ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Team Udayavani, Apr 24, 2024, 4:26 PM IST
ಕಲಬುರಗಿ: ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ. ಯಾರೇ ಹೇಳಿದರೂ ಚುನಾವಣೆಗೆ ನಿಲ್ಲೋದಿಲ್ಲ ಎಂದು ಅಫಜಲಪುರ ಕಾಂಗ್ರೆಸ್ ಪಕ್ಷದ ಶಾಸಕ ಎಂ.ವೈ. ಪಾಟೀಲ್ ಘೋಷಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲೇ ಸ್ಪರ್ಧಿಸದಿರಲು ಹಿಂದೇಟು ಹಾಕಿದ್ದೇ, ಆದರೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಇದೊಂದು ಸಲ ಸ್ಪರ್ಧಿಸಿ ಎಂದು ಹೇಳಿದ್ದರಿಂದ ಅನಿವಾರ್ಯ ವಾಗಿ ಸ್ಪರ್ಧಿಸಿದೆ. ಆದರೆ ಮುಂಬರುವ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಯುವಕರಿಗೆ ಸ್ಥಾನ ಬಿಟ್ಟು ಕೊಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಈಗ ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಬಂದಿರುವುದು ಸಂತಸ ತಂದಿದೆ. ಯಾವುದೋ ಕಾರಣಕ್ಕೆ ಪಕ್ಷ ಬಿಟ್ಟು ಹೋಗಿದ್ದರು. ಈಗ ಮರಳಿ ಬಂದಿದ್ದಾರೆ. ದೊಡ್ಡ ಶಕ್ತಿಯಾಗಿದೆ ಎಂದರು.
2019 ಚುನಾವಣೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಅಫಜಲಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಗೆ ಆಶೀರ್ವಾದ ಮಾಡಲಿಲ್ಲ. ಹೀಗಾಗಿ ಸೋಲಿಲ್ಲದ ಸರದಾರ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಿನ್ನಡೆ ಆಯಿತು. ಹೀಗಾಗಿ ತಾವು ತಲೆ ಎತ್ತಿ ತಿರುಗಾಡದಂತಾಗಿದೆ. ನಾನು ಬೀದಿಗೆ ಬಿದ್ದಾಗ ಡಾ. ಖರ್ಗೆ ಶಾಸಕರಾಗಿ ಮಾಡಿದ್ದಾರೆ. ಶಿರಸಾಸ್ಟಾಗ ನಮಸ್ಕಾರ ಹಾಕಿ ವಿನಂತಿಸುತ್ತೇನೆ. ಇದು ಕೊನೆ ಚುನಾವಣೆ. ಹೀಗಾಗಿ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಕೈ ಹಿಡಿದು ಎಬ್ಬಿಸಬೇಕೆಂದರು.
ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಮಹಾತ್ಮಗಾಂಧಿ ಕುಳಿತ ಸ್ಥಳದಲ್ಲಿ ಕುಳಿತ್ತಿದ್ದಾರೆ. ಈಗ ಕಲಬುರಗಿಯಲ್ಲಿ ಕಾಂಗ್ರೆಸ್ ಗೆಲ್ಲಿಸಿ ಮುಖಾಂತರ ಏಲ್ಲಿ ಕಳೆದಿದೆಯೋ ಅಲ್ಲೇ ಹುಡುಕುತ್ತೇವೆ. ರಾಧಾಕೃಷ್ಣ ಅವರು ಅನೇಕ ಕೆಲಸ ಕಾರ್ಯ ಮಾಡಿದ್ದಾರೆ. ಬೀದರ್ ದಿಂದ ಈ ಹಿಂದೆ ಸ್ಪರ್ಧಿಸುವ ಅವಕಾಶ ಇದ್ದರೂ ನಿಲ್ಲಲಿಲ್ಲ. ಡಾ.ಖರ್ಗೆ – ರಾಧಾಕೃಷ್ಣ ಇಬ್ಬರಲ್ಲಿ ಒಬ್ಬರೂ ನಿಲ್ಲುವ ಅನಿವಾರ್ಯ ಇತ್ತು. ಡಾ. ಖರ್ಗೆ ಅವರು ದೇಶ ಸುತ್ತಿ ಪಕ್ಷ ಸಂಘಟಿಸುವ ಜವಾಬ್ದಾರಿ ಇರೋದ್ರಿಂದ. ಸ್ಪರ್ಧಿಸಲಿಲ್ಲ ಎಂದರು.
ಬದುಕು ಕೊಟ್ಟಂತಹ 371 ಜೆ ವಿಧಿ ಜಾರಿಗೆ ತಂದಂತಹ ಹಾಗೂ ಉದ್ಯೋಗಾವಕಾಶ ದೊರಕಿ ಜನ ಕೈ ಹಿಡಿಯಲಿಲ್ಲ ಬೇಸರ ಉಂಟು ಮಾಡಿದೆ. ಈ ಸಲ ಹಾಗೆ ಮಾಡುವುದಿಲ್ಲ. ಕೈ ಹಿಡಿದೇ ಹಿಡಿಯುತ್ತಾರೆಂಬ ಆತ್ಮಸಾಕ್ಷಿ ಹೇಳುತ್ತಿದೆ ಎಂದರು.
ಕೊನೆ ಚುನಾವಣೆ ಅಲ್ಲ: ಇದೇ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಈಗ ತಾವು ಕಾಂಗ್ರೆಸ್ ಸೇರಿದ್ದರಿಂದ ಕಾರ್ಯಕರ್ತರ ಸಮ್ಮೀಲನ ಸಹ ಆಗಿದೆ. ಆದರೆ ತಮ್ಮದು ಕೊನೆ ಚುನಾವಣೆಯಲ್ಲ. ಬಿಜೆಪಿ ಗೆ ತಕ್ಕಪಾಠ ಕಲಿಸಲು ಜೀವಂತ ಇರುತ್ತೇನೆ ಎಂದು ಗುಡುಗಿದರು.
ಅದೇ ರೀತಿ ಎಐಸಿಸಿ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ, ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ. ಜೀವ ಇರೋವರೆಗೂ ರಾಜಕೀಯ ಮಾಡುತ್ತೇನೆ ಎಂದು ಘೋಷಿಸಿದರಲ್ಲದೇ ಚುನಾವಣೆಯಲ್ಲಿ ಮತ ಹಾಕದಿದ್ದರೂ ಪರ್ವಾಗಿಲ್ಲ. ಆದರೆ ಸತ್ತಾಗ ಮಣ್ಣಿಗಾದರೂ ಬನ್ನಿ ಎಂದು ಭಾವನಾತ್ಮಕವಾಗಿ ನುಡಿದರು. ಸಿಎಂ ಸಿದ್ದರಾಮಯ್ಯ ಸೇರಿ ಇತರರು ಹಾಜರಿದ್ದರು.
ಇದನ್ನೂ ಓದಿ: Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ
ಅಪಹೃತ ಮಹಿಳೆ ಸಿಆರ್ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್ಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್ ಅಂಡರ್ಪಾಸ್
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!