Mandya; ರಾಜಕಾರಣ ಮಾಡುವುದಾದರೆ ಅದು ಮಂಡ್ಯದಿಂದಲೇ: ಸಂಸದೆ ಸುಮಲತಾ
ಇನ್ನೂ ಯಾವುದೂ ಅಂತಿಮವಾಗಿಲ್ಲ...
Team Udayavani, Mar 21, 2024, 6:10 AM IST
ಬೆಂಗಳೂರು: ಅತ್ತ ಮಂಡ್ಯದಿಂದ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಸಿಎಂ ಕುಮಾರ ಸ್ವಾಮಿ ಘೋಷಿಸಿದ್ದರೆ, ಇತ್ತ ಹಾಲಿ ಸಂಸದೆ ಸುಮಲತಾ ಅವರೂ ಪಟ್ಟು ಸಡಿಲಿಸಲು ಒಲ್ಲೆ ಎಂದಿದ್ದಾರೆ.
ದೆಹಲಿಗೆ ತೆರಳಿದ್ದ ಕುಮಾರ ಸ್ವಾಮಿ, ಅಮಿತ್ ಶಾ ಅವರನ್ನು ಭೇಟಿ ಮಾಡಿ ಬಂದಿದ್ದರು. ಹಾಸನ, ಮಂಡ್ಯ, ಕೋಲಾರದಿಂದ ಜೆಡಿ ಎಸ್ ಸ್ಪರ್ಧೆಯನ್ನು ಖಚಿತ ಪಡಿಸಿ ಚಿಕಿತ್ಸೆಗೆಂದು ಚೆನ್ನೈಗೆ ತೆರಳಿದ್ದಾರೆ. ಈ ಮಧ್ಯೆ 3 ದಿನಗಳಿಂದ ದೆಹಲಿಯಲ್ಲೇ ಬೀಡು ಬಿಟ್ಟಿದ್ದ ಸುಮಲತಾ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದರಲ್ಲದೆ, ಬುಧವಾರ ಬೆಂಗಳೂರಿಗೆ ಮರಳಿದ್ದು ನಾನು ರಾಜಕಾರಣ ಮಾಡುವುದಾದರೆ ಅದು ಮಂಡ್ಯದಿಂದಲೇ ಎನ್ನುವ ಮೂಲಕ ಪಟ್ಟನ್ನು ಬಿಗಿಗೊಳಿಸಿದ್ದಾರೆ.
ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಅವರೊಂದಿಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ಬೇರೆಯವರು ಸಾಕಷ್ಟು ಸಲಹೆ ಕೊಟ್ಟಿ ದ್ದಾರೆ. ಅನೇಕ ಪ್ರಸ್ತಾಪ ಮುಂದಿಟ್ಟಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನೇ ಬೇಡ ಎಂದವಳು ನಾನು. ಇನ್ನು ಚಿಕ್ಕಬಳ್ಳಾಪುರಕ್ಕೆ ಏಕೆ ಹೋಗಲಿ? ನಾನೇನಿದ್ದರೂ ರಾಜಕಾರಣ ಮಾಡುವುದಾದರೆ ಮಂಡ್ಯ ದಿಂದಲೇ. ಈಗಲೂ ಅದನ್ನೇ ಹೇಳಿ ಬಂದಿದ್ದೇನೆ. ಅವರೂ ಸಕಾರಾತ್ಮಕವಾಗಿದ್ದಾರೆ ಎನ್ನುವ ಮೂಲಕ ಮತ್ತಷ್ಟು ಕುತೂಹಲ ಹುಟ್ಟು ಹಾಕಿದ್ದಾರೆ.
ಪ್ರಧಾನಿ ನರೇಂದ್ರ ಅವರು ಬಿಡುವಿಲ್ಲದ ಸಂದರ್ಭದಲ್ಲಿಯೂ ಕರೆ ಮಾಡಿ ನನ್ನೊಂದಿಗೆ ಮಾತನಾಡಲು ಹೇಳಿದ್ದಾರೆ. ಅದಕ್ಕಾಗಿಯೇ ನನ್ನನ್ನು ಕರೆಯಿಸಿಕೊಂಡಿದ್ದಾಗಿ ನಡ್ಡಾ ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ ನಮಗೆ ನಿಮ್ಮಂತಹ ನಾಯಕರ ಆವಶ್ಯಕತೆ ಇದೆ ಎಂದಿದ್ದಾರೆ. ಆದರೆ ಇನ್ನೂ ಯಾವುದೂ ಅಂತಿಮವಾಗಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್