RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

I.N.D.I.A. ಮೈತ್ರಿಕೂಟದ ಜಂಟಿ ಸುದ್ದಿಗೋಷ್ಠಿ...ಖರ್ಗೆ, ಪವಾರ್ ತೀವ್ರ ವಾಗ್ದಾಳಿ...

Team Udayavani, May 18, 2024, 5:31 PM IST

1-qewwqeqqw

ಮುಂಬಯಿ: ‘ಪ್ರಧಾನಿ ಮೋದಿ ನಮ್ಮ ಶಿವಸೇನೆಯನ್ನು ‘ನಕಲಿ’ ಸೇನಾ ಎಂದು ಕರೆಯುತ್ತಾರೆ, ನಾಳೆ ಅವರು ಆರ್‌ಎಸ್‌ಎಸ್ ಅನ್ನು ಕೂಡ ನಕಲಿ ಸಂಘ ಎಂದು ಕರೆಯಬಹುದು ಎಂದು ಮಾಜಿ ಸಿಎಂ, ಶಿವಸೇನಾ(ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಶನಿವಾರ ಆಕ್ರೋಶ ಹೊರ ಹಾಕಿದ್ದಾರೆ.

ಮುಂಬೈನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎನ್ ಸಿಪಿ(ಎಸ್ ಪಿ) ನಾಯಕ ಶರದ್ ಪವಾರ್ ಅವರೊಂದಿಗೆ ಇಂಡಿಯಾ ಮೈತ್ರಿಕೂಟದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಖರ್ಗೆ ಮಾತನಾಡಿ ‘ಪ್ರಧಾನಿ ಮೋದಿ ತಮ್ಮ ಚುನಾವಣ ಭಾಷಣಗಳ ಮೂಲಕ ಜನರನ್ನು ಪ್ರಚೋದಿಸುತ್ತಿದ್ದಾರೆ ಮತ್ತು ಸಮಾಜವನ್ನು ಒಡೆಯುತ್ತಿದ್ದಾರೆ. ಮೋದಿಯವರಿಗಿಂತ ಮೊದಲು ಯಾವ ಪ್ರಧಾನಿಯೂ ಜನರನ್ನು ಪ್ರಚೋದಿಸುವ ಕೆಲಸ ಮಾಡಿಲ್ಲ. ಅವರು ಪದೇ ಪದೇ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ ಆದರೆ ಪ್ರಜಾಪ್ರಭುತ್ವದ ತತ್ವಗಳಿಗೆ ಬದ್ಧರಾಗಿಲ್ಲ’ ಎಂದು ಆರೋಪಿಸಿದರು.

ಕಾಂಗ್ರೆಸ್ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಬುಲ್ಡೋಜ್ ಮಾಡುತ್ತದೆ ಮತ್ತು ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಮರುಸ್ಥಾಪಿಸುತ್ತದೆ ಎಂದಿರುವ ಪ್ರಧಾನಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಖರ್ಗೆ ” ನಾವು ಯಾರ ಮೇಲೂ ಬುಲ್ಡೋಜರ್ ಬಳಸಿಲ್ಲ. ಕಾಂಗ್ರೆಸ್ ಎಂದಿಗೂ ಮಾಡದ ಅಥವಾ ಕಾರ್ಯಗತಗೊಳಿಸಲು ಅಸಾಧ್ಯವಾದ ವಿಷಯಗಳ ಬಗ್ಗೆ ಜನರಿಗೆ ಸುಳ್ಳು ಹೇಳುವ ಮತ್ತು ಪ್ರಚೋದಿಸುವ ಅಭ್ಯಾಸವನ್ನು ಮೋದಿ ಹೊಂದಿದ್ದಾರೆ. ನಾವು ನಮ್ಮ ಪ್ರಣಾಳಿಕೆಯಲ್ಲಿ ಏನು ಭರವಸೆ ನೀಡಿದ್ದೇವೆಯೋ ಅದನ್ನು ಕಾರ್ಯಗತಗೊಳಿಸುತ್ತೇವೆ” ಎಂದು ತಿರುಗೇಟು ನೀಡಿದರು.

ನಮ್ಮ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರಸ್ತುತ ಜಿಎಸ್‌ಟಿ ಬದಲಿಗೆ ಸರಳ, ಏಕ ದರದ ಜಿಎಸ್‌ಟಿಯನ್ನು ಜಾರಿಗೆ ತರಲಿದೆ ಎಂದರು. “ನಾವು ಆಹಾರ ಭದ್ರತಾ ಕಾಯ್ದೆಯನ್ನು ಪರಿಚಯಿಸಿದ್ದೇವೆ, ಆದರೆ ಪ್ರಧಾನಿ ಮೋದಿ ಉಚಿತ ಪಡಿತರ ಪೂರೈಕೆಯ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ” ಎಂದು ಖರ್ಗೆ ಆರೋಪಿಸಿದರು.

