LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ
Team Udayavani, May 7, 2024, 9:14 AM IST
ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮೊದಲ ಮತವನ್ನು ಚಲಾಯಿಸಿದರು.
ಮತದಾನ ಎನ್ನುವುದು ಮತ ಮತ್ತು ದಾನ ಎನ್ನುವ ಎರಡು ಪದಗಳನ್ನು ಒಳಗೊಂಡಿದೆ. ದಾನ ಎನ್ನುವುದು ಯೋಗ್ಯರಿಗೆ ನೀಡುವಂತಹದು. ಆಮಿಷಕ್ಕೆ ಬಿದ್ದು ಅದನ್ನು ಮಾರಿಕೊಳ್ಳಬಾರದು. ಯಾರಿಗೆ ದಾನ ಮಾಡುತ್ತಿದ್ದೇವೆ ಮತ್ತು ಯಾಕೆ ಮಾಡುತ್ತಿದ್ದೇವೆ ಎನ್ನುವ ಬಗ್ಗೆ ಅರಿವಿರಬೇಕು. ಆ ದಾನಕ್ಕೆ ಅವರು ಯೋಗ್ಯರಾಗಿದ್ದಾರಾ ಎಂದು ಯೋಚನೆ ಮಾಡಬೇಕು. ಅಪಾತ್ರರಿಗೆ ದಾನ ಮಾಡಬಾರದೆನ್ನುವ ವಿಚಾರವೂ ನಮ್ಮಲ್ಲಿ ಜಾರಿಯಲ್ಲಿದೆ. ಮತದಾನ ಮಾಡುವ ಅವಕಾಶ ಐದು ವರ್ಷಗಳಿಗೆ ಒಮ್ಮೆ ಸಿಗುವಂತಹದು. ಅಂತಹ ಅವಕಾಶವನ್ನು ಕಳೆದುಕೊಳ್ಳಬಾರದು ಮತ್ತು ಅದರ ಸದುಪಯೋಗ ಪಡೆಯಬೇಕು. ಮತದಾನ ಮಾಡದೇ ಬಿಟ್ಟರೆ ನಿಮ್ಮ ಹಕ್ಕು ಬಿಟ್ಟುಕೊಟ್ಟ ಹಾಗೆ. ನಂತರ ಅದರ ಬಗ್ಗೆ ಮಾತನಾಡುವ ಹಕ್ಕನ್ನು ಕಳೆದುಕೊಳ್ಳುತ್ತೀರಿ. ಮತದಾನ ಮಾಡಿ ನಾಗರೀಕ ಹಕ್ಕು ಚಲಾಯಿಸಿ ಎಂದು ಸ್ವಾಮೀಜಿ ಮನವಿ ಮಾಡಿದರು.
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮತದಾನ ವೀಕ್ಷಣೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಅಣಕು ಮತದಾನ ಪ್ರಕ್ರಿಯೆ ನಂತರ ಮತದಾನ ಎಲ್ಲಾ ಕಡೆ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ
Hubballi: ನಮಗೆ ಆದ ಅನ್ಯಾಯ ಬೇರೆ ಯಾರಿಗೂ ಆಗಬಾರದು… ನಿರಂಜನ ಹಿರೇಮಠ ಹೇಳಿಕೆ
Shivamogga: ವಾಲ್ಮೀಕಿ ನಿಗಮದ ಮಂತ್ರಿಯನ್ನು ಕೂಡಲೇ ವಜಾಗೊಳಿಸಿ; ಕೆ.ಬಿ ಪ್ರಸನ್ನ ಆಗ್ರಹ
Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು
ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ
MUST WATCH
ಹೊಸ ಸೇರ್ಪಡೆ
Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ; ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ
KMC ಸಂತಾನೋತ್ಪತ್ತಿ ಔಷಧ,ಶಸ್ತ್ರಚಿಕಿತ್ಸೆ ವಿಭಾಗ: ಐವಿಎಫ್, ಫರ್ಟಿಲಿಟಿ ಕೇಂದ್ರಗಳಲ್ಲಿ ಒಂದು
Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್
Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು
ಅಪರಾಧ ಪ್ರಕರಣ ಬೇಧಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಪಾತ್ರ ಪ್ರಮುಖ: ಡಾ.ವಿನೋದ್ ನಾಯಕ