NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಆರಂಭದಿಂದಲೂ ವಿರೋಧಿಸುತ್ತಾ ಬಂದಿದ್ದ ಗುರುಮಠಕಲ್ ಶಾಸಕ

Team Udayavani, Apr 8, 2024, 9:27 PM IST

1-adsdasd

ಯಾದಗಿರಿ: ರಾಜ್ಯ ರಾಜಕಾರಣದಲ್ಲಾದ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಆರಂಭದಿಂದಲೂ ವಿರೋಧಿಸುತ್ತಾ ಬಂದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರು ಬಿಜೆಪಿ ಪಕ್ಷವು ಮೈತ್ರಿ ಧರ್ಮ ಪಾಲನೆ ಮಾಡುತ್ತಿಲ್ಲ, ನನ್ನ ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂಬ ಹೇಳಿಕೆ ನೀಡಿದ ಬೆನ್ನಲ್ಲೆ ಹೊಸದೊಂದು ಸಂಚಲನ ಮೂಡಿಸಿದ್ದರು.

ಮೂರು ದಿನಗಳ ಹಿಂದಷ್ಟೆ ರಾಯಚೂರು ಸಂಸದ-ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಶಾಸಕ ಶರಣಗೌಡ ಕಂದಕೂರ ಅವರ ಮನೆಗೆ ಭೇಟಿ ನೀಡಿದ್ದರು. ಇದೀಗ ಕಲಬುರಗಿ ಸಂಸದ ಡಾ.ಉಮೇಶ ಜಾಧವ್ ಸೋಮವಾರ ಸಂಜೆ ಶಾಸಕ ಕಂದಕೂರ ಮನೆಗೆ ಭೇಟಿ ನೀಡಿ ಸುದೀರ್ಘವಾದ ಮಾತುಕತೆ ನಡೆಸಿದರು.

ಚರ್ಚೆಯ ಬಳಿಕ ಪ್ರತಿಕ್ರಿಯೆ ನಿಡಿದ ಶಾಸಕ ಕಂದಕೂರು, ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿ ಬಳಗದೊಂದಿಗೆ ಚರ್ಚಿಸಿ ಲೋಕ ಕಣಕ್ಕೆ ಇಳಿಯುವ ಎಲ್ಲಾ ತಯಾರಿಯನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದರು.

ಮಂಗಳವಾರ ಎಚ್.ಡಿ ಕುಮಾರಸ್ವಾಮಿಯವರ ಜೊತೆ ಚರ್ಚಿಸಿ ಚುನಾವಣಾ ಪ್ರಚಾರದಲ್ಲಿ ನಮ್ಮ ಪಕ್ಷದ ನಾಯಕರು ಭಾಗವಹಿಸುವ ಬಗ್ಗೆ ವಿವರವಾಗಿ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.

ಹೊಸ ಶಕ್ತಿ : ಡಾ. ಉಮೇಶ್ ಜಾಧವ್
ಗುರುಮಠಕಲ್ ಕ್ಷೇತ್ರದ ಶಾಸಕರಾದ ಶರಣಗೌಡ ಕಂದಕೂರ್ ಭೇಟಿಯಿಂದ ವಿಶ್ವಾಸ ಇಮ್ಮಡಿಗೊಂಡಿದ್ದು ಜೆಡಿಎಸ್-ಬಿಜೆಪಿ ಮೈತ್ರಿಕೂಟವು ದಾಖಲೆಯ ಮತಗಳಿಂದ ಮುನ್ನಡೆ ಸಾಧಿಸಿ ಕಾಂಗ್ರೆಸ್ಸಿಗೆ ಮುಖಭಂಗ ಮಾಡಲಿದೆ ಎಂದು ಲೋಕಸಭಾ ಸದಸ್ಯರಾದ ಡಾ.ಉಮೇಶ್ ಜಾಧವ್ ವಿಶ್ವಾಸ ವ್ಯಕ್ತಪಡಿಸಿದರು.

ಯುಗಾದಿಯ ಮುನ್ನಾ ದಿನವಾದ ಸೋಮವಾರ ಶಾಸಕರ ಮನೆಗೆ ಖುದ್ದಾಗಿ ಭೇಟಿ ನೀಡಿ ಶುಭಾಶಯ ಕೋರಿ ಮಹತ್ವದ ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ, ಈ ಭೇಟಿ ಮೈತ್ರಿ ಕೂಟದ ವಿಶ್ವಾಸವನ್ನು ಹೆಚ್ಚಳ ಮಾಡಿದೆ. ಮಾತ್ರವಲ್ಲ ಶಾಸಕರು ತನ್ನ ಪೂರ್ಣ ಸಹಕಾರ ನೀಡಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತಂತ್ರಗಳನ್ನು ರೂಪಿಸಲು ಪಕ್ಷದ ಪ್ರಮುಖರ ಜೊತೆ ಮಂಗಳವಾರ ಸಭೆ ನಡೆಸಿ ಕಾರ್ಯ ಸೂಚಿಯನ್ನು ಕಾರ್ಯಕರ್ತರಿಗೆ ನೀಡಲಿದ್ದಾರೆ ಎಂದು ಹೇಳಿದರು.

ಜಾಧವ್ ಭೇಟಿಗೂ ಮೊದಲು, ಜೆಡಿಎಸ್ ಮುಖಂಡರ ಜತೆ ಮೀಟಿಂಗ್
ಕಲಬುರಗಿ ಜಿಲ್ಲಾ ಜೆಡಿಎಸ್ ನಾಯಕರ ದಂಡು ಶಾಸಕ ಶರಣಗೌಡ ಪಾಟೀಲ್ ಕಂದಕೂರ ಅವರ ಮನೆಗೆ ಸೋಮವಾರ ಭೇಟಿ ನೀಡಿತ್ತು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಾಲರಾಜ್ ಗುತ್ತೇದಾರ, ಯುವ ನಾಯಕರಾದ ಶಿವಕುಮಾರ ನಾಟೀಕಾರ, ಕೃಷ್ಣಾರೆಡ್ಡಿ ಇತರರು ಶಾಸಕ ಕಂದಕೂರ ಜತೆ ಮೈತ್ರಿಕೂಟ ಹಾಗೂ ಲೋಕಸಭೆ ಚುನಾವಣೆ ಬಗ್ಗೆ ಸುಧೀರ್ಘ ಮಾತುಕತೆ ನಡೆಸಿದರು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.