LS Election; 544 ಸ್ಥಾನಗಳ ಘೋಷಣೆ ಏಕೆ? : ಗೊಂದಲಕ್ಕೆ ಕಾರಣ

ಕರ್ನಾಟಕ ಸೇರಿ 13 ರಾಜ್ಯಗಳ ಒಟ್ಟು 26 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ

Team Udayavani, Mar 17, 2024, 6:40 AM IST

1-asdasdasd

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಜತೆ ಜತೆಗೆ ಕರ್ನಾಟಕ ಸೇರಿದಂತೆ 13 ರಾಜ್ಯಗಳ 26 ವಿಧಾನಸಭೆ ಕ್ಷೇತ್ರಗಳಿಗೆ ಚುನಾ ವಣೆಯನ್ನು ಘೋಷಣೆ ಮಾಡಲಾಗಿದೆ. ಎ.19ರಂದು ತ್ರಿಪುರಾದ 1, ಎ. 26ಕ್ಕೆ ರಾಜಸ್ಥಾನ, ಮಹಾರಾಷ್ಟ್ರದ ತಲಾ 1, ಮೇ 7ರಂದು ಗುಜರಾತ್‌ನ 5, ಕರ್ನಾಟಕದ 1, ಮೇ 13ಕ್ಕೆ ಉತ್ತರ ಪ್ರದೇಶ ಹಾಗೂ ಆಂಧ್ರದ ತಲಾ 1, ಮೇ 25ಕ್ಕೆ ಹರಿಯಾಣದ 1, ಉತ್ತರ ಪ್ರದೇಶದ 1, ಜೂ.1ರಂದು ಹಿಮಾಚಲ ಪ್ರದೇಶದ 6, ಬಿಹಾರದ 1, ಉತ್ತರ ಪ್ರದೇಶದ 1, ಪಶ್ಚಿಮ ಬಂಗಾಲದ 1 ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

544 ಸ್ಥಾನಗಳ ಘೋಷಣೆ ಏಕೆ?
ಲೋಕಸಭೆಯಲ್ಲಿ 543 ಸ್ಥಾನಗಳಿದ್ದರೂ ಸಹ 544 ಸ್ಥಾನಗಳಿಗೆ ಕೇಂದ್ರ ಚುನಾವಣ ಆಯೋಗ ಚುನಾವಣೆ ಘೋಷಣೆ ಮಾಡಿರುವುದು ಗೊಂದಲಕ್ಕೆ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ ಮಣಿಪುರದಲ್ಲಿ ಸಾಕಷ್ಟು ಹಿಂಸಾಚಾರ ನಡೆದಿದ್ದ ಕಾರಣ, ಇಲ್ಲಿನ 1 ಲೋಕಸಭೆ ಕ್ಷೇತ್ರದಲ್ಲಿ 2 ಬಾರಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಒಂದೇ ಕ್ಷೇತ್ರದಲ್ಲಿ 2 ಬಾರಿ ಚುನಾವಣೆ ನಡೆಯುವುದರಿಂದ ಅಂಕಿಗಳ ಆಧಾರದಲ್ಲಿ 1 ಸ್ಥಾನ ಹೆಚ್ಚಾಗಿದೆ. ಯಾವುದೇ ಹೆಚ್ಚುವರಿ ಸ್ಥಾನಗಳು ಸೇರ್ಪಡೆಯಾಗಿಲ್ಲ ಎಂದು ರಾಜೀವ್‌ ಕುಮಾರ್‌ ತಿಳಿಸಿದ್ದಾರೆ.

