LS Polls; ಕಟ್ಟರ್‌ ಕಾಂಗ್ರೆಸ್‌ ಪ್ರದೇಶವಾಗಿದ್ದ ದ.ಕ.ಈಗ ಕೇಸರಿ ಭದ್ರಕೋಟೆ

ಜಾತಿ ಲೆಕ್ಕಾಚಾರಕ್ಕೆ ಇಲ್ಲಿ ಮಾನ್ಯತೆಯೇ ಇಲ್ಲ...ಜನಾರ್ದನ ಪೂಜಾರಿ, ಧನಂಜಯ ಕುಮಾರ್‌ 4 ಬಾರಿ ಗೆದ್ದ ಕ್ಷೇತ್ರ 

Team Udayavani, Mar 8, 2024, 6:55 AM IST

nalin-kumar-2
ಮಂಗಳೂರು: ಒಂದೆಡೆ ಅರಬ್ಬೀ ಸಮುದ್ರ, ಇನ್ನೊಂದೆಡೆ ಕೇರಳ ರಾಜ್ಯದ ಗಡಿ, ವಿಭಿನ್ನ ರಾಜಕೀಯ ಚಿಂತನೆಯ ಕೇಂದ್ರ, ರಾಜ್ಯದಲ್ಲೇ ಕುತೂಹಲಕಾರಿ ಬೆಳವಣಿಗೆಗೆ ಕಾರಣವಾಗುವ ಕ್ಷೇತ್ರ..ಇದು ದಕ್ಷಿಣ ಕನ್ನಡ.
2008ರ ಕ್ಷೇತ್ರ ಮರುವಿಂಗಡಣೆವರೆಗೆ ಮಂಗಳೂರು ಕ್ಷೇತ್ರ ಎಂದು ಕರೆಯಲ್ಪಡುತ್ತಿತ್ತು. ಉಳ್ಳಾಲ, ಮಂಗಳೂರು, ವಿಟ್ಲ, ಪುತ್ತೂರು, ಸುಳ್ಯ, ಸೋಮವಾರಪೇಟೆ, ಮಡಿಕೇರಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳು ಇದರ ವ್ಯಾಪ್ತಿಯಲ್ಲಿದ್ದವು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿದ್ದೂ ಬೆಳ್ತಂಗಡಿ ವಿಧಾನಸಭೆ ಕ್ಷೇತ್ರ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿತ್ತು. 2009ರ ಚುನಾವಣೆಗೆ ಕ್ಷೇತ್ರಕ್ಕೆ ದಕ್ಷಿಣ ಕನ್ನಡ ಹೆಸರು ಬಂದಿದ್ದಷ್ಟೇ ಅಲ್ಲ, ಮಡಿಕೇರಿ, ವಿರಾಜಪೇಟೆ ಮೈಸೂರಿಗೆ ಹೋದರೆ ಸೋಮವಾರ ಪೇಟೆ ಕ್ಷೇತ್ರವನ್ನು ರದ್ದುಗೊಳಿಸಲಾಯಿತು. ಬೆಳ್ತಂಗಡಿಯು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬಂದಿತು.
ಈಗ ಈ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 8 ವಿಧಾನ ಸಭಾ ಕ್ಷೇತ್ರಗಳಿವೆ. ಮಂಗಳೂರು ನಗರ ದಕ್ಷಿಣ, ಮಂಗಳೂರು ನಗರ ಉತ್ತರ (ಹಿಂದಿನ ಸುರತ್ಕಲ್‌), ಮಂಗಳೂರು (ಹಿಂದಿನ ಉಳ್ಳಾಲ), ಮೂಡುಬಿದಿರೆ, ಬಂಟ್ವಾಳ, ಸುಳ್ಯ, ಪುತ್ತೂರು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಗಳು.
ಹಿಂದಿನ ಬಾರಿ ಇದರಲ್ಲಿ ಮಂಗಳೂರು ಬಿಟ್ಟು ಉಳಿದೆಲ್ಲವನ್ನೂ ಬಿಜೆಪಿ ಗೆದ್ದಿದ್ದರೆ,  2023ರ ಚುನಾವಣೆಯಲ್ಲಿ ಬಿಜೆಪಿ ಪುತ್ತೂರು ಕ್ಷೇತ್ರವನ್ನೂ ಕಳೆದುಕೊಂಡಿತ್ತು. ಸದ್ಯ ಬಿಜೆಪಿ-6, ಕಾಂಗ್ರೆಸ್‌-2 ಕ್ಷೇತ್ರಗಳಲ್ಲಿ ಗೆದ್ದಿವೆ.
