RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
I.N.D.I.A. ಮೈತ್ರಿಕೂಟದ ಜಂಟಿ ಸುದ್ದಿಗೋಷ್ಠಿ...ಖರ್ಗೆ, ಪವಾರ್ ತೀವ್ರ ವಾಗ್ದಾಳಿ...
Team Udayavani, May 18, 2024, 5:31 PM IST
ಮುಂಬಯಿ: ‘ಪ್ರಧಾನಿ ಮೋದಿ ನಮ್ಮ ಶಿವಸೇನೆಯನ್ನು ‘ನಕಲಿ’ ಸೇನಾ ಎಂದು ಕರೆಯುತ್ತಾರೆ, ನಾಳೆ ಅವರು ಆರ್ಎಸ್ಎಸ್ ಅನ್ನು ಕೂಡ ನಕಲಿ ಸಂಘ ಎಂದು ಕರೆಯಬಹುದು ಎಂದು ಮಾಜಿ ಸಿಎಂ, ಶಿವಸೇನಾ(ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಶನಿವಾರ ಆಕ್ರೋಶ ಹೊರ ಹಾಕಿದ್ದಾರೆ.
ಮುಂಬೈನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎನ್ ಸಿಪಿ(ಎಸ್ ಪಿ) ನಾಯಕ ಶರದ್ ಪವಾರ್ ಅವರೊಂದಿಗೆ ಇಂಡಿಯಾ ಮೈತ್ರಿಕೂಟದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಖರ್ಗೆ ಮಾತನಾಡಿ ‘ಪ್ರಧಾನಿ ಮೋದಿ ತಮ್ಮ ಚುನಾವಣ ಭಾಷಣಗಳ ಮೂಲಕ ಜನರನ್ನು ಪ್ರಚೋದಿಸುತ್ತಿದ್ದಾರೆ ಮತ್ತು ಸಮಾಜವನ್ನು ಒಡೆಯುತ್ತಿದ್ದಾರೆ. ಮೋದಿಯವರಿಗಿಂತ ಮೊದಲು ಯಾವ ಪ್ರಧಾನಿಯೂ ಜನರನ್ನು ಪ್ರಚೋದಿಸುವ ಕೆಲಸ ಮಾಡಿಲ್ಲ. ಅವರು ಪದೇ ಪದೇ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ ಆದರೆ ಪ್ರಜಾಪ್ರಭುತ್ವದ ತತ್ವಗಳಿಗೆ ಬದ್ಧರಾಗಿಲ್ಲ’ ಎಂದು ಆರೋಪಿಸಿದರು.
ಕಾಂಗ್ರೆಸ್ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಬುಲ್ಡೋಜ್ ಮಾಡುತ್ತದೆ ಮತ್ತು ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಮರುಸ್ಥಾಪಿಸುತ್ತದೆ ಎಂದಿರುವ ಪ್ರಧಾನಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಖರ್ಗೆ ” ನಾವು ಯಾರ ಮೇಲೂ ಬುಲ್ಡೋಜರ್ ಬಳಸಿಲ್ಲ. ಕಾಂಗ್ರೆಸ್ ಎಂದಿಗೂ ಮಾಡದ ಅಥವಾ ಕಾರ್ಯಗತಗೊಳಿಸಲು ಅಸಾಧ್ಯವಾದ ವಿಷಯಗಳ ಬಗ್ಗೆ ಜನರಿಗೆ ಸುಳ್ಳು ಹೇಳುವ ಮತ್ತು ಪ್ರಚೋದಿಸುವ ಅಭ್ಯಾಸವನ್ನು ಮೋದಿ ಹೊಂದಿದ್ದಾರೆ. ನಾವು ನಮ್ಮ ಪ್ರಣಾಳಿಕೆಯಲ್ಲಿ ಏನು ಭರವಸೆ ನೀಡಿದ್ದೇವೆಯೋ ಅದನ್ನು ಕಾರ್ಯಗತಗೊಳಿಸುತ್ತೇವೆ” ಎಂದು ತಿರುಗೇಟು ನೀಡಿದರು.
ನಮ್ಮ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರಸ್ತುತ ಜಿಎಸ್ಟಿ ಬದಲಿಗೆ ಸರಳ, ಏಕ ದರದ ಜಿಎಸ್ಟಿಯನ್ನು ಜಾರಿಗೆ ತರಲಿದೆ ಎಂದರು. “ನಾವು ಆಹಾರ ಭದ್ರತಾ ಕಾಯ್ದೆಯನ್ನು ಪರಿಚಯಿಸಿದ್ದೇವೆ, ಆದರೆ ಪ್ರಧಾನಿ ಮೋದಿ ಉಚಿತ ಪಡಿತರ ಪೂರೈಕೆಯ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ” ಎಂದು ಖರ್ಗೆ ಆರೋಪಿಸಿದರು.
‘ಇಂಡಿಯಾ ಮೈತ್ರಿ ಕೂಟದ ಸರ್ಕಾರವು ಅಧಿಕಾರ ವಹಿಸಿಕೊಂಡ ಜೂನ್ 4 ರಿಂದ ಅಚ್ಚೇ ದಿನ್ ಬರಲಿದೆ’ ಎಂದು ಠಾಕ್ರೆ ಹೇಳಿದರು.
ನೀರುದ್ಯೋಗದಂತಹ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ನಮ್ಮ ರ್ಯಾಲಿಯಲ್ಲಿ ಪಾಕಿಸ್ಥಾನದ ಧ್ವಜಗಳನ್ನು ಹಾರಿಸುತ್ತಿದೆ ಎಂದು ಠಾಕ್ರೆ ಆರೋಪಿಸಿದರು.
ಅಧಿಕಾರಕ್ಕೆ ಬಂದ ನಂತರ, ದೇಶದ ಎಲ್ಲಾ ಧಾರ್ಮಿಕ ಸ್ಥಳಗಳನ್ನು ರಕ್ಷಿಸುವುದು ಇಂಡಿಯಾ ಬ್ಲಾಕ್ ಸರ್ಕಾರದ ಕರ್ತವ್ಯವಾಗಿದೆ ಎಂದು ಶರದ್ ಪವಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಅಪಘಾತ ನಡೆಸಿದರೂ ಸಾಯದ ಪತಿ… ಗೆಳೆಯನ ಜೊತೆ ಸೇರಿ ಗುಂಡು ಹಾರಿಸಿ ಕೊಂದ ಪತ್ನಿ
ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar
Kanchanjunga Express ‘ಕವಚ’ ಇದ್ದಿದ್ದರೆ ರೈಲು ಅಪಘಾತ ತಪ್ಪುತ್ತಿತ್ತು!
Tax ಹೊರೆ ಇಳಿಸಲು ಕೇಂದ್ರ ಸರಕಾರ ಚಿಂತನೆ?
ಪ್ರವಾಸಿ ಸ್ಥಳಗಳನ್ನು ನೋಡಲೆಂದೇ ಕಾಂಚನಗಂಗಾ ರೈಲು ಏರುವ ಜನರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.