ಜಾಲತಾಣಕ್ಕೂ ನಿರ್ಬಂಧ

ಚುನಾವಣೆಯ ಸಮಯದಲ್ಲಿ ಸಾಮಾ­ಜಿಕ ಜಾಲತಾಣವನ್ನು ದುರ್ಬಳಕೆ ಮಾಡಿ­ಕೊಳ್ಳ­ಬಹುದು ಎಂಬ ಕಾರಣಕ್ಕೆ ಈ ಹಲವು ಮಿತಿಗಳನ್ನು ವಿಧಿಸ­ಲಾಗಿದೆ. ಜಿಲ್ಲೆಗಳ ಸೈಬರ್‌ ಸೆಲ್‌ಗ‌ಳು ಜಾಲತಾಣ­ಗಳ ಮೇಲೆ ಕಣ್ಣಿಟ್ಟಿ­ರಲಿವೆ ಎಂದು ತಿಳಿಸಿದೆ.

ಫ್ಲೈಯಿಂಗ್‌ ಸ್ಕ್ವಾಡ್‌
ಚುನಾವಣೆ ಘೋಷಣೆ­ಬೆನ್ನಲ್ಲೇ ಮಾದರಿ ನೀತಿ ಸಂಹಿತೆ ಜಾರಿ­ಯಾಗಿದೆ. ಉಲ್ಲಂ ಸುವವರ ವಿರುದ್ಧ ಆಯೋಗ ಕಠಿನ ಕ್ರಮ ಕೈಗೊಳ್ಳಲಿದೆ. ಚುನಾವಣೆ ಪ್ರಚಾರಗಳು, ವೆಚ್ಚ, ಅಕ್ರಮ ಶಸ್ತ್ರಾಸ್ತ್ರ ಸಾಗಣೆ, ಮದ್ಯ ಸಾಗಣೆ ಮೇಲೆ ಕಣ್ಣಿಡಲು ಫ್ಲೈಯಿಂಗ್‌ ಸ್ಕ್ವಾಡ್‌ ನಿಯೋಜಿಸಲಾಗಿದೆ.

ಮನೆಯಿಂದ ಮತದಾನ
85 ವರ್ಷ ಮೇಲ್ಪಟ್ಟವರು ಹಾಗೂ ಶೇ.40ರಷ್ಟು ವಿಕಲತೆ ಹೊಂದಿರುವವರಿಗೆ ಇದೇ ಮೊದಲ ಬಾರಿ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸ­ಲಾಗಿದೆ. ಈವರೆಗೆ ಸುಮಾರು 81 ಲಕ್ಷ ಹಿರಿಯ ನಾಗರಿಕರು ನೋಂದಾಯಿಸಿ­ಕೊಂಡಿದ್ದಾರೆ.

ವೈಯಕ್ತಿಕ ದಾಳಿ ಬೇಡ
ಪ್ರಚಾರದ ವೇಳೆ ವೈಯಕ್ತಿಕ ದಾಳಿ, ಕೆಟ್ಟ ಭಾಷೆ ಬಳಕೆ ಮಾಡದಂತೆ ರಾಜಕೀಯ ಪಕ್ಷಗಳ ನಾಯಕರಿಗೆ ಆಯೋಗ ಸೂಚಿಸಿದೆ. ಇದು ಡಿಜಿಟಲ್‌ ಯುಗ. ನೀವು ಏನೇ ಹೇಳಿದರೂ, ಅದು ಸಾವಿರಾರು ವರ್ಷಗಳ ಕಾಲ ದಾಖಲೆಯಾಗಿ ಉಳಿಯುತ್ತದೆ. ಕೆಟ್ಟ ಪದಗಳು ಬೇಡ. ಚುನಾವಣೆ ವೇಳೆ ಸಭ್ಯತೆ, ಘನತೆಯಿಂದ ವರ್ತಿಸಿ ಎಂದೂ ಹೇಳಿದೆ.

