಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಶೂನ್ಯ...
Team Udayavani, Mar 27, 2024, 1:39 PM IST
ವಿಜಯಪುರ : ಪರಿಶಿಷ್ಟ ಜಾತಿಗೆ ಮೀಸಲಿರುವ ವಿಜಯಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಂಜಾರಾ ಸಮುದಾಯಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ನಗರದಲ್ಲಿರುವ ಬಿಜೆಪಿ ಕಚೇರಿ ಎದುರು ಬಂಜಾರಾ ಸಮಾಜದಿಂದ ಪ್ರತಿಭಟನೆ ನಡೆಸಿದರು.
ಬುಧವಾರ ನಗರದಲ್ಲಿರುವ ಬಿಜೆಪಿ ಕಚೇರಿ ಎದುರು ಜಮಾಯಿಸಿದ ಬಂಜಾರಾ ಸಮಾಜದ ಯುವಕರು, ಸಂಘ ಪರಿವಾರದ ಹಿನ್ನೆಲೆಯ ತಮ್ಮ ಸಮಾಜದ ಡಾ.ಬಾಬುರಾಜೇಂದ್ರ ನಾಯಿಕ ಅವರಿಗೆ ಟಿಕೆಟ್ ನೀಡದೇ ಅನ್ಯಾಯ ಮಾಡಲಾಗಿದೆ. ಕೂಡಲೇ ಪಕ್ಷದ ವರಿಷ್ಠರು ರಮೇಶ ಜಿಗಜಿಣಗಿ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ್ದನ್ನು ಹಿಂಪಡೆದು ಡಾ.ಬಾಬುರಾಜೇಂದ್ರ ನಾಯಿಕ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಡಾ.ಬಾಬುರಾಜೇಂದ್ರ ನಾಯಿಕ ಪರ ಮಾತ್ರವಲ್ಲದೇ ಜಿಗಜಿಣಗಿ ಹಠಾವೋ, ಬಿಜೆಪಿ ಬಜಾವೋ ಎಂಬ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಒಂದು ಹಂತದಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾಕಾರರು, ರಮೇಶ ಜಿಗಜಿಣಗಿ ಮೂರು ಬಾರಿ ಸಂಸದರಾಗಿ, ಸಚಿವರಾಗಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಶೂನ್ಯ. ಹೀಗಾಗಿ ಕೂಡಲೇ ಬಿಜೆಪಿ ವರಿಷ್ಠರು ಘೋಷಿತ ಜಿಗಜಿಣಗಿ ಅವರ ಬದಲಾಗಿ ಡಾ.ಬಾಬುರಾಜೇಂದ್ರ ನಾಯಿಕ ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