D K Suresh ಮತ್ತೆ ಗ್ರಾಮಾಂತರದಿಂದ ಕಣಕ್ಕೆ; ಬಿಜೆಪಿಯಿಂದ ಮೂವರೊಳು ಯಾರು?


Team Udayavani, Mar 8, 2024, 9:08 PM IST

Dk Suresh

ಬೆಂಗಳೂರೂ: 2019 ರಲ್ಲಿ ರಾಜ್ಯದಿಂದ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಏಕೈಕ ಸಂಸದ ಡಿ.ಕೆ.ಸುರೇಶ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯಲಿದ್ದಾರೆ.

ಶುಕ್ರವಾರ ಬಿಡುಗಡೆಯಾದ ಮೊದಲ ಪಟ್ಟಿಯಲ್ಲೇ ಸುರೇಶ್ ಅವರ ಹೆಸರು ಘೋಷಿಸಲಾಗಿದೆ. ಬಿಜೆಪಿ ಈಗಾಗಲೇ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಕ್ಷೇತ್ರದಿಂದ ತನ್ನ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಎಲ್ಲ ಸಿದ್ದತೆ ನಡೆಸಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಮೂರು ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಶುಕ್ರವಾರ ಹೇಳಿಕೆ ನೀಡಿದ್ದಾರೆ. ನಮ್ಮಲ್ಲಿ ಪ್ರಬಲ ಅಭ್ಯರ್ಥಿ ಇದ್ದಾರೆ. ನಾವು ಮೂವರು ಅಭ್ಯರ್ಥಿಗಳನ್ನು ಶಿಫಾರಸು ಮಾಡಿದ್ದೇವೆ. ಅವರಲ್ಲಿ ಒಬ್ಬರು ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದಾರೆ. ನಮ್ಮ ಅಭ್ಯರ್ಥಿ ಅಚ್ಚರಿ ಮೂಡಿಸಲಿದ್ದಾರೆ ಎಂದು ಹೇಳಿದ್ದಾರೆ.

ಖ್ಯಾತ ಹೃದಯರೋಗ ತಜ್ಞ ಡಾ. ಸಿ. ಎನ್. ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನುವ ಕುರಿತು ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದ್ದು, ಈ ನಡುವೆ ಮಾಜಿ ಸಚಿವ , ವಿಧಾನ ಪರಿಷತ್ ಸದಸ್ಯರೂ ಆಗಿರುವ ಸಿ.ಪಿ. ಯೋಗೇಶ್ವರ್ ಅವರ ಹೆಸರೂ ಕೇಳಿ ಬರುತ್ತಿದೆ.

ಡಿ.ಕೆ.ಸುರೇಶ್ ಅವರಿಗೆ ಸೋಲಿನ ರುಚಿ ತೋರಿಸುವ ಮೂಲಕ ಕಾಂಗ್ರೆಸ್ ಪ್ರಭಾವಿ ನಾಯಕ ಎನಿಸಿಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಭಾರೀ ಶಾಕ್ ನೀಡುವ ಸಿದ್ದತೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಎಲ್ಲ ವೈಮನಸ್ಸು ಮರೆತು ರಣತಂತ್ರ ಹಣೆಯುತ್ತಿದೆ.

2019 ರಲ್ಲಿ ಡಿ.ಕೆ.ಸುರೇಶ್ ಅವರು ಜೆಡಿಎಸ್ ಮೈತ್ರಿಯ ಬಲದೊಂದಿಗೆ ಬಿಜೆಪಿ ಅಭ್ಯರ್ಥಿ ಅಶ್ವತ್ಥ ನಾರಾಯಣಗೌಡ ವಿರುದ್ಧ 2,06,870 ಮತಗಳ ಅಂತರದ ಗೆಲುವು ಸಾಧಿಸಿದ್ದರು.

ಲೋಕಸಭಾ ಕ್ಷೇತ್ರದ ವ್ಯಾಪಿಯಲ್ಲಿ ಜೆಡಿಎಸ್ ಮತಗಳು ಮತ್ತು ಒಕ್ಕಲಿಗರ ಪ್ರಾಬಲ್ಯವಿದೆ. ತುಮಕೂರಿನ ಕುಣಿಗಲ್ ಕೂಡ ಲೋಕಸಭಾ ಕ್ಷೇತ್ರಕ್ಕೆ ಸೇರಿದ್ದು ಹಾಲಿ ಕಾಂಗ್ರೆಸ್ ನ ಹೆಚ್.ಡಿ.ರಂಗನಾಥ್ ಶಾಸಕರಾಗಿದ್ದಾರೆ.ಇಲ್ಲಿ ತುಮಕೂರಿನ ಅಭ್ಯರ್ಥಿಯಾಗಿರುವ ಮುದ್ದಹನುಮೇಗೌಡರ ಪ್ರಬಾವವೂ ಇದೆ.  ಚನ್ನಪಟ್ಟಣದಲ್ಲಿ ಎಚ್. ಡಿ ಕುಮಾರಸ್ವಾಮಿ ಶಾಸಕರಾಗಿದ್ದು ಹಿಡಿತ ಹೊಂದಿದ್ದಾರೆ. ಬೆಂಗಳೂರು ನಗರ ವ್ಯಾಪ್ತಿಯ ರಾಜರಾಜೇಶ್ವರಿನಗರದಲ್ಲಿ ಮುನಿರತ್ನ ಮತ್ತು ಬೆಂಗಳೂರು ದಕ್ಷಿಣದಲ್ಲಿ ಎಂ. ಕೃಷ್ಣಪ್ಪ ಅವರು ಬಿಜೆಪಿ ಶಾಸಕರಾಗಿದ್ದಾರೆ. ಆನೇಕಲ್ ನಲ್ಲಿ ಬಿ. ಶಿವಣ್ಣ, ಮಾಗಡಿಯಲ್ಲಿ ಎಚ್.ಸಿ.ಬಾಲಕೃಷ್ಣ, ರಾಮನಗರ ಇಕ್ಬಾಲ್ ಹುಸೇನ್ ಮತ್ತು ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕರಾಗಿದ್ದು ಕಾಂಗ್ರೆಸ್ ಮತ ಬ್ಯಾಂಕ್ ಗಟ್ಟಿಯಾಗಿದೆ.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.