Politics: ಕಾಂಗ್ರೆಸ್ ಸೇರ್ಪಡೆ ಖಚಿತಪಡಿಸಿದ ಬಿಜೆಪಿಯ ಯೋಗೇಶ್ವರ್ ಪುತ್ರಿ ನಿಶಾ
Team Udayavani, Mar 30, 2024, 8:36 PM IST
ರಾಮನಗರ: ಬಿಜೆಪಿ ಮುಖಂಡ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಪುತ್ರಿ ನಿಶಾ ಅವರು ಇತ್ತೀಚೆಗೆ ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೀಘ್ರದಲ್ಲೇ ಅವರು ಕಾಂಗ್ರೆಸ್ ಸೇರಲಿದ್ದಾರೆ.
ಕೆಲವು ತಿಂಗಳ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ನಿಶಾ ಭೇಟಿ ಮಾಡಿದ್ದರು. ಬಳಿಕ ಬಿಎಂಐಸಿಪಿ ಅಧ್ಯಕ್ಷರಾಗಿ ಚನ್ನಪಟ್ಟಣ ಕಾಂಗ್ರೆಸ್ ಮುಖಂಡ ರಘುನಂದನ್ ರಾಮಣ್ಣ ಅಧಿಕಾರ ಸ್ವೀಕಾರ ಸಮಯದಲ್ಲಿ ಸಂಸದ ಡಿ.ಕೆ.ಸುರೇಶ್ ಜತೆಗೆ ಕಾಣಿಸಿಕೊಂಡು ರಾಜಕೀಯ ವಲಯದಲ್ಲಿ ಚರ್ಚೆಗೆ ಎಡೆಮಾಡಿ ಕೊಟ್ಟಿದ್ದರು.
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ. ಸೇರ್ಪಡೆ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಕಾಂಗ್ರೆಸ್ ಸೇರಲು ತಂದೆಯ ಸಹಮತವಿದೆ ಎಂದರು.
ಚನ್ನಪಟ್ಟಣದಿಂದ ಸ್ಪರ್ಧಿಸಲು ಸಿದ್ಧ: ನಿಶಾ
ಕಾಂಗ್ರೆಸ್ನಿಂದ ಟಿಕೆಟ್ ಸಿಕ್ಕಿದರೆ ಚನ್ನಪಟ್ಟಣದಿಂದ ಸ್ಪರ್ಧಿಸಲು ಸಿದ್ಧ ಎಂದು ಹೇಳುವ ಮೂಲಕ ನಿಶಾ ಅವರು ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಹಾಲಿ ಶಾಸಕ ಎಚ್.ಡಿ.ಕುಮಾರಸ್ವಾಮಿ ಮಂಡ್ಯದಿಂದ ಲೋಕಸಭೆಗೆ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಅವರು ಪ್ರತಿನಿಧಿಸುತ್ತಿರುವ ಚನ್ನಪಟ್ಟಣದಲ್ಲಿ ಉಪಚುನಾವಣೆ ಸಾಧ್ಯತೆ ಹೆಚ್ಚಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಯೋಗೇಶ್ವರ್ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಅವರ ಪುತ್ರಿಯ ಕಾಂಗ್ರೆಸ್ ಸೇರ್ಪಡೆ ಹೇಳಿಕೆ ಸಾಕಷ್ಟು ಕುತೂಹಲ ಕೆರಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.