Mandya; ಅಂದುಕೊಂಡಿದ್ದೆಲ್ಲ ಆಗಬೇಕು ಎಂದು ಕುಳಿತುಕೊಳ್ಳುವುದಿಲ್ಲ: ಸುಮಲತಾ
ನಾನೇ ಇಷ್ಟು ತಾಳ್ಮೆಯಿಂದ ಇದ್ದೇನೆ, ನೀವೆಲ್ಲ ಯಾಕೆ ತಲೆ ಕೆಡಿಸಿಕೊಳ್ಳುತ್ತೀರಿ
Team Udayavani, Mar 7, 2024, 5:59 PM IST
ಮಂಡ್ಯ: ”ಯಾರೂ ಅಂದುಕೊಂಡಿದ್ದೆಲ್ಲ ಆಗಬೇಕು ಎಂದು ಕುಳಿತುಕೊಳ್ಳುವುದಿಲ್ಲವಲ್ಲ” ಎಂದು ಮಂಡ್ಯ ಸಂಸದೆ ಸುಮಲತಾ ಅವರು ಗುರುವಾರ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಟಿಕೆಟ್ ಕುರಿತು ಪ್ರತಿಕ್ರಿಯಿಸಿ ‘ಬಿಜೆಪಿ ವರಿಷ್ಠರು ವಿಶ್ವಾಸದ ಮಾತುಗಳು, ಪ್ರೋತ್ಸಾಹದ ಮಾತುಗಳನ್ನು ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ನನ್ನ ಬಗ್ಗೆ ಗೌರವ ಇದೆ. ನೀವು ನಮ್ಮ ಪಕ್ಷಕ್ಕೆ ಬೇಕು. ಮಂಡ್ಯ ಭಾಗದಲ್ಲಿ ಬಿಜೆಪಿ ಬೆಳೆಸಲು ನಿಮ್ಮ ಶಕ್ತಿ ಬೇಕು ಎಂದು ಕಳೆದ ಬಾರಿ ವಿಧಾನಸಭೆ ಚುನಾವಣೆ ವೇಳೆ ಹೇಳಿಯೇ ಬೆಂಬಲವನ್ನು ಪಡೆದುಕೊಂಡಿದ್ದಾರೆ. ಇಷ್ಟೂ ಆದ ಮೇಲೆ ನಿಮಗೆ ನಂಬಿಕೆ ಇಲ್ಲ ಅಂದರೆ ಇನ್ನು ಒಂದು ವಾರ ಕಾದು ನೋಡಿ”ಎಂದರು.
ಮೈತ್ರಿಯಿಂದಾಗಿ ಟಿಕೆಟ್ ಜೆಡಿಎಸ್ ಪಾಲಾದರೆ ಎಂಬ ಪ್ರಶ್ನೆಗೆ ಉತ್ತರಿಸಿ ‘ರಾಜಕೀಯದಲ್ಲಿ ಏನು ಬೇಕಾದರೂ ಆಗಲಿ. ಯಾರೂ ಅಂದುಕೊಂಡಿದ್ದೆಲ್ಲ ಆಗಬೇಕು ಎಂದು ಕುಳಿತುಕೊಳ್ಳುವುದಿಲ್ಲವಲ್ಲ. ನಮ್ಮದೇ ಆದ ನಿರ್ಧಾರ ಕೈಗೊಳ್ಳಬಹುದಲ್ಲ’ಎಂದರು.
‘ಟಿಕೆಟ್ ಘೋಷಣೆ ಆದ ಮೇಲೆ ನೋಡೋಣ. ನಾನೇ ಇಷ್ಟು ತಾಳ್ಮೆಯಿಂದ ಇದ್ದೇನೆ, ನೀವೆಲ್ಲ ಯಾಕೆ ತಲೆ ಕೆಡಿಸಿಕೊಳ್ಳುತ್ತೀರಿ’ ಎಂದು ಸುದ್ದಿಗಾರರಿಗೆ ನಗು ನಗುತ್ತಾ ಪ್ರತಿಕ್ರಿಯಿಸಿದರು.
ಜೆಡಿಎಸ್ ಬಿಗಿ ಪಟ್ಟು
ಜೆಡಿಎಸ್ ಕಾರ್ಯಕರ್ತರ ಬಲ ಇರುವ, ಒಕ್ಕಲಿಗ ಪ್ರಾಬಲ್ಯದ ಕ್ಷೇತವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡಲು ಜೆಡಿಎಸ್ ಸಿದ್ಧವಾಗಿಲ್ಲ. ಸುಮಲತಾ ಅವರೂ ಬಿಜೆಪಿ ಟಿಕೆಟ್ ನನಗೇ ಸಿಗುತ್ತದೆ ಎನ್ನುವ ವಿಶ್ವಾಸ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಕಳೆದ ಬಾರಿ ಬಂಡಾಯ ಸಾರಿ ದೇಶದಲ್ಲೇ ಗಮನ ಸೆಳೆದ ಮಂಡ್ಯ ಕ್ಷೇತ್ರದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ,ಕಾಂಗ್ರೆಸ್ ಯಾರನ್ನು ಕಣಕ್ಕಿಳಿಸಲಿದೆ? ಮುಂದಿನ ರಾಜಕೀಯ ಯಾವ ರೀತಿ ತಿರುವು ಪಡೆದುಕೊಳ್ಳಲಿದೆ? ಬಿಜೆಪಿ ಟಿಕೆಟ್ ಸಿಗದಿದ್ದರೆ ಸುಮಲತಾ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