1951ರಿಂದ ಇದುವರೆಗೆ 9 ಬಾರಿ ನಿರಂತರ ವಾಗಿ ಕಾಂಗ್ರೆಸ್‌ ಈ ಕ್ಷೇತ್ರವನ್ನು ಗೆಲ್ಲುತ್ತಲೇ ಬಂದಿದೆ. ಅನಂತರದ 8 ಚುನಾವಣೆಗಳಲ್ಲಿ ನಿರಂತರ ಬಿಜೆಪಿ ಗೆಲುವು ಸಾಧಿಸಿದೆ. ಹಾಗಾಗಿ ಒಂದೊಮ್ಮೆ ಕಟ್ಟರ್‌ ಕಾಂಗ್ರೆಸ್‌ ಪ್ರದೇಶವಾಗಿದ್ದ ದಕ್ಷಿಣ ಕನ್ನಡವೀಗ ಕೇಸರಿ ಭದ್ರಕೋಟೆಯೆಂದೇ ಕರೆಯಲ್ಪಡುತ್ತಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಹೊರತುಪಡಿಸಿ ಇತರ ಪಕ್ಷಗಳಿಗೆ ಇಲ್ಲಿ ಗೆಲುವು ಲಭಿಸಿಲ್ಲ ಎನ್ನುವುದು ಗಮನಾರ್ಹ. ಬಿಲ್ಲವ ಸಮುದಾಯದ ಬಿ. ಜನಾರ್ದನ ಪೂಜಾರಿ ಹಾಗೂ ಜೈನ ಸಮುದಾಯದ ವಿ.ಧನಂಜಯ ಕುಮಾರ್‌ ಇಬ್ಬರೂ ಇಲ್ಲಿ ತಲಾ 4 ಬಾರಿ ಸತತವಾಗಿ ಗೆದ್ದಿದ್ದರು. ಕಾಂಗ್ರೆಸ್‌ನ ನಿರಂತರ ಗೆಲುವಿನ ಅಭಿಯಾನವನ್ನು 1991ರಲ್ಲಿ ಕೊನೆ ಯಾಗಿಸಿದ್ದೂ ಧನಂಜಯ ಕುಮಾರ್‌. ಡಾ| ಎಂ.ವೀರಪ್ಪ ಮೊಲಿ ಸ್ಪರ್ಧಿಸಿದರೂ ಗೆಲ್ಲಲು ಸಾಧ್ಯವಾಗಲಿಲ್ಲ. ಧನಂಜಯ ಕುಮಾರ್‌ ಅವರ ಬಳಿಕ 2004ರಲ್ಲಿ ಬಿಜೆಪಿಯಿಂದ ಗೆದ್ದ ಡಿ.ವಿ.ಸದಾನಂದ ಗೌಡರು 2009ರಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸ್ಥಳಾಂತರಗೊಂಡರು.   2009ರಿಂದ ಇದುವರೆಗೆ ನಳಿನ್‌ ಕುಮಾರ್‌ ಕಟೀಲು 3 ಬಾರಿ ಗೆದ್ದಿದ್ದಾರೆ.
ಜಾತಿ ಸಮೀಕರಣ ಲೆಕ್ಕಕ್ಕಿಲ್ಲ
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಜಾತಿ ಆಧಾರಿತವಾಗಿ ಚುನಾವಣೆಗಳೂ ನಡೆದಿಲ್ಲ. ಒಂದೊಮ್ಮೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷಗಳು ಜಾತಿ ಸಮೀಕರಣ ಮಾಡಿದ್ದಿದ್ದರೂ ಮತ ಗಳಿಕೆಯಲ್ಲಿ ದೊಡ್ಡ ಯಶಸ್ಸು ಕಂಡಿಲ್ಲ. ಇಲ್ಲಿ ಹೆಚ್ಚಾಗಿ ಪûಾ ಧಾರಿತ ನಿಲುವೇ ಮೇಲುಗೈ. ಅಲ್ಪಸಂಖ್ಯಾಕ ಸಮುದಾಯ ಹಿಂದಿನಿಂದಲೂ ಸಾಂಪ್ರದಾಯಿಕ ವಾಗಿ ಕಾಂಗ್ರೆಸ್‌ಗೆ ಮತಹಾಕುವುದು ಬಿಟ್ಟರೆ ಉಳಿ ದಂತೆ ಇಲ್ಲಿ ಜಾತಿ ಲೆಕ್ಕಾಚಾರ ನಡೆಯುವುದಿಲ್ಲ.
ನಳಿನ್‌ ಕುಮಾರ್‌ ಕಟೀಲು, ಹಾಲಿ ಸಂಸದ
ಪಕ್ಷ: ಬಿಜೆಪಿ
ಪಡೆದ ಮತ:  7,74,285
ಗೆಲುವಿನ ಅಂತರ:  2,74,621
ಮತದಾರರ ವಿವರ
ಮತದಾರರು 2024      2019
ಪುರುಷರು 8,73,380     8,45,308
ಮಹಿಳೆಯರು 9,12,369     9,79,050
ಇತರ   77    102
ಒಟ್ಟು   17,85,826    18,24,460
 ವೇಣುವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.