Mandi; ‘ಕ್ವೀನ್’ ಕಂಗನಾ ವಿರುದ್ಧ ‘ರಾಜಾ’ ವಿಕ್ರಮಾದಿತ್ಯ ಕಣಕ್ಕಿಳಿಯುವ ಸಾಧ್ಯತೆ
ನಾನು ಸ್ಪರ್ಧಿಸಿದರೆ ಮಂಡಿಗೆ ಮಾತ್ರ ಸೀಮಿತವಾಗಬೇಕಾಗುತ್ತದೆ ಎಂದ ಸಂಸದೆ ಪ್ರತಿಭಾ
Team Udayavani, Apr 8, 2024, 5:33 PM IST
ಮಂಡಿ: ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ಗೆ ಕಠಿಣ ಸವಾಲನ್ನು ನೀಡಲು ಮಂಡಿ ಲೋಕಸಭಾ ಕ್ಷೇತ್ರದಿಂದ ವಿಕ್ರಮಾದಿತ್ಯ ಸಿಂಗ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಬಯಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಹಿಮಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಹಾಲಿ ಮಂಡಿ ಸಂಸದೆ ಪ್ರತಿಭಾ ಸಿಂಗ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ರಾಜ್ಯ ಕಾಂಗ್ರೆಸ್ ಅಧ್ಯಕ್ಷೆಯಾಗಿ ನಾನು ಇಡೀ ರಾಜ್ಯದಲ್ಲಿ ಕೆಲಸ ಮಾಡಲು ಬಯಸುತ್ತೇನೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಮಂಡಿ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಬೇಕಾಗುತ್ತದೆ. ವಿಕ್ರಮಾದಿತ್ಯ ಸಿಂಗ್ ಯುವ ನಾಯಕ, ಯುವಕರೊಂದಿಗೆ ಉತ್ತಮ ಸಂಪರ್ಕ ಹೊಂದಿರುವವರು ಎಂಬುದು ಪಕ್ಷದ ಹಿರಿಯ ನಾಯಕರ ಸಲಹೆಯಾಗಿತ್ತು.ಇದನ್ನು ಪಕ್ಷದ ಹೈಕಮಾಂಡ್ ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ಅದರ ಬಗ್ಗೆ ನಿರ್ಧಾರವನ್ನು ಅವರು ಮಾಡಲಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ.
ಕಂಗನಾ ರಣಾವತ್ ಉಮೇದುವಾರಿಕೆ ಕುರಿತು ಪ್ರತಿಕ್ರಿಯಿಸಿದ ಪ್ರತಿಭಾ ಸಿಂಗ್ “ಅವರು ಏನು ತಿನ್ನುತ್ತಾರೆ ಎನ್ನುವುದು ಸೇರಿ ವೈಯಕ್ತಿಕ ಜೀವನದ ಬಗ್ಗೆ ನಾವು ಪ್ರತಿಕ್ರಿಯಿಸುವ ಅಗತ್ಯವಿಲ್ಲ. ನಾವು ಅಭಿವೃದ್ಧಿಗಾಗಿ ಕೆಲಸ ಮಾಡಬೇಕು. ನಾವು ಖಂಡಿತವಾಗಿಯೂ ಅಭಿವೃದ್ಧಿ ಮಾಡುತ್ತೇವೆ. ಸಮಸ್ಯೆಗಳ ಮೇಲೆ ಹೋರಾಡಿ ಈ ಸ್ಥಾನವನ್ನು ಗೆಲ್ಲಬೇಕು. ನಿಮ್ಮ ಶತ್ರುವನ್ನು ದುರ್ಬಲ ಎಂದು ನೀವು ಎಂದಿಗೂ ಭಾವಿಸಬಾರದು. ಇದು ರಾಜಕೀಯ ಮುಖಾಮುಖಿಯಾಗಿದೆ ಮತ್ತು ಜನರು ತಮ್ಮ ಸಂಸದರನ್ನು ಆಯ್ಕೆ ಮಾಡುತ್ತಾರೆ” ಎಂದರು.
ಹಿಮಾಚಲ ಪ್ರದೇಶದ ಪಿಡಬ್ಲ್ಯೂಡಿ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು ಪ್ರತಿಭಾ ಸಿಂಗ್ ಅವರ ಪುತ್ರ. ಭಾನುವಾರ ದೆಹಲಿಯಲ್ಲಿ ಕಾಂಗ್ರೆಸ್ ಸೋನಿಯಾ ಗಾಂಧಿ ಅವರನ್ನು ಭೇಟಿಯಾದುದು ಊಹಾಪೋಹಗಳಿಗೆ ಕಾರಣವಾಗಿದೆ.
ಹಿಮಾಚಲ ಪ್ರದೇಶದ ಅತ್ಯಂತ ಪ್ರಭಾವಿ ಮನೆತನದ ರಾಜಕಾರಣಿ, 6 ಅವಧಿಗೆ ಮತ್ತು 21 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ದಿವಂಗತ ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್ ತನ್ನದೇ ಆದ ಹಿಡಿತ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Constitution ಬದಲಿಸಲು ಕಾಂಗ್ರೆಸ್ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ
PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್ ನಕಾರ
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು