News18 Survey; ಕರ್ನಾಟಕದಲ್ಲಿ ಎನ್‌ಡಿಎ 25; ಬೆಂಗಳೂರು ಭಾಗದಲ್ಲಿ 1 ಕೈಗೆ

ಎನ್‌ಡಿಎ ಕೂಟ 411, ಇಂಡಿಯಾ ಒಕ್ಕೂಟ 105, ಇತರರಿಗೆ 27 ಸೀಟು

Team Udayavani, Mar 15, 2024, 6:35 AM IST

bjp jds

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನ್ಯೂಸ್‌18 ನಡೆಸಿರುವ ಸಮೀಕ್ಷೆಯ ಪ್ರಕಾರ, ಕರ್ನಾಟಕದ 28 ಕ್ಷೇತ್ರಗಳಲ್ಲಿ ಎನ್‌ಡಿಎ (ಬಿಜೆಪಿ ಮತ್ತು ಜೆಡಿಎಸ್‌) 25 ಕ್ಷೇತ್ರಗಳನ್ನು ಗೆಲ್ಲಲಿದ್ದು, ಕಾಂಗ್ರೆಸ್‌ 3 ಸ್ಥಾನಕ್ಕೆ ತೃಪ್ತಿ ಪಡಲಿದೆ. ಹಾಗೆಯೇ, ಎನ್‌ಡಿಎ ಶೇ.58 ಮತ್ತು ಕಾಂಗ್ರೆಸ್‌ ಶೇ.35 ಮತ ಗಳಿಸಲಿವೆ. ಇನ್ನು ದೇಶಾದ್ಯಂತ ಎನ್‌ಡಿಎ 411, ಇಂಡಿಯಾ ಒಕ್ಕೂಟ 105 ಮತ್ತು ಇತರರು 27 ಸ್ಥಾನಗಳನ್ನು ಜಯಿಸಲಿದ್ದಾರೆ.

ಈ ಸಮೀಕ್ಷೆಯ ಪ್ರಕಾರ, 400 ಸೀಟು ಗೆಲ್ಲುವ ತನ್ನ ಗುರಿಯನ್ನು ಎನ್‌ಡಿಎ ತಲುಪಲಿದೆ. ಇನ್ನು ಪಕ್ಷವಾರು ನೋಡುವು­ದಾದರೆ, ಬಿಜೆಪಿ 350 ಮತ್ತು ಮೈತ್ರಿ ಪಕ್ಷಗಳು 61 ಸ್ಥಾನ ಗೆದ್ದರೆ, ಕಾಂಗ್ರೆಸ್‌ 49 ಮತ್ತು ಅದರ ಮೈತ್ರಿ ಪಕ್ಷಗಳು 56 ಕ್ಷೇತ್ರಗಳನ್ನು ಗೆಲ್ಲಲಿವೆ ಎಂದು ಸಮೀಕ್ಷೆ ತಿಳಿಸಿದೆ.
ಕರ್ನಾಟಕದ ಸಮೀಕ್ಷೆ: ಇನ್ನು ವಲಯವಾರು ನೋಡುವುದಾದರೆ, ಬೆಂಗಳೂರು ಭಾಗದ 5 ಲೋಕಸಭಾ ಕ್ಷೇತ್ರಗಳ ಪೈಕಿ 1ರಲ್ಲಿ ಕಾಂಗ್ರೆಸ್‌ ಮತ್ತು 4ರಲ್ಲಿ ಎನ್‌ಡಿಎ ಗೆಲ್ಲಲಿದೆ. ಉತ್ತರ ಕರ್ನಾಟಕದ 11 ಕ್ಷೇತ್ರಗಳಲ್ಲಿ 1ರಲ್ಲಿ ಕಾಂಗ್ರೆಸ್‌ ಮತ್ತು 10ರಲ್ಲಿ ಎನ್‌ಡಿಎ ಜಯ ಗಳಿಸಿದರೆ, ಕರಾವಳಿ ಭಾಗದ ಮೂರೂ ಕ್ಷೇತ್ರಗಳು ಎನ್‌ಡಿಎ ಪಾಲಾಗಲಿವೆ. ಹಾಗೆಯೇ, ದಕ್ಷಿಣ ಕರ್ನಾಟಕದ 9 ಲೋಕಸಭಾ ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಲ್ಲಿ ಎನ್‌ಡಿಎ ಮತ್ತು 1 ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವಿನ ನಗೆ ಬೀರಲಿದೆ ಎಂದು ಸಮೀಕ್ಷೆ ಹೇಳಿದೆ.