‘ಇಂಡಿಯಾ ಮೈತ್ರಿ ಕೂಟದ ಸರ್ಕಾರವು ಅಧಿಕಾರ ವಹಿಸಿಕೊಂಡ ಜೂನ್ 4 ರಿಂದ ಅಚ್ಚೇ ದಿನ್ ಬರಲಿದೆ’ ಎಂದು ಠಾಕ್ರೆ ಹೇಳಿದರು.

ನೀರುದ್ಯೋಗದಂತಹ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ನಮ್ಮ ರ‍್ಯಾಲಿಯಲ್ಲಿ ಪಾಕಿಸ್ಥಾನದ ಧ್ವಜಗಳನ್ನು ಹಾರಿಸುತ್ತಿದೆ ಎಂದು ಠಾಕ್ರೆ ಆರೋಪಿಸಿದರು.

ಅಧಿಕಾರಕ್ಕೆ ಬಂದ ನಂತರ, ದೇಶದ ಎಲ್ಲಾ ಧಾರ್ಮಿಕ ಸ್ಥಳಗಳನ್ನು ರಕ್ಷಿಸುವುದು ಇಂಡಿಯಾ ಬ್ಲಾಕ್ ಸರ್ಕಾರದ ಕರ್ತವ್ಯವಾಗಿದೆ ಎಂದು ಶರದ್ ಪವಾರ್ ಹೇಳಿದರು.

ಟಾಪ್ ನ್ಯೂಸ್

ಅಪಘಾತ ನಡೆಸಿ ಕೊಲ್ಲುವ ಯತ್ನ ವಿಫಲ… ಕೊನೆಗೆ ಗೆಳೆಯನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ

Shocking: ಅಪಘಾತ ನಡೆಸಿದರೂ ಸಾಯದ ಪತಿ… ಗೆಳೆಯನ ಜೊತೆ ಸೇರಿ ಗುಂಡು ಹಾರಿಸಿ ಕೊಂದ ಪತ್ನಿ

4-udupi

Udupi: ಹಿರಿಯ ನ್ಯಾಯವಾದಿ, ಕಾಂಗ್ರೆಸ್ ಪಕ್ಷದ ಮುಖಂಡ ಚೇರ್ಕಾಡಿ ವಿಜಯ್ ಹೆಗ್ಡೆ ನಿಧನ

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

1-24-tuesday

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಮನೋಬಲದಿಂದ ಕಾರ್ಯಸಿದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಘಾತ ನಡೆಸಿ ಕೊಲ್ಲುವ ಯತ್ನ ವಿಫಲ… ಕೊನೆಗೆ ಗೆಳೆಯನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ

Shocking: ಅಪಘಾತ ನಡೆಸಿದರೂ ಸಾಯದ ಪತಿ… ಗೆಳೆಯನ ಜೊತೆ ಸೇರಿ ಗುಂಡು ಹಾರಿಸಿ ಕೊಂದ ಪತ್ನಿ

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

1-sads-das

Kanchanjunga Express ‘ಕವಚ’ ಇದ್ದಿದ್ದರೆ ರೈಲು ಅಪಘಾತ ತಪ್ಪುತ್ತಿತ್ತು!

Tax

Tax ಹೊರೆ ಇಳಿಸಲು ಕೇಂದ್ರ ಸರಕಾರ ಚಿಂತನೆ?

1–dsdsdas

ಪ್ರವಾಸಿ ಸ್ಥಳಗಳನ್ನು ನೋಡಲೆಂದೇ ಕಾಂಚನಗಂಗಾ ರೈಲು ಏರುವ ಜನರು

MUST WATCH

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

ಹೊಸ ಸೇರ್ಪಡೆ

ಅಪಘಾತ ನಡೆಸಿ ಕೊಲ್ಲುವ ಯತ್ನ ವಿಫಲ… ಕೊನೆಗೆ ಗೆಳೆಯನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ

Shocking: ಅಪಘಾತ ನಡೆಸಿದರೂ ಸಾಯದ ಪತಿ… ಗೆಳೆಯನ ಜೊತೆ ಸೇರಿ ಗುಂಡು ಹಾರಿಸಿ ಕೊಂದ ಪತ್ನಿ

4-udupi

Udupi: ಹಿರಿಯ ನ್ಯಾಯವಾದಿ, ಕಾಂಗ್ರೆಸ್ ಪಕ್ಷದ ಮುಖಂಡ ಚೇರ್ಕಾಡಿ ವಿಜಯ್ ಹೆಗ್ಡೆ ನಿಧನ

3-

Throat Cancer: ತಂಬಾಕು ಮುಕ್ತ ಜೀವನ

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.