DMK ಪದೇ ಪದೆ ಸನಾತನ ಟೀಕೆ ಜನರ ಭಾವನೆಗೆ ಧಕ್ಕೆ: ಅಮಿತ್ ಶಾ
Team Udayavani, Apr 14, 2024, 12:54 AM IST
ಚೆನ್ನೈ: ಸನಾತನ ಧರ್ಮವನ್ನು ಪದೇ ಪದೆ ಟೀಕಿಸುವ ಮೂಲಕ ಡಿಎಂಕೆ ನಾಯಕರು ಜನರ ಭಾವನೆಗಳಿಗೆ ನೋವುಂಟು ಮಾಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿಕಾರಿದ್ದಾರೆ.
ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಶನಿವಾರ ರೋಡ್ಶೋ ನಡೆಸಿದ ಅನಂತರ ಮಾತನಾಡಿದ ಅಮಿತ್ ಶಾ, “ಅಯೋಧ್ಯೆಯ ರಾಮಮಂದಿರ ಲೋಕಾರ್ಪಣೆ ಸೇರಿದಂತೆ ಹಲವು ಸಂದರ್ಭಗಳಲ್ಲಿ ಸನಾತನ ಧರ್ಮದ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಡಿಎಂಕೆಯವರು ಒಂದೆಡೆಯಾದರೆ, ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಸರ್ವರನ್ನೂ ಸಮಾನವಾಗಿ ಗೌರವಿಸುವ ಬಿಜೆಪಿ ಮತ್ತೂಂದೆಡೆಯಿದೆ. ಇವೆರಡರಲ್ಲಿ ನಿಮಗೆ ಯಾವುದು ಬೇಕು ಎಂದು ನಿರ್ಧರಿಸಿ, ಚುನಾವಣೆಯಲ್ಲಿ ದ್ರಾವಿಡ ಪಕ್ಷ ಡಿಎಂಕೆಯನ್ನು ಸೋಲಿಸಿ’ ಎಂದು ಮತದಾರರಿಗೆ ಕರೆ ನೀಡಿದ್ದಾರೆ.
ಡಿಎಂಕೆ ಮತ್ತು ಎಐಎಡಿಎಂಕೆಗಳು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದು, ತಮಿಳುನಾಡು ಅಪಾಯದಲ್ಲಿದೆ. ತಮಿಳು ಸಂಸ್ಕೃತಿ ಮತ್ತು ಭಾಷೆ ರಕ್ಷಣೆಗೆ ಹಾಗೂ ಅಭಿವೃದ್ಧಿಗೆ ಪ್ರಧಾನಿ ಮೋದಿ ಟೊಂಕ ಕಟ್ಟಿದ್ದು, ಬಿಜೆಪಿಗೆ ಮತ ನೀಡುವ ಮೂಲಕ ಭ್ರಷ್ಟ ಪಕ್ಷಗಳಿಂದ ತಮಿಳುನಾಡನ್ನು ಮುಕ್ತಗೊಳಿಸಿ ಎಂದರು.
ಮೀಸಲಾತಿ ರದ್ದು ಮಾಡಲ್ಲ
ಯಾವುದೇ ಕಾರಣಕ್ಕೂ ಬಿಜೆಪಿ ಸರಕಾರ ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ. ಅಷ್ಟೇ ಏಕೆ, ಮೀಸಲು ರದ್ದು ಮಾಡಲು ಇತರರಿಗೂ ಕೂಡ ಬಿಡಲ್ಲ ಎಂದು ಅಮಿತ್ ಶಾ ಗುಡುಗಿದ್ದಾರೆ. ಶನಿವಾರ ರಾಜಸ್ಥಾನದ ಅಳ್ವಾರ್ನಲ್ಲಿ ಮಾತನಾಡಿ, ಅಧಿಕಾರದಲ್ಲಿದ್ದಾಗ ಹಿಂದುಳಿದವರ ಏಳ್ಗೆಗೆ ಕೆಲಸ ಮಾಡದ ಕಾಂಗ್ರೆಸಿಗರು “ಬಿಜೆಪಿ ಸರಕಾರ ಮೀಸಲು ರದ್ದುಪಡಿಸಲಿದೆ’ ಎಂದು ದಲಿತ ಹಾಗೂ ಹಿಂದುಳಿದ ವರ್ಗಗಳ ಸಹೋದರರ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
MUST WATCH
ಹೊಸ ಸೇರ್ಪಡೆ
T20 World Cup: ಇಂದು ಭಾರತ ತಂಡ ಪ್ರಕಟ?
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್