Muslim League ; ರಾಹುಲ್ ನಾಮಪತ್ರ ಸಲ್ಲಿಕೆ ರ್‍ಯಾಲಿಯಲ್ಲಿ ಐಯುಎಂಎಲ್ ಧ್ವಜಗಳೇ ಇರಲಿಲ್ಲ!

'ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು' ಎಂದ ಸ್ಮೃತಿ ಇರಾನಿ ..'ಧೈರ್ಯವಿಲ್ಲ' ಎಂದ ಪಿಣರಾಯಿ

Team Udayavani, Apr 4, 2024, 5:55 PM IST

1-qwerqwqwe

ಹೊಸದಿಲ್ಲಿ: 2019ರ ಲೋಕಸಭೆ ಚುನಾವಣೆ ವೇಳೆ ಧ್ವಜ ವಿವಾದ ನಡೆದ ಕಾರಣಕ್ಕಾಗಿ ಈ ಬಾರಿ ವಯನಾಡಿನಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ರ್‍ಯಾಲಿಯಲ್ಲಿ ಮುಸ್ಲಿಂ ಲೀಗ್ ಧ್ವಜಗಳೇ ಇರಲಿಲ್ಲ. ವಿಶೇಷವೆಂದರೆ ಧ್ವಜಗಳು ಇರದಿರುವುದಕ್ಕೂ ಎಡ, ಬಲದಿಂದ ಟೀಕೆ ವ್ಯಕ್ತವಾಗಿದೆ.

ಬುಧವಾರ ನಡೆದ ರಾಹುಲ್ ಗಾಂಧಿಯವರ ರ್‍ಯಾಲಿಯಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಧ್ವಜಗಳು ಇಲದಿರುವುದು ಎದ್ದು ಕಂಡು ಕಂಡಿತು. ಕೇರಳದ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನ ಪ್ರಮುಖ ಪಾಲುದಾರ ಪಕ್ಷಗಳಲ್ಲಿ ಐಯುಎಂಎಲ್ ಕೂಡ ಒಂದು. 2019 ರಲ್ಲಿ ನಡೆದ ಭಾರೀ ವಿವಾದದ ನಂತರ ಪಕ್ಷಕ್ಕೆ ಮುಸ್ಲಿಂ ಬಾಹುಳ್ಯವಿರುವ ವಯನಾಡಿನಲ್ಲಿ ಅಲ್ಲದಿದ್ದರೂ ದೇಶದ ಇತರ ಭಾಗಗಳಲ್ಲಿ ಹೊಡೆತ ಬಿದ್ದ ಕಾರಣ ಕಾಂಗ್ರೆಸ್ ಮತ್ತು ಐಯುಎಂಎಲ್ ಕಾರ್ಯಕರ್ತರಿಗೆ ಧ್ವಜಗಳನ್ನು ರ್‍ಯಾಲಿಗೆ ತರದಂತೆ ಸೂಚನೆ ನೀಡಿರುವ ಸಾಧ್ಯತೆಯಿದೆ.

ವಿವಾದವನ್ನು ತಪ್ಪಿಸಲು ಕಾಂಗ್ರೆಸ್ ಈ ಬಾರಿ ಸುರಕ್ಷಿತ ಮಾರ್ಗವನ್ನು ಆರಿಸಿಕೊಂಡಿದ್ದರೂ, ಧ್ವಜಗಳು ಇಲ್ಲದೆ ಇದ್ದರೂ ಟೀಕೆಗಳನ್ನು ಎದುರಿಸಿದೆ. ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು ಎಂದು ಬಿಜೆಪಿಯ ನಾಯಕಿ ಸ್ಮೃತಿ ಇರಾನಿ ಹೇಳಿದ್ದಾರೆ. ” ಮುಸ್ಲಿಂ ಲೀಗ್ ಧ್ವಜಗಳನ್ನು ಮರೆಮಾಡಿರುವುದು ರಾಹುಲ್ ಗಾಂಧಿಗೆ ಮುಸ್ಲಿಂ ಲೀಗ್‌ನಿಂದ ಬೆಂಬಲ ಪಡೆಯಲು ನಾಚಿಕೆಯಾಗುತ್ತಿದೆ ಅಥವಾ ಉತ್ತರ ಭಾರತಕ್ಕೆ ಭೇಟಿ ನೀಡಿ ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಮುಸ್ಲಿಂ ಲೀಗ್ ಜತೆಗಿನ ಒಡನಾಟವನ್ನು ಮರೆಮಾಡಲು ಸಾಧ್ಯವಿಲ್ಲ ಎಂದು ಸೂಚಿಸುತ್ತದೆ.” ಎಂದು ವಯನಾಡಿನಲ್ಲಿ ಸ್ಮೃತಿ ಇರಾನಿ ಟೀಕಾ ಪ್ರಹಾರ ನಡೆಸಿದ್ದಾರೆ.

