Pakistan ತಾಕತ್ತೇನೆಂದು ಖುದ್ದು ಪರೀಕ್ಷಿಸಿ ಬಂದಿರುವೆ:ಮೋದಿ!

ನಾನಿದ್ದಿದ್ದರೆ ಕರ್ತಾರ್ಪುರ ಎಂದೋ ವಶಕ್ಕೆ

Team Udayavani, May 24, 2024, 6:55 AM IST

1-rrewrwe

ಹೊಸದಿಲ್ಲಿ: “ಪಾಕಿಸ್ಥಾನದ ತಾಕತ್ತು ಏನೆಂದು ನಾನೇ ಖುದ್ದು ಲಾಹೋರ್‌ಗೆ ಹೋಗಿ ಪರೀಕ್ಷಿಸಿ ಬಂದಿದ್ದೇನೆ. ಆ ದೇಶದ ಬಂಡವಾಳ ಆಗಲೇ ಬಯಲಾಗಿದೆ’!”ಪಾಕಿಸ್ಥಾನದ ಬಳಿ ಅಣು ಬಾಂಬ್‌ ಇದೆ. ಹೀಗಾಗಿ ಅವರನ್ನು ಭಾರತ ಗೌರವಿಸಬೇಕು’ ಎಂಬ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ ಅವರ ಹೇಳಿಕೆಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ ರೀತಿಯಿದು.

ಗುರುವಾರ ಸಂದರ್ಶನವೊಂದರಲ್ಲಿ ಮಾತನಾಡಿದ ಮೋದಿ, 2015ರ ತಮ್ಮ ಪಾಕ್‌ ಭೇಟಿ ಬಗ್ಗೆ ಪ್ರಸ್ತಾವಿಸುತ್ತಾ, “ನಾನು ಅಂದು ಪಾಕ್‌ಗೆ ಹೋದಾಗ ಅನೇಕ ಪತ್ರಕರ್ತರು ನನ್ನನ್ನು, “ಹೇ ವೀಸಾ ಇಲ್ಲದೇ ನೀವು ಬಂದುಬಿಟ್ಟಿರಾ’ ಎಂದು ಪ್ರಶ್ನಿಸಿದ್ದರು. ಆಗ ನಾನು, ಒಂದು ಕಾಲದಲ್ಲಿ ಇದು ನನ್ನ ದೇಶವೂ ಆಗಿತ್ತು ಎಂದೆ. ಆ ದೇಶದ ತಾಕತ್ತು ಮತ್ತು ಬಂಡವಾಳವೇನೆಂದು ನನಗೆ ಆಗಲೇ ಗೊತ್ತಾಗಿದೆ’ ಎಂದು ಹೇಳಿದ್ದಾರೆ.

ವಿದೇಶಾಂಗ ನೀತಿಯ ವಿಚಾರದಲ್ಲಿ ವಿಪಕ್ಷಗಳು ನನ್ನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದವು. ಆದರೆ ನಾನು ನನ್ನ ಅವಧಿಯಲ್ಲಿ ಜಾಗತಿಕ ನಾಯಕರೊಂದಿಗೆ ಔಪಚಾರಿಕ ಸಂಬಂಧ ಮಾತ್ರವಲ್ಲದೇ ಅನೌಪಚಾರಿಕ ಬಾಂಧವ್ಯವನ್ನೂ ಬೆಳೆಸಿಕೊಂಡೆ ಎಂದಿದ್ದಾರೆ. ಅಲ್ಲದೇ 370ನೇ ವಿಧಿ ರದ್ದು, ಮುಸ್ಲಿಂ ಮೀಸಲಾತಿ ಸೇರಿ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ನಾನಿದ್ದಿದ್ದರೆ ಕರ್ತಾರ್ಪುರ ಎಂದೋ ವಶಕ್ಕೆ: ಮೋದಿ
70 ವರ್ಷಗಳ ಕಾಲ ನಾವು ಕರ್ತಾರ್ಪುರ ಸಾಹಿಬ್‌ ಅನ್ನು ಬೈನಾಕ್ಯುಲರ್‌ನಲ್ಲಿ ನೋಡಬೇಕಾಗಿತ್ತು. ನಾನೇನಾದರೂ ಅಂದು ಪ್ರಧಾನಿ ಆಗಿರುತ್ತಿದ್ದರೆ, ಆ ಸೈನಿಕರ ಹಸ್ತಾಂತರದ ಬದಲಿಗೆ ಕರ್ತಾರ್ಪುರ ಸಾಹಿಬ್‌ ಅನ್ನು ವಾಪಸ್‌ ಪಡೆಯುತ್ತಿದ್ದೆ ಎಂದಿದ್ದಾರೆ.