ಕರ್ನಾಟಕದ ಮಟ್ಟಿಗೆ ಬಿಜೆಪಿ ಮೈತ್ರಿಯ ಪಕ್ಷವಾದ ಜೆಡಿಎಸ್‌ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂಬುದು ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಈ ಸಮೀಕ್ಷೆಯ ಫ‌ಲಿತಾಂಶವು ಬಿಜೆಪಿಗೆ ಕಳೆದ ಬಾರಿಗಿಂತಲೂ ಒಂದರೆಡು ಸ್ಥಾನಗಳು ಕಡಿಮೆಯಾ­ಗಲಿವೆ. ಆದರೆ ಬಿಜೆಪಿ-ಜೆಡಿಎಸ್‌ ಎರಡೂ ಸೇರಿ ಕಳೆದ ಬಾರಿಯ ಫ‌ಲಿತಾಂಶವನ್ನು ಮರುಕಳಿಸಲಿವೆ. ಇನ್ನು ಕಾಂಗ್ರೆಸ್‌ ಕಳೆದ ಬಾರಿ ಒಂದು ಸ್ಥಾನ ಗೆದ್ದಿತ್ತು. ಅದೀಗ ಹೆಚ್ಚುವರಿ 2 ಸ್ಥಾನಗಳನ್ನು ಪಡೆದುಕೊಳ್ಳಬಹುದು. ವಿಧಾನಸಭೆಯಲ್ಲಿ ಗ್ಯಾರಂಟಿಗಳ ಮೂಲಕ ಭರ್ಜರಿ ಜಯ ಸಾಧಿಸಿದ್ದ ಕಾಂಗ್ರೆಸ್‌ಗೆ ಅದೇ ಫ‌ಲಿತಾಂಶವನ್ನು ಪುನರಾವರ್ತಿಸಲು ಸಾಧ್ಯವಾಗುತ್ತಿಲ್ಲ ಎಂಬುದು ಈ ಸಮೀಕ್ಷೆಯಲ್ಲಿ ವ್ಯಕ್ತವಾದ ಅಭಿಪ್ರಾಯವಾಗಿದೆ.

ಉತ್ತರದಲ್ಲಿ ಬಹುತೇಕ ಕಡೆ ಕ್ಲೀನ್‌ ಸ್ವೀಪ್‌: ಉತ್ತರ ಭಾರತದ ರಾಜಸ್ಥಾನ, ಗುಜರಾತ್‌, ಉತ್ತರಾಖಂಡ, ದಿಲ್ಲಿ, ಛತ್ತೀಸ್‌ಗಢ, ಮಧ್ಯ ಪ್ರದೇಶ ಸಹಿತ ಹಲವು ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌ ಪ್ರದರ್ಶನ ತೋರಲಿದೆ. ಪಶ್ಚಿಮ ಬಂಗಾಲ, ತೆಲಂಗಾಣದಲ್ಲೂ ಎನ್‌ಡಿಎ ಹೆಚ್ಚಿನ ಸೀಟುಗಳನ್ನು ಗೆಲ್ಲಲಿದೆ. ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟಕ್ಕೆ ಭಾರೀ ನಿರಾಸೆ ಎದುರಾಗಲಿದೆ ಎಂದು ನ್ಯೂಸ್‌19 ಸಮೀಕ್ಷೆ ಭವಿಷ್ಯ ನುಡಿದಿದೆ.

ಕರ್ನಾಟಕದ ವಲಯವಾರು ಸಮೀಕ್ಷೆ
ವಲಯ ಎನ್‌ಡಿಎ ಕಾಂಗ್ರೆಸ್‌
ಬೆಂಗಳೂರು ಭಾಗ 4 1
ಉ.ಕರ್ನಾಟಕ 10 1
ಕರಾವಳಿ ಭಾಗ 3 0
ದ.ಕರ್ನಾಟಕ 8 1

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.