ವಯನಾಡಿನ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ನಾಮ ಪತ್ರ ಸಲ್ಲಿಕೆಗಾಗಿ ವಯನಾಡ್‌ಗೆ ಬಂದಿದ್ದ ಕೇಂದ್ರ ಸಚಿವೆ ಇರಾನಿ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಎಸ್‌ಡಿಪಿಐ, ನಿಷೇಧಿತ PFI ಬೆಂಬಲವನ್ನು ಪಡೆಯುತ್ತಿರುವುದನ್ನು ನೋಡಿ ಆಘಾತವಾಯಿತು. ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಡಿದ ಸಂವಿಧಾನದ ಪ್ರಮಾಣವನ್ನೂ ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಧೈರ್ಯವಿಲ್ಲ
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಟೀಕಾ ಪ್ರಹಾರ ನಡೆಸಿದ್ದು, ಪಕ್ಷದ ಧ್ವಜವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವ ಧೈರ್ಯವಿಲ್ಲ. ಕಾಂಗ್ರೆಸ್ ಕೋಮುವಾದಿ ಶಕ್ತಿಗಳಿಗೆ ಹೆದರುವ ಮಟ್ಟಕ್ಕೆ ಕುಸಿದಿದೆ. ಕಾಂಗ್ರೆಸ್‌ ಪಕ್ಷ ಐಯುಎಂಎಲ್‌ನ ಮತಗಳನ್ನು ಬಯಸುತ್ತದೆ ಆದರೆ ಅವರ ಧ್ವಜವನ್ನು ಅಂಗೀಕರಿಸುವುದಿಲ್ಲ ಎಂದು ಹೇಳಿದ್ದಾರೆ.

ಮುಸ್ಲಿಂ ಲೀಗ್ (IUML) ನ ಧ್ವಜಗಳನ್ನು ಪಾಕಿಸ್ಥಾನಿ ಧ್ವಜಗಳೆಂದು ತಿಳಿದು 2019 ರಲ್ಲಿ ದೊಡ್ಡ ವಿವಾದ ಭುಗಿಲೆದ್ದಿತ್ತು. ಇದು ವಯನಾಡ್ ಅಥವಾ ಕರಾಚಿ/ಲಾಹೋರ್?” ಎಂದು ಪ್ರಶ್ನಿಸಿದ್ದರು. ಐಯುಎಂಎಲ್ ಧ್ವಜಗಳ ಬಗ್ಗೆ ಬಿಜೆಪಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು. 2018 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿಯೂ ಕಾಂಗ್ರೆಸ್ ರ್‍ಯಾಲಿಯಲ್ಲಿ IUML ಧ್ವಜವನ್ನು ಪಾಕಿಸ್ಥಾನದ ಧ್ವಜ ಎಂದು ತಪ್ಪಾಗಿ ಗ್ರಹಿಸಲಾಗಿತ್ತು.

ಎಸ್‌ಡಿಪಿಐ ಬೆಂಬಲ ತಿರಸ್ಕರಿಸಿದ ಕಾಂಗ್ರೆಸ್‌

ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ದ ರಾಜಕೀಯ ಅಂಗಸಂಸ್ಥೆ ಎಸ್‌ಡಿಪಿಐ ಬೆಂಬಲದ ಕೊಡುಗೆಯನ್ನು ಕಾಂಗ್ರೆಸ್‌ ಗುರುವಾರ ತಿರಸ್ಕರಿಸಿದೆ.

ಬಹುಸಂಖ್ಯಾಕ ಹಾಗೂ ಅಲ್ಪ ಸಂಖ್ಯಾಕ ಕೋಮುವಾದಗಳೆರಡನ್ನೂ ಕಾಂಗ್ರೆಸ್‌ ಪಕ್ಷವು ವಿರೋಧಿಸುತ್ತದೆ. ಕೋಮುವಾದಿಗಳ ಬೆಂಬಲ ನಮಗೆ ಬೇಕಾಗಿಲ್ಲ. ಅದು ಎಸ್‌ಡಿಪಿಐಗೂ ಅನ್ವಯಿಸುತ್ತದೆ ಎಂದು ಕೇರಳ ಪ್ರದೇಶ ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.