Shobha Karandlaje ವಿರುದ್ಧ ಡಿಎಂಕೆ ದೂರು:ತತ್ ಕ್ಷಣ ಕ್ರಮಕ್ಕೆ ಚುನಾವಣ ಆಯೋಗ ಆಗ್ರಹ
48 ಗಂಟೆಗಳ ಒಳಗೆ ಅನುಸರಣೆ ವರದಿ ಕೊಡಿ
Team Udayavani, Mar 20, 2024, 7:40 PM IST
ಬೆಂಗಳೂರು: ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಕುರಿತು ಡಿಎಂಕೆ ನೀಡಿರುವ ದೂರಿನ ಕುರಿತು ತತ್ ಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣ ಆಯೋಗವು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಬುಧವಾರ ಸೂಚಿಸಿದ್ದು, ಚುನಾವಣ ಸಮಿತಿಯು ಈ ವಿಷಯದ ಕುರಿತು 48 ಗಂಟೆಗಳ ಒಳಗೆ ಅನುಸರಣೆ ವರದಿಯನ್ನು ಕೇಳಿದೆ.
‘ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಐಇಡಿ ಸ್ಫೋಟದ ಕುರಿತು ತಮಿಳುನಾಡಿ ನಲ್ಲಿ ಟ್ರೈನಿಂಗ್ ಪಡೆದು ಬೆಂಗಳೂರಿಗೆ ಬಂದು ಬಾಂಬ್ ಇಡುತ್ತಾರೆ ಎಂದು ವಿವಾದಾತ್ಮಕ ಗಂಭೀರ ಆರೋಪ ಮಾಡಿದ್ದ ಶೋಭಾ ಕರಂದ್ಲಾಜೆ ಅವರ ವಿರುದ್ಧ ಡಿಎಂಕೆ ಕ್ರಮ ಕೈಗೊಳ್ಳುವಂತೆ ಕೋರಿತ್ತು. ಚುನಾವಣ ಆಯೋಗಕ್ಕೆ ನೀಡಿದ ದೂರಿನಲ್ಲಿ, ಸಚಿವರ ಹೇಳಿಕೆಯು ತಮಿಳುನಾಡಿನ ಜನರನ್ನು ‘ಉಗ್ರವಾದಿಗಳು’ ಎಂದು ಬಿಂಬಿಸಿದೆ ಎಂದು ಡಿಎಂಕೆ ಹೇಳಿತ್ತು.
ಬೆಂಗಳೂರಿನಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ’ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ತಮಿಳುನಾಡಿನಿಂದ ಬಂದವರು ಇಲ್ಲಿ ಬಾಂಬ್ಗಳನ್ನು ಹಾಕುತ್ತಾರೆ, ದೆಹಲಿಯ ಜನರು ‘ಪಾಕಿಸ್ಥಾನ್ ಜಿಂದಾಬಾದ್’ ಘೋಷಣೆಗಳನ್ನು ಕೂಗುತ್ತಾರೆ ಮತ್ತು ಕೇರಳದಿಂದ ಬರುವ ಜನರು ಆಸಿಡ್ ದಾಳಿಯಲ್ಲಿ ಭಾಗಿಯಾಗಿದ್ದಾರೆ’ ಎಂಬ ಹೇಳಿಕೆ ನೀಡಿದ್ದರು. ತೀವ್ರ ಆಕ್ರೋಶದ ಬಳಿಕ ಬಹಿರಂಗ ಕ್ಷಮೆ ಯಾಚಿಸಿದ್ದರು.
ಮಧುರೈ ಪೊಲೀಸರು “ದ್ವೇಷವನ್ನು ಉತ್ತೇಜಿಸಿದ” ಅಡಿಯಲ್ಲಿ ಶೋಭಾ ಅವರ ಹೇಳಿಕೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