Bagalakote: ವೀಣಾ ಬದಲು ಸಂಯುಕ್ತಾಗೆ ಕೈ ಟಿಕೆಟ್… ರೊಚ್ಚಿಗೆದ್ದ ಕಾಶಪ್ಪನವರ ಬೆಂಬಲಿಗರು
ಗೋ ಬ್ಯಾಕ್ ಸಂಯುಕ್ತಾ ಎಂದು ಘೋಷಣೆ
Team Udayavani, Mar 20, 2024, 1:57 PM IST
ಬಾಗಲಕೋಟೆ : ಪ್ರಸ್ತುತ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ವೀಣಾ ಕಾಶಪ್ಪನವರ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪುವ ಭೀತಿ ಎದುರಾದ ಬೆನ್ನಲ್ಲೆ, ವೀಣಾ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಬುಧವಾರ ಏಕಾಏಕಿ ಕಾಂಗ್ರೆಸ್ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಲು ಮುಂದಾದರು.
ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕಾಶಪ್ಪನವರ ಬೆಂಬಲಿಗರನ್ನು ಪೊಲೀಸರು, ತಡೆದರು. ಈ ವೇಳೆ ಪೊಲೀಸರು ಮತ್ತು ಕಾಶಪ್ಪನವರ ಬೆಂಬಲಿಗರ ಮಧ್ಯೆ ವಾಗ್ವಾದವೂ ನಡೆಯಿತು.
ಗೋ ಬ್ಯಾಕ್ ಸಂಯುಕ್ತಾ :
ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ, ಕಳೆದ 2019ರ ಲೋಕಸಭೆ ಚುನಾವಣೆಯ ಅಭ್ಯರ್ಥಿಯೂ ಆಗಿದ್ದ ಜಿ.ಪಂ. ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ದಟ್ಟವಾಗಿವೆ. ವೀಣಾ ಬದಲು, ವಿಜಯಪುರ ಜಿಲ್ಲೆಯ ಸಚಿವ ಶಿವಾನಂದ ಪಾಟೀಲ ಅವರ ಪುತ್ರಿ ಸಂಯುಕ್ತಾ ಪಾಟೀಲ ಅವರಿಗೆ ಟಿಕೆಟ್ ಅಂತಿಮವಾಗಿದೆ ಎನ್ನಲಾಗಿದೆ. ಹೀಗಾಗಿ ತೀವ್ರ ಆಕ್ರೋಶಗೊಂಡಿರುವ ವೀಣಾ ಬೆಂಬಲಿಗರು, ಗೋ ಬ್ಯಾಕ್ ಸಂಯುಕ್ತಾ ಎಂಬ ಫಲಕ ಹಿಡಿದು ಪ್ರತಿಭಟನೆ ನಡೆಸಿದರು.
ಕಳೆದ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧೆ ಮಾಡಿದರೂ, 4.97 ಲಕ್ಷ ಮತ ಪಡೆದಿದ್ದರು. ಸೋತರೂ ಐದು ವರ್ಷಗಳಿಂದ ಕ್ಷೇತ್ರದಲ್ಲಿ ನಿರಂತರ ಪಕ್ಷ ಸಂಘಟನೆ, ಸಾಮಾಜಿಕ ಸೇವೆಯಲ್ಲಿ ತೊಡಗಿದ್ದಾರೆ. ಇಡೀ ಕ್ಷೇತ್ರದ ಜನರು ಅವರಿಗೆ ಟಿಕೆಟ್ ಕೊಡಬೇಕೆಂಬ ಒತ್ತಾಯ ಇದೆ. ಆದರೂ, ಟಿಕೆಟ್ ತಪ್ಪುತ್ತದೆ ಎಂದು ಸುದ್ದಿ ಹಬ್ಬಿದೆ. ಅವರಿಗೆ ಟಿಕೆಟ್ ತಪ್ಪಿದರೆ ನಾವು ಚುನಾವಣೆಯನ್ನೇ ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: Gas Cylinder: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ್ಯು… ನಾಲ್ವರಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