“ಕೈ’ ಗೆದ್ದರೆ ರಾಮ್‌ ರಾಮ್‌ ಹೇಳುವವರು ಜೈಲಿಗೆ: ಪಿಎಂ
ಹರಿಯಾಣದ ಜನ ಪ್ರತೀ10 ಹೆಜ್ಜೆಗೆ ಒಮ್ಮೆ ರಾಮ್‌ ರಾಮ್‌ ಎನ್ನುತ್ತಾರೆ. ಕಾಂಗ್ರೆಸ್‌ ಅಧಿಕಾರಕ್ಕೇರಿದರೆ ರಾಮ್‌ ರಾಮ್‌ ಎನ್ನುವ ಎಲ್ಲರನ್ನೂ ಜೈಲಿಗಟ್ಟುತ್ತದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಆ ಪಕ್ಷವು ಭಾರತವನ್ನು ವಿಭಜಿಸಿ, ತನ್ನ ವೋಟ್‌ಬ್ಯಾಂಕ್‌ ಅನ್ನು ಓಲೈಸಲು ಈಗಾಗಲೇ ಎರಡು ಮುಸ್ಲಿಂ ದೇಶಗಳನ್ನು ಸೃಷ್ಟಿಸಿದೆ ಎಂದೂ ಮೋದಿ ಹೇಳಿದ್ದಾರೆ.

“ಹಸು ಹಾಲು ಕೊಡೋ ಮೊದಲೇ ತುಪ್ಪಕ್ಕೆ ಜಗಳ’
ಒಂದು ಕಡೆ ನಿಮ್ಮ ಸೇವಕ ಮೋದಿ ಇದ್ದರೆ, ಮತ್ತೂಂದೆಡೆ ಕೋಮುವಾದಿ ಇಂಡಿಯಾ ಕೂಟವಿದೆ. ನೀವೇ ಆಯ್ಕೆ ಮಾಡಿ. ಹಸು ಹಾಲು ಕೊಡುವ ಮುನ್ನವೇ ತುಪ್ಪಕ್ಕೆ ಜಗಳ ನಡೆದಂತೆ, ಇಂಡಿಯಾ ಕೂಟನ ದಲ್ಲಿ ಪ್ರಧಾನಿ ಹುದ್ದೆ ಜಗಳ ಆರಂಭವಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

Mandarthi: ಮಳೆಗಾಲದ ಯಕ್ಷಗಾನ

Mandarthi: ಜೂ.18 ರಂದು ಮಳೆಗಾಲದ ಯಕ್ಷಗಾನ ಸೇವೆ ಆಟಕ್ಕೆ ಚಾಲನೆ

ರಾಮನಗರ: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

Ramanagara: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

1-sadsdad

Delhi ನೀರಿಗಾಗಿ ಕೋಲಾಹಲ: ಮಡಕೆಗಳಿಂದಲೇ ಜಲಮಂಡಳಿ ಕಚೇರಿ ಧ್ವಂಸ

police crime

Thane; ವಧೆಗಾಗಿ ತಂದ ಮೇಕೆಯ ಮೇಲೆ ದೇವರ ಹೆಸರು: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

Mandarthi: ಮಳೆಗಾಲದ ಯಕ್ಷಗಾನ

Mandarthi: ಜೂ.18 ರಂದು ಮಳೆಗಾಲದ ಯಕ್ಷಗಾನ ಸೇವೆ ಆಟಕ್ಕೆ ಚಾಲನೆ

ರಾಮನಗರ: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

Ramanagara: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.