4 ರಾಜ್ಯಗಳಲ್ಲಿ ರಂಗೇರಿದ “ವಿಧಾನ’ ಕಣ
ಆಂಧ್ರಪ್ರದೇಶ, ಅರುಣಾಚಲ, ಸಿಕ್ಕಿಂ, ಒಡಿಶಾದಲ್ಲಿ ಅಸೆಂಬ್ಲಿ ಚುನಾವಣೆ
2024ರ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯ ನಡುವೆಯೇ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಒಡಿಶಾಗಳ ವಿಧಾನಸಭೆ ಚುನಾವಣೆಗಳಿಗೂ ದಿನಾಂಕ ಘೋಷಣೆ ಮಾಡಲಾಗಿದೆ. ಚುನಾವಣೆಯ ಹೊಸ್ತಿಲಲ್ಲಿರುವ ಈ 4 ರಾಜ್ಯಗಳ ಕುರಿತಾದ ಕಿರು ಮಾಹಿತಿ ಇಲ್ಲಿದೆ.

ಆಂಧ್ರಪ್ರದೇಶ
ಚುನಾವಣೆ ಘೋಷಣೆಯಾಗುವ ಮೊದಲೇ ಭಾರೀ ರಂಗೇರಿದ್ದ ಆಂಧ್ರಪ್ರದೇಶದ 175 ಕ್ಷೇತ್ರಗಳಿಗೆ ಮೇ 13ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯ ಲಿದೆ. ಪ್ರಸ್ತುತ ವೈಎಸ್‌ಆರ್‌ ಕಾಂಗ್ರೆಸ್‌ ಅಧಿಕಾರದಲ್ಲಿದ್ದು, ಜಗನ್‌ಮೋಹನ್‌ ರೆಡ್ಡಿ ಮುಖ್ಯಮಂತ್ರಿ­ಯಾಗಿದ್ದಾರೆ. ರಾಜ್ಯದ ಪ್ರಮುಖ ವಿಪಕ್ಷವಾಗಿರುವ ಟಿಡಿಪಿ ಹಾಗೂ ವೈಎಸ್‌ಆರ್‌ ಕಾಂಗ್ರೆಸ್‌ ಭರ್ಜರಿ ಯಾಗಿ ಈಗಾಗಲೇ ಪ್ರಚಾರ ಆರಂಭಿಸಿವೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಟಿಡಿಪಿ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿವೆ. ಹೀಗಾಗಿ ರಾಜ್ಯ ಚುನಾವಣ ಕಣ ಮತ್ತಷ್ಟು ರಂಗೇರಿದೆ. ಕಳೆದ ಚುನಾವಣೆಯಲ್ಲಿ 151 ಸ್ಥಾನಗಳಲ್ಲಿ ಗೆದ್ದಿದ್ದ ಜಗನ್‌ ಈ ಸ್ಥಾನಗಳನ್ನು ಉಳಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಅರುಣಾಚಲ ಪ್ರದೇಶ
ಅರುಣಾಚಲ ಪ್ರದೇಶದ 60 ಸ್ಥಾನಗಳಿಗೆ ಎ.19ಕ್ಕೆ ಚುನಾವಣೆ ನಡೆಯಲಿದ್ದು, ಜೂ.4­ರಂದು ಫ‌ಲಿತಾಂಶ ಪ್ರಕಟವಾಗಲಿದೆ. ಪ್ರಸ್ತುತ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಪೆಮಾ ಖಂಡು ಮುಖ್ಯಮಂತ್ರಿಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಕೇವಲ 4 ಸ್ಥಾನಗಳನ್ನು ಮಾತ್ರ ಗೆದ್ದಿದ್ದ ಕಾಂಗ್ರೆಸ್‌ ಇಂಡಿಯಾ ಮೈತ್ರಿಕೂಟ ಕಟ್ಟಿಕೊಂಡು ಈ ಬಾರಿ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ ಹೊಂದಿತ್ತು. ಆದರೆ ಕಳೆದ ಬಾರಿ 7 ಸ್ಥಾನಗಳನ್ನು ಗೆದ್ದಿದ್ದ ಜೆಡಿಯು ಇದೀಗ ಬಿಜೆಪಿ ಜತೆ ಸೇರ್ಪಡೆಯಾಗಿರುವುದು ಈಶಾನ್ಯ ರಾಜ್ಯದಲ್ಲಿ ಅಧಿ ಕಾರಕ್ಕೇರುವ ಕಾಂಗ್ರೆಸ್‌ ಆಸೆ ಹಾಗೆಯೇ ಉಳಿದುಕೊ ಳ್ಳಲಿದೆ ಎಂಬ ವಿಶ್ಲೇಷಣೆಗಳು ಕೇಳಿಬಂದಿವೆ.

ಸಿಕ್ಕಿಂ
ಸಿಕ್ಕಿಂನ 32 ವಿಧಾನಸಭಾ ಸ್ಥಾನಗಳಿಗೆ ಎ.19ರಂದು ಚುನಾ­ವಣೆ ನಡೆಯಲಿದೆ. ಪ್ರಸ್ತುತ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಪಕ್ಷದ ನೇತೃತ್ವದ ಸರಕಾರ ಅಧಿಕಾರದ­ಲ್ಲಿದ್ದು, ಪ್ರೇಮ್‌ಸಿಂಗ್‌ ತಮಂಗ್‌ ಮುಖ್ಯಮಂತ್ರಿ ಯಾಗಿದ್ದಾರೆ. ಸಿಕ್ಕಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳು ರಾಜಕೀಯವಾಗಿ ಸಾಕಷ್ಟು ಪ್ರಬಲವಾಗಿದ್ದು, ಮತ್ತೂಮ್ಮೆ ಆಡಳಿತದಲ್ಲಿರುವ ಎಸ್‌ಕೆಎಂ ಅಥವಾ ವಿಪಕ್ಷದಲ್ಲಿರುವ ಸಿಕ್ಕಿಂ ಡೆಮಾಕ್ರಟಿಕ್‌ ಫ್ರಂಟ್‌ ಅಧಿಕಾರಕ್ಕೆ ಬರಬಹುದು ಎನ್ನಲಾಗಿದೆ. ಕಳೆದ ಚುನಾವಣೆಯಲ್ಲಿ ಎಸ್‌ಕೆಎಂ 17 ಮತ್ತು ಎಸ್‌ಡಿಎಫ್ 15 ಸ್ಥಾನಗಳಲ್ಲಿ ಜಯಗಳಿಸಿದ್ದವು. ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಕಳೆದ ಚುನಾವಣೆಯಲ್ಲಿ ಇಲ್ಲಿ ಖಾತೆ ತೆರೆದಿರಲಿಲ್ಲ.

ಒಡಿಶಾ
ಪ್ರಸ್ತುತ ಒಡಿಶಾದಲ್ಲಿ ಬಿಜು ಜನತಾದಳದ ನೇತೃತ್ವದ ಸರಕಾರ ಅಧಿಕಾರದಲ್ಲಿದ್ದು, ನವೀನ್‌ ಪಟ್ನಾಯಕ್‌ ಮುಖ್ಯಮಂತ್ರಿಯಾಗಿದ್ದಾರೆ. ರಾಜ್ಯದ 147 ಸ್ಥಾನ ಗಳಿಗೆ ಮೇ 13 ಮತ್ತು 20 ರಂದು 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಚುನಾ­ವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊ ಳ್ಳಲು ಬಿಜೆಪಿ ಹಾಗೂ ಬಿಜೆಡಿ ಮುಂದಾಗಿದ್ದರೂ ಸೀಟು ಹಂಚಿಕೆ ವಿಚಾರಕ್ಕೆ ಈ ಮೈತ್ರಿ ಮುರಿದು ಬಿದ್ದಿತ್ತು. ಹೀಗಾಗಿ ರಾಜ್ಯ ವಿಧಾನಸಭೆ ಚುನಾವಣೆ ಸಾಕಷ್ಟು ಕುತೂಹಲ ಮೂಡಿಸಿದೆ. ಕಳೆದ ಚುನಾವಣೆಯಲ್ಲಿ ಬಿಜೆಡಿ ಬರೋಬ್ಬರಿ 112 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